AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

2 ವರ್ಷಗಳ ಹಿಂದೆ ವ್ಯಾಪಾರಿಯೊಬ್ಬರ ಬಳಿ 35 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರಿಂದ ನಾಲ್ವರ ಬಂಧನವಾಗಿದೆ.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!
2 ವರ್ಷಗಳ ಹಿಂದೆ ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​
KUSHAL V
|

Updated on: Jan 24, 2021 | 5:47 PM

Share

ಹುಬ್ಬಳ್ಳಿ: 2 ವರ್ಷಗಳ ಹಿಂದೆ ವ್ಯಾಪಾರಿಯೊಬ್ಬರ ಬಳಿ 35 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರಿಂದ ನಾಲ್ವರ ಬಂಧನವಾಗಿದೆ. ಬಂಧಿತರನ್ನು ಇಸಾಕ್ ಸುತಾರ್, ದಾದಾಪೀರ್ ನದಾಫ್, ಖಾಜಾ ದುಕಾಂದರ್ ಹಾಗೂ ಆಸಿಫ್ ಬಂಕಾಪುರ್ ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ? ಆರೋಪಿಗಳು ಸುಮಾರು 2 ವರ್ಷಗಳ ಹಿಂದೆ ಶಿರಸಿಯ ಅಡಕೆ ವ್ಯಾಪಾರಿಗೆ ಸೇರಿದ್ದ 35 ಲಕ್ಷ ರೂಪಾಯಿ ನಗದನ್ನು ದೋಚಿದ್ರು. ನಗರದ ದುರ್ಗದ ಬೈಲನಲ್ಲಿರುವ ವ್ಯಾಪಾರಿಯೊಬ್ಬರಿಂದ ಹಣ ಪಡೆದು ಶಿರಸಿಯ ಅಡಿಕೆ ವ್ಯಾಪಾರಿಯ ನೌಕರ ರಜಾಕ್​ ಬಸ್​ನಲ್ಲಿ ತನ್ನ ಊರಿಗೆ ತೆರಳುತ್ತಿದ್ದರು. ಈ ವೇಳೆ, ದರೋಡೆಕೋರರು ನಗರದ ಹೊರವಲಯದ ಕಾರವಾರ ರಸ್ತೆಯಲ್ಲಿ ಬಸ್​ನ ಅಡ್ಡಗಟ್ಟಿ ಸಿನಿಮೀಯ ಸ್ಟೈಲ್​ನಲ್ಲಿ ರಜಾಕ್​ನಿಂದ ಹಣವಿದ್ದ ಬ್ಯಾಗ್ ಕಸಿದು ಪರಾರಿಯಾಗಿದ್ದರು.

ಈ ಕುರಿತು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ, ಹಳೇ ಹುಬ್ಬಳ್ಳಿ ಠಾಣೆಯ ಇನ್​ಸ್ಪೆಕ್ಟರ್​ ಕಮತರ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರ ಶೋಧಕಾರ್ಯ ನಡೆಸುತ್ತಿದ್ದಾರೆ.

ಈಜಲು ಹೋಗುತ್ತೇನೆ ಎಂದು ನಿನ್ನೆ ಮನೆಯಿಂದ ತೆರಳಿದ್ದ ಬಾಲಕ.. ಇಂದು ಕೆರೆಯಲ್ಲಿ ಶವವಾಗಿ ಪತ್ತೆ

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ