AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Artificial insemination: ಕೆಲವರು ಶೋಕಿಗೊಸ್ಕರ ಕೃತಕ ಗರ್ಭಧಾರಣೆ ಅವಕಾಶ ದುರುಪಯೋಗ ಪಡಿಸಿಕೊಳ್ತಿದ್ದಾರೆ – ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ವಿಷಾದ

ವಿಶ್ವ ಜನಸಂಖ್ಯೆ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಮದುವೆಯೆ ಇಲ್ಲದೆ ಕೆಲವರು ಮಕ್ಕಳನ್ನು ಪಡೆಯುತ್ತಿದ್ದಾರೆ. ಮದುವೆಯಾದ ಕೆಲವೆ ದಿನಗಳಲ್ಲಿ ಕೆಲವರು ಹೆರಿಗೆ ಮಾಡಿಸಿಕೊಳ್ತಿದ್ದಾರೆ. ಮದುವೆಯಾಗಿ ತಾಯಿಯಾದರೆ ದೇಹದ ಸೌದರ್ಯ ಹಾಳಾಗುತ್ತೆ ಅನ್ನುವುದು ತಪ್ಪು ಎಂದು ಅವರು ವ್ಯಾಖ್ಯಾನಿಸಿದ್ದಾರೆ.

Artificial insemination: ಕೆಲವರು ಶೋಕಿಗೊಸ್ಕರ ಕೃತಕ ಗರ್ಭಧಾರಣೆ ಅವಕಾಶ ದುರುಪಯೋಗ ಪಡಿಸಿಕೊಳ್ತಿದ್ದಾರೆ - ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ವಿಷಾದ
ಕೆಲವರು ಶೋಕಿಗೊಸ್ಕರ ಕೃತಕ ಗರ್ಭಧಾರಣೆ ಅವಕಾಶ ದುರುಪಯೋಗ ಪಡಿಸಿಕೊಳ್ತಿದ್ದಾರೆ - ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ವಿಷಾದ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 08, 2023 | 3:40 PM

Share

ಚಿಕ್ಕಬಳ್ಳಾಪುರ: ಕೆಲವರ ಶೋಕಿಗೊಸ್ಕರ ಕೃತಕ ಗರ್ಭಧಾರಣೆ (Artificial insemination) ಅವಕಾಶ ದುರುಪಯೋಗ ಆಗ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ (Chintamani) ನಗರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (Dr MC Sudhakar) ವಿಷಾದ ವ್ಯಕ್ತಪಡಿಸಿದ್ದಾರೆ. ವಿಶ್ವ ಜನಸಂಖ್ಯೆ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಮದುವೆಯೆ ಇಲ್ಲದೆ ಕೆಲವರು ಮಕ್ಕಳನ್ನು ಪಡೆಯುತ್ತಿದ್ದಾರೆ. ಮದುವೆಯಾದ ಕೆಲವೆ ದಿನಗಳಲ್ಲಿ ಕೆಲವರು ಹೆರಿಗೆ ಮಾಡಿಸಿಕೊಳ್ತಿದ್ದಾರೆ. ಮದುವೆಯಾಗಿ ತಾಯಿಯಾದರೆ ದೇಹದ ಸೌದರ್ಯ ಹಾಳಾಗುತ್ತೆ ಅನ್ನುವುದು ತಪ್ಪು ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಗೋಳಿಸುವ ಮುನ್ಸೂಚನೆ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಮಾತನಾಡಿದ ಅವರು ಎನ್.ಇ.ಪಿ ಬದಲು ಕೌಶಲ್ಯಾಧರಿತ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ದೇಶದಲ್ಲಿ ಎಷ್ಟು ರಾಜ್ಯಗಳಲ್ಲಿ ಎನ್.ಇ.ಪಿ ಜಾರಿಗೋಲಿಸಲಾಗಿದೆ. ಇಡಿ ದೇಶದಲ್ಲಿ ಕೇವಲ ಮೂರು ರಾಜ್ಯಗಳಲ್ಲಿ ಮಾತ್ರ ಎನ್.ಇ.ಪಿ ಜಾರಿ ಆಗಿದೆ. ಬಿಜೆಪಿ ಆಡಳಿತ ಇರುವ ಇನ್ನಿತರ ರಾಜ್ಯಗಳಲ್ಲಿ ಎನ್.ಇ.ಪಿ. ಜಾರಿ ಮಾಡಿಲ್ಲವೆಂದು ಅವರು ಹೇಳಿದರು.

ಎರಡೂವರೆ ಲಕ್ಷ ಉದ್ಯೋಗಗಳು ಖಾಲಿ ಇವೆ, ಹಂತ ಹಂತವಾಗಿ ಭರ್ತಿಗೆ ಕ್ರಮ- ಸುಧಾಕರ್

ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಲ್ಲಿ ಎರಡೂವರೆ ಲಕ್ಷ ಉದ್ಯೋಗಗಳು ಖಾಲಿ ಇವೆ. ಹಂತ ಹಂತವಾಗಿ ಖಾಲಿ ಉದ್ಯೋಗಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ವಿವಿಗಳು ಹಾಗೂ ತಾಂತ್ರಿಕ ಶಿಕ್ಷಣ ವಿಭಾಗದಲ್ಲಿ ಉದ್ಯೋಗಗಳು ಖಾಲಿ ಇವೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಈಗ ಕ್ರಮ ಕೈಗೊಳ್ಳಲಾಗಿದೆ. ಅತಿಥಿ ಉಪನ್ಯಾಸಕರುಗಳ ಮೂಲಕ ಎಲ್ಲಾ ವಿವಿಗಳಲ್ಲಿ ಉಪನ್ಯಾಸ ಮಾಡಿಸಲಾಗ್ತಿದೆ ಎಂದು ತಿಳಿಸಿದರು.

ಚಿಂತಾಮಣಿ ಕುರಿತಾದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 3:20 pm, Sat, 8 July 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್