AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದುರು ಮನೆಯವನನ್ನು ನಂಬಿ ಮೋಸ ಹೋದ ವೃದ್ಧೆಗೀಗ ಆಸ್ಪತ್ರೆಗೆ ಹೋಗಲೂ ಹಣವಿಲ್ಲ

ನವೀದಾ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪರದಾಡುತ್ತಿದ್ದಾರೆ.

ಎದುರು ಮನೆಯವನನ್ನು ನಂಬಿ ಮೋಸ ಹೋದ ವೃದ್ಧೆಗೀಗ ಆಸ್ಪತ್ರೆಗೆ ಹೋಗಲೂ ಹಣವಿಲ್ಲ
ವೃದ್ಧೆ ನವೀದಾ ಬೇಗಂ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 01, 2020 | 5:02 PM

Share

ದಾವಣಗೆರೆ: ಇಲ್ಲೊಬ್ಬರು ವೃದ್ಧೆ ಎದುರು ಮನೆಯವನನ್ನು ನಂಬಿ ಮೋಸ ಹೋಗಿದ್ದಾರೆ. ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಬಾಷಾನಗರದ ಮಿಲತ್​ ಕಾಲನಿಯಲ್ಲಿ ಘಟನೆ ನಡೆದಿದ್ದು, ವೃದ್ಧೆ ನವಿದಾ ಬೇಗಂ ಮೋಸ ಹೋದವರು. ತಮ್ಮನ್ನು ಫಯಾಜ್​ ಪಾಷಾ ವಂಚಿಸಿದ್ದಾನೆಂದು ಆರೋಪ ಮಾಡಿದ್ದಾರೆ.

ಪಾಷಾ ಮೊದಲು ಚಿಕ್ಕಪುಟ್ಟ ಸಹಾಯ ಮಾಡಿ ವೃದ್ಧೆಯ ನಂಬಿಕೆ ಗಳಿಸಿದ್ದ. ಆತನನ್ನು ನಂಬಿದ್ದ ನವಿದಾ ಬೇಗಂ ಚೆಕ್​ ಕೊಟ್ಟು ಹಣ ಡ್ರಾ ಮಾಡಿಕೊಡಲು ಹೇಳಿದ್ದರು. ಅದರಂತೆ ಪಾಷಾ 20,000 ರೂಪಾಯಿ ಬ್ಯಾಂಕ್​ನಿಂದ ತಂದುಕೊಟ್ಟಿದ್ದ. ಆದರೆ ನಂತರ ವೃದ್ಧೆಯ ಬಳಿ ಹೋಗಿ, ಚೆಕ್​ನಲ್ಲಿ ಏನೋ ತಪ್ಪಾಗಿದೆ ಎಂದು ಹೇಳಿ ಇನ್ನೊಂದು ಚೆಕ್​ ಪಡೆದುಕೊಂಡಿದ್ದ. ಆ ಚೆಕ್​​ ಮೂಲಕ 12 ಲಕ್ಷ ರೂಪಾಯಿ ಎಗರಿಸಿದ್ದಾನೆ ಎಂದು ನವೀದಾ ಆರೋಪ ಮಾಡಿದ್ದಾರೆ.

ನವೀದಾ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪರದಾಡುತ್ತಿದ್ದಾರೆ. ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಸು-ಎಮ್ಮೆಗಳ ಕಳ್ಳತನಕ್ಕೆ ಕಂಗೆಟ್ಟ ಕಲಬುರಗಿ ರೈತರು

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ