ಸೋಂಕಿನಿಂದ ಪತಿ ಆಸ್ಪತ್ರೆಯಲ್ಲಿ ಸಾವು, ಸುದ್ದಿ ತಿಳಿದ ಮಡದಿ ಮನೆಯಲ್ಲಿ ಕೊನೆಯುಸಿರು, ಎಲ್ಲಿ?

ಮೈಸೂರು: ಸೋಂಕಿನಿಂದ ನಿವೃತ್ತ ASIಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸುದ್ದಿ ಕೇಳಿ ಅವರ ಪತ್ನಿಯು ಸಹ ಮನೆಯಲ್ಲಿ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಗರದ ಉತ್ತನಹಳ್ಳಿಯಲ್ಲಿ ಇಂದು ನಡೆದಿದೆ. ಕೊರೊನಾ ಪಾಸಿಟಿವ್ ಬಂಧ ನಂತರ ನಿವೃತ್ತ ASIರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ನಡುವೆ ವೃದ್ಧನ ಪತ್ನಿಗೂ ಸೋಂಕು ದೃಢಪಟ್ಟಿದ್ದು ಆಕೆಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ವೃದ್ಧ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ವಿಚಾರ ತಿಳಿದ ಅವರ ಸೋಂಕಿತ ಮಡದಿಯೂ ದುಃಖದಿಂದ ಮನೆಯಲ್ಲಿ […]

ಸೋಂಕಿನಿಂದ ಪತಿ ಆಸ್ಪತ್ರೆಯಲ್ಲಿ ಸಾವು, ಸುದ್ದಿ ತಿಳಿದ ಮಡದಿ ಮನೆಯಲ್ಲಿ ಕೊನೆಯುಸಿರು, ಎಲ್ಲಿ?
ಮೈಸೂರು
Edited By:

Updated on: Jul 23, 2020 | 11:43 AM

ಮೈಸೂರು: ಸೋಂಕಿನಿಂದ ನಿವೃತ್ತ ASIಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸುದ್ದಿ ಕೇಳಿ ಅವರ ಪತ್ನಿಯು ಸಹ ಮನೆಯಲ್ಲಿ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಗರದ ಉತ್ತನಹಳ್ಳಿಯಲ್ಲಿ ಇಂದು ನಡೆದಿದೆ.

ಕೊರೊನಾ ಪಾಸಿಟಿವ್ ಬಂಧ ನಂತರ ನಿವೃತ್ತ ASIರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ನಡುವೆ ವೃದ್ಧನ ಪತ್ನಿಗೂ ಸೋಂಕು ದೃಢಪಟ್ಟಿದ್ದು ಆಕೆಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ವೃದ್ಧ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ವಿಚಾರ ತಿಳಿದ ಅವರ ಸೋಂಕಿತ ಮಡದಿಯೂ ದುಃಖದಿಂದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸರ್ಕಾರದ ನಿಯಮದಂತೆ ವೃದ್ಧ ದಂಪತಿಯ ಅಂತ್ಯಕ್ರಿಯೆಯನ್ನು ವಿಜಯನಗರದ ‌ಮುಕ್ತಿಧಾಮದಲ್ಲಿ ನೆರೆವೇರಿಸಲಾಗಿದೆ. ಇದೀಗ, ವೃದ್ಧ ದಂಪತಿಯ ಸಾವಿನಿಂದಾಗಿ ಉತ್ತನಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

Published On - 7:29 pm, Tue, 21 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us