AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ಸಾಗಿಸ್ತಿದ್ದ ಸುಮಾರು 50 ಕೋತಿಗಳ ರಕ್ಷಣೆ, ಎಲ್ಲಿ?

ಮಂಡ್ಯ:ಆಟೋದಲ್ಲಿ ಸಾಗಿಸುತ್ತಿದ್ದ ಸುಮಾರು 50 ಕ್ಕೂ ಹೆಚ್ಚು ಕೋತಿಗಳನ್ನ ರಕ್ಷಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆರೆತೊಣ್ಣುರು ಗ್ರಾಮದ ಬಳಿ ನಡೆದಿದೆ. ಗೂಡ್ಸ್ ಆಟೋವೊಂದರಲ್ಲಿ ಕೋತಿಗಳನ್ನ ಬೋನ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದನ್ನ ಗಮನಿಸಿದ ಸ್ಥಳೀಯರು, ಅನುಮಾನಗೊಂಡು ಹೋಗಿ ಆಟೋವನ್ನ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಹಿಂದೆ ಪಾಂಡವಪುರ ತಾಲೂಕಿನಲ್ಲಿ ಕೆರೆತಣ್ಣೂರಿನ ಗ್ರಾಮದ ಬಳಿಯಲ್ಲೇ 50 ಕ್ಕೂ ಹೆಚ್ಚು ಕೋತಿಗಳಿಗೆ ವಿಷ ಹಾಕಿ ಕೊಂದಿದ್ದ ಪ್ರಕರಣ ನಡೆದಿತ್ತು. ಈಗ ಗೂಡ್ಸ್ ಆಟೋದಲ್ಲಿ ಕೋತಿಗಳನ್ನ […]

ಆಟೋದಲ್ಲಿ ಸಾಗಿಸ್ತಿದ್ದ ಸುಮಾರು 50 ಕೋತಿಗಳ ರಕ್ಷಣೆ, ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 30, 2020 | 3:58 PM

Share

ಮಂಡ್ಯ:ಆಟೋದಲ್ಲಿ ಸಾಗಿಸುತ್ತಿದ್ದ ಸುಮಾರು 50 ಕ್ಕೂ ಹೆಚ್ಚು ಕೋತಿಗಳನ್ನ ರಕ್ಷಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆರೆತೊಣ್ಣುರು ಗ್ರಾಮದ ಬಳಿ ನಡೆದಿದೆ.

ಗೂಡ್ಸ್ ಆಟೋವೊಂದರಲ್ಲಿ ಕೋತಿಗಳನ್ನ ಬೋನ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದನ್ನ ಗಮನಿಸಿದ ಸ್ಥಳೀಯರು, ಅನುಮಾನಗೊಂಡು ಹೋಗಿ ಆಟೋವನ್ನ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಹಿಂದೆ ಪಾಂಡವಪುರ ತಾಲೂಕಿನಲ್ಲಿ ಕೆರೆತಣ್ಣೂರಿನ ಗ್ರಾಮದ ಬಳಿಯಲ್ಲೇ 50 ಕ್ಕೂ ಹೆಚ್ಚು ಕೋತಿಗಳಿಗೆ ವಿಷ ಹಾಕಿ ಕೊಂದಿದ್ದ ಪ್ರಕರಣ ನಡೆದಿತ್ತು.

ಈಗ ಗೂಡ್ಸ್ ಆಟೋದಲ್ಲಿ ಕೋತಿಗಳನ್ನ ಸಾಗಿಸುತ್ತಿದ್ದನ್ನ ಗಮನಿಸಿದರೆ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಮತ್ತೊಂದು ಪ್ರಕರಣ ಮರುಕುಳಿಸುವುದರಲ್ಲಿತ್ತಾ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಕೋತಿಗಳ ಸಾಗಾಣಿಕೆ ಬಗೆಗೆ ಆಟೋಚಾಲಕನನ್ನ ವಿಚಾರಿಸಿದರೆ ಮೈಸೂರಿನ ಉದಯಗಿರಿಯ ಅಪಾರ್ಟ್ಮೆಂಟ್ ಒಂದರಲ್ಲಿ ಕೋತಿಗಳ ಹಾವಳಿ ತಪ್ಪಿಸಿಕೊಳ್ಳಲು ಅವುಗಳನ್ನು ಹಿಡಿಸಲಾಗಿತ್ತು ಎನ್ನಲಾಗಿದೆ‌.

ಹೀಗೆ ಹಿಡಿದ ಕೋತಿಗಳನ್ನು ಪಾಂಡವಪುರ ತಾಲೂಕಿನ‌ ಮೇಲುಕೋಟೆ ಅರಣ್ಯಕ್ಕೆ ಬಿಡಲು ಆಟೋದಲ್ಲಿ ತರಲಾಗುತ್ತಿತ್ತು ಎಂದು ಆಟೋ ಚಾಲಕ ತಿಳಿಸಿದ್ದಾನೆ. ಆದ್ರೆ ಇದಕ್ಕೆ ಸಂಬಂಧ ಪಟ್ಟ ಯಾವುದೇ ದಾಖಲೆ ಆಟೋ ಚಾಲಕನ ಬಳಿ ಇಲ್ಲದ ಕಾರಣಕ್ಕೆ ಆಟೋ ಸಮೇತ ಚಾಲಕನನ್ನು ಪಾಂಡವಪುರ ವಲಯ ಅರಣ್ಯ ಇಲಾಖೆ ಅಧಿಕಾರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಅಕ್ರಮವೆಂದು ಕಂಡು ಬಂದರೆ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

Follow Us
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ