AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳಿಗೆ ಮನುಷ್ಯತ್ವವೇ ಇಲ್ವಾ? ಕ್ವಾರಂಟೈನಿಗಳಿಗೆ ಹಳಸಿದ ಅನ್ನ ನೀಡೋದಾ..

ಬಾಗಲಕೋಟೆ: ರಾಜ್ಯ ಸರ್ಕಾರ ಕೊರೊನಾ ವಿರುದ್ಧ ಇನ್ನಿಲ್ಲದ ಹೋರಾಟ ಮಾಡ್ತಿದ್ರೆ, ಬಾಗಲಕೋಟೆಯ ಕ್ವಾರಂಟೈನ್‌ ಕೇಂದ್ರದಲ್ಲಿ ಅಧಿಕಾರಿಗಳು ಮಾನವಿಯತೇಯನ್ನೇ ಮರೆತು ಕ್ವಾರಂಟೈನ್‌ನಲ್ಲಿರೋರಿಗೆ ಹಳಸಿದ ಅನ್ನ ನೀಡಿದ ಅಮಾನವೀಯ ಘಟನೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮೂಗನೂರಿನ 30ಗ್ರಾಮಸ್ಥರನ್ನ ಹುನಗುಂದ ಪಟ್ಟಣದ ಆರ್‌ಎಮ್‌ಎಸ್‌ಎ ಶಾಲೆಯ ಕ್ವಾರಂಟೈನ್‌ ಕೇಂದ್ರಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದ್ರೆ ಇಲ್ಲಿನ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರೋರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ನೀಡುತ್ತಿಲ್ಲ. ಪ್ರತಿ ದಿನವೂ ಮಧ್ಯಾಹ್ನದ ಊಟವನ್ನ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ನೀಡುತ್ತಿದ್ದಾರೆ. ಹಳಸಿದ ಅನ್ನಕ್ಕೆ […]

ಅಧಿಕಾರಿಗಳಿಗೆ ಮನುಷ್ಯತ್ವವೇ ಇಲ್ವಾ? ಕ್ವಾರಂಟೈನಿಗಳಿಗೆ ಹಳಸಿದ ಅನ್ನ ನೀಡೋದಾ..
Guru
| Edited By: |

Updated on:Jul 07, 2020 | 12:15 PM

Share

ಬಾಗಲಕೋಟೆ: ರಾಜ್ಯ ಸರ್ಕಾರ ಕೊರೊನಾ ವಿರುದ್ಧ ಇನ್ನಿಲ್ಲದ ಹೋರಾಟ ಮಾಡ್ತಿದ್ರೆ, ಬಾಗಲಕೋಟೆಯ ಕ್ವಾರಂಟೈನ್‌ ಕೇಂದ್ರದಲ್ಲಿ ಅಧಿಕಾರಿಗಳು ಮಾನವಿಯತೇಯನ್ನೇ ಮರೆತು ಕ್ವಾರಂಟೈನ್‌ನಲ್ಲಿರೋರಿಗೆ ಹಳಸಿದ ಅನ್ನ ನೀಡಿದ ಅಮಾನವೀಯ ಘಟನೆ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮೂಗನೂರಿನ 30ಗ್ರಾಮಸ್ಥರನ್ನ ಹುನಗುಂದ ಪಟ್ಟಣದ ಆರ್‌ಎಮ್‌ಎಸ್‌ಎ ಶಾಲೆಯ ಕ್ವಾರಂಟೈನ್‌ ಕೇಂದ್ರಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದ್ರೆ ಇಲ್ಲಿನ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರೋರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ನೀಡುತ್ತಿಲ್ಲ. ಪ್ರತಿ ದಿನವೂ ಮಧ್ಯಾಹ್ನದ ಊಟವನ್ನ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ನೀಡುತ್ತಿದ್ದಾರೆ.

ಹಳಸಿದ ಅನ್ನಕ್ಕೆ ವಗ್ಗರಣೆ ಇದಲ್ಲೆಕ್ಕಿಂತಲೂ ಹೇಯ ಕೃತ್ಯ ಅಂದ್ರೆ ಇಲ್ಲಿನ ಜನರಿಗೆ ಅಧಿಕಾರಿಗಳು ಹಳಸಿದ ಅನ್ನವನ್ನ ನೀಡುತ್ತಿರೋದು. ಹಳಸಿದ ಅನ್ನಕ್ಕೆ ವಗ್ಗರಣೆ ಹಾಕಿ ಅದನ್ನೇ ಕ್ವಾರಂಟೈನಿಗಳಿಗೆ ತಿನ್ನಲು ಕೊಡುತ್ತಿದ್ದಾರೆ. ಬೇರೆ ದಾರಿ ಕಾಣದೆ ಹಸಿವಿನಿಂದ ಅನಿವಾರ್ಯವಾಗಿ ಗ್ರಾಮಸ್ಥರು ಇದೇ ಹಳಸಿದ ಅನ್ನವನ್ನೇ ತಿನ್ನುತ್ತಿದ್ದಾರೆ. ಇನ್ನು ತಹಸಿಲ್ದಾರ್‌ ಅವರಂತೂ ಒಮ್ಮೆಯೂ ಇತ್ತ ಬಂದಿಲ್ಲ ಇದು ಕ್ವಾರಂಟೈನ್‌ನಲ್ಲಿರೋರಿಗೆ ಆಕ್ರೋಶ ತರಿಸಿದೆ.

Published On - 11:58 am, Tue, 7 July 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು