AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ಸಾಗಿಸ್ತಿದ್ದ ಸುಮಾರು 50 ಕೋತಿಗಳ ರಕ್ಷಣೆ, ಎಲ್ಲಿ?

ಮಂಡ್ಯ:ಆಟೋದಲ್ಲಿ ಸಾಗಿಸುತ್ತಿದ್ದ ಸುಮಾರು 50 ಕ್ಕೂ ಹೆಚ್ಚು ಕೋತಿಗಳನ್ನ ರಕ್ಷಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆರೆತೊಣ್ಣುರು ಗ್ರಾಮದ ಬಳಿ ನಡೆದಿದೆ. ಗೂಡ್ಸ್ ಆಟೋವೊಂದರಲ್ಲಿ ಕೋತಿಗಳನ್ನ ಬೋನ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದನ್ನ ಗಮನಿಸಿದ ಸ್ಥಳೀಯರು, ಅನುಮಾನಗೊಂಡು ಹೋಗಿ ಆಟೋವನ್ನ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಹಿಂದೆ ಪಾಂಡವಪುರ ತಾಲೂಕಿನಲ್ಲಿ ಕೆರೆತಣ್ಣೂರಿನ ಗ್ರಾಮದ ಬಳಿಯಲ್ಲೇ 50 ಕ್ಕೂ ಹೆಚ್ಚು ಕೋತಿಗಳಿಗೆ ವಿಷ ಹಾಕಿ ಕೊಂದಿದ್ದ ಪ್ರಕರಣ ನಡೆದಿತ್ತು. ಈಗ ಗೂಡ್ಸ್ ಆಟೋದಲ್ಲಿ ಕೋತಿಗಳನ್ನ […]

ಆಟೋದಲ್ಲಿ ಸಾಗಿಸ್ತಿದ್ದ ಸುಮಾರು 50 ಕೋತಿಗಳ ರಕ್ಷಣೆ, ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 30, 2020 | 3:58 PM

Share

ಮಂಡ್ಯ:ಆಟೋದಲ್ಲಿ ಸಾಗಿಸುತ್ತಿದ್ದ ಸುಮಾರು 50 ಕ್ಕೂ ಹೆಚ್ಚು ಕೋತಿಗಳನ್ನ ರಕ್ಷಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆರೆತೊಣ್ಣುರು ಗ್ರಾಮದ ಬಳಿ ನಡೆದಿದೆ.

ಗೂಡ್ಸ್ ಆಟೋವೊಂದರಲ್ಲಿ ಕೋತಿಗಳನ್ನ ಬೋನ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದನ್ನ ಗಮನಿಸಿದ ಸ್ಥಳೀಯರು, ಅನುಮಾನಗೊಂಡು ಹೋಗಿ ಆಟೋವನ್ನ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಹಿಂದೆ ಪಾಂಡವಪುರ ತಾಲೂಕಿನಲ್ಲಿ ಕೆರೆತಣ್ಣೂರಿನ ಗ್ರಾಮದ ಬಳಿಯಲ್ಲೇ 50 ಕ್ಕೂ ಹೆಚ್ಚು ಕೋತಿಗಳಿಗೆ ವಿಷ ಹಾಕಿ ಕೊಂದಿದ್ದ ಪ್ರಕರಣ ನಡೆದಿತ್ತು.

ಈಗ ಗೂಡ್ಸ್ ಆಟೋದಲ್ಲಿ ಕೋತಿಗಳನ್ನ ಸಾಗಿಸುತ್ತಿದ್ದನ್ನ ಗಮನಿಸಿದರೆ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಮತ್ತೊಂದು ಪ್ರಕರಣ ಮರುಕುಳಿಸುವುದರಲ್ಲಿತ್ತಾ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಕೋತಿಗಳ ಸಾಗಾಣಿಕೆ ಬಗೆಗೆ ಆಟೋಚಾಲಕನನ್ನ ವಿಚಾರಿಸಿದರೆ ಮೈಸೂರಿನ ಉದಯಗಿರಿಯ ಅಪಾರ್ಟ್ಮೆಂಟ್ ಒಂದರಲ್ಲಿ ಕೋತಿಗಳ ಹಾವಳಿ ತಪ್ಪಿಸಿಕೊಳ್ಳಲು ಅವುಗಳನ್ನು ಹಿಡಿಸಲಾಗಿತ್ತು ಎನ್ನಲಾಗಿದೆ‌.

ಹೀಗೆ ಹಿಡಿದ ಕೋತಿಗಳನ್ನು ಪಾಂಡವಪುರ ತಾಲೂಕಿನ‌ ಮೇಲುಕೋಟೆ ಅರಣ್ಯಕ್ಕೆ ಬಿಡಲು ಆಟೋದಲ್ಲಿ ತರಲಾಗುತ್ತಿತ್ತು ಎಂದು ಆಟೋ ಚಾಲಕ ತಿಳಿಸಿದ್ದಾನೆ. ಆದ್ರೆ ಇದಕ್ಕೆ ಸಂಬಂಧ ಪಟ್ಟ ಯಾವುದೇ ದಾಖಲೆ ಆಟೋ ಚಾಲಕನ ಬಳಿ ಇಲ್ಲದ ಕಾರಣಕ್ಕೆ ಆಟೋ ಸಮೇತ ಚಾಲಕನನ್ನು ಪಾಂಡವಪುರ ವಲಯ ಅರಣ್ಯ ಇಲಾಖೆ ಅಧಿಕಾರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಅಕ್ರಮವೆಂದು ಕಂಡು ಬಂದರೆ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?