
ಚಿತ್ರದುರ್ಗ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಬಳಿ ಶಿಫ್ಟ್ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ನಿವಾಸಿ ಪಾಲಯ್ಯ(35) ಮೃತ ದುರ್ದೈವಿ.
ಕುಡಿದ ಅಮಲಿನಲ್ಲಿ ವೇಗವಾಗಿ ಚಲಾಯಿಸಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೂ ಗಾಯಗಳಾಗಿದ್ದು, ಚಿತ್ರದುರ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
Published On - 6:39 pm, Wed, 6 May 20