AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ? ಸುಪ್ರೀಂ ಕೋರ್ಟ್​ನವರೇ ಆ 3ಕಾಯ್ದೆಗಳಿಗೆ ಸ್ಟೇ ಕೊಟ್ಟಿದ್ದಾರೆ. ಆ ಕಾಯ್ದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಸಿದ್ದರಾಮಯ್ಯ ಹೇಳಿದರು.

60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
KUSHAL V
|

Updated on: Jan 26, 2021 | 4:33 PM

Share

ಬೀದರ್: ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಎಂದು ಜಿಲ್ಲೆಯ ಹುಮ್ನಾಬಾದ್​ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರೈತರು ತಮ್ಮ ಹೋರಾಟದ ಬಗ್ಗೆ ಮೊದಲೇ ಸೂಚನೆ ನೀಡಿದ್ದರು. ಹಾಗಾಗಿ, ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಜನರ ಮೂಲಭೂತ ಹಕ್ಕು ಎಂದು ಸಿದ್ದರಾಮಯ್ಯ ಹೇಳಿದರು.

2 ತಿಂಗಳಿನಿಂದ ರೈತರ ಪ್ರತಿಭಟನೆ ನಡೆಯುತ್ತಿದೆ. ರೈತರ ಸಮಸ್ಯೆ ಇವತ್ತಿನವರೆಗೂ ಬಗೆಹರಿದಿಲ್ಲ. 11 ಸುತ್ತಿನ ಮಾತುಕತೆ ನಡೆದಿದೆ. ಕೇಂದ್ರದವರು ಕಾಟಾಚಾರಕ್ಕೆ ಮಾತುಕತೆಗೆ ಕರೆದಿದ್ದರು. 60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ? ಸುಪ್ರೀಂ ಕೋರ್ಟ್​ನವರೇ ಆ 3ಕಾಯ್ದೆಗಳಿಗೆ ಸ್ಟೇ ಕೊಟ್ಟಿದ್ದಾರೆ. ಆ ಕಾಯ್ದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಸಿದ್ದರಾಮಯ್ಯ ಹೇಳಿದರು.

‘ಮೋದಿ ಹಠ ಮಾಡ್ತಿದಾರೆ, ಅಧಿಕಾರ ಅವರ ನೆತ್ತಿಗೇರಿದೆ’ ಮೋದಿ ಹಠ ಮಾಡ್ತಿದಾರೆ, ಅಧಿಕಾರ ಅವರ ನೆತ್ತಿಗೇರಿದೆ. ಇದು ಸರ್ವಾಧಿಕಾರದ ಲಕ್ಷಣ. ಸೈನ್ಯ ಮತ್ತು ಪೊಲೀಸರ ಮೂಲಕ ರೈತರ ಚಳುವಳಿ ಹತ್ತಿಕ್ಕುವುದನ್ನು ಜನ ಸಹಿಸುವುದಿಲ್ಲ. ಬಿಜೆಪಿಯವರಿಗೆ ಇದು ತಿರುಗುಬಾಣವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

‘ಬಿ.ಸಿ ಪಾಟೀಲ್​ನಂತವರು ಸಚಿವರಾಗಿರುವುದು ಈ ದೇಶದ ದುರ್ದೈವ’ ಪ್ರತಿಭಟನಾಕಾರರು ಭಯೋತ್ಪಾದಕರು, ಕಾಂಗ್ರೆಸ್​ನವರು ಎಂಬ ಸಚಿವ ಬಿ.ಸಿ ಪಾಟೀಲ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಸಂವಿಧಾನ ಗೊತ್ತಿಲ್ಲದವರು ಈ ಥರ ಮಾತನಾಡುತ್ತಾರೆ. ಬಿ.ಸಿ. ಪಾಟೀಲ್​ನಂತವರು ಸಚಿವರಾಗಿರುವುದು ಈ ದೇಶದ ದುರ್ದೈವ. ಸಚಿವ ಬಿ.ಸಿ ಪಾಟೀಲ್ ಸಂವಿಧಾನ ಓದಿಕೊಳ್ಳಲಿ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದರು.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!