ಕೋವಿಡ್ ಆಸ್ಪತ್ರೆಯಿಂದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಡಿಸ್ಚಾರ್ಜ್

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನಿಂದ ಐಸೋಲೇಷನ್ ವಾರ್ಡ್ ಸೇರಿದ್ದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈರಸ್ ಅಟ್ಯಾಕ್ ಆಗಿದ್ದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ದಾಖಲಾಗಿದ್ದರು. ಕೊರೊನಾ ಸೋಂಕು ತಗುಲಿದ ಕಾರಣ 7 ದಿನದ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಕಾರ್ಪೊರೇಟರ್ ಇಮ್ರಾನ್ ಪಾಷಾ ದಾಖಲಾಗಿದ್ದರು. ಇದೀಗ ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು, ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಮ್ರಾನ್ ಪಾಷಾ ಅದ್ಧೂರಿ ಸ್ವಾಗತಕ್ಕೆ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಸಾಮಾಜಿಕ ಅಂತರ […]

ಕೋವಿಡ್ ಆಸ್ಪತ್ರೆಯಿಂದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಡಿಸ್ಚಾರ್ಜ್
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 07, 2020 | 3:45 PM

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನಿಂದ ಐಸೋಲೇಷನ್ ವಾರ್ಡ್ ಸೇರಿದ್ದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈರಸ್ ಅಟ್ಯಾಕ್ ಆಗಿದ್ದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ದಾಖಲಾಗಿದ್ದರು.

ಕೊರೊನಾ ಸೋಂಕು ತಗುಲಿದ ಕಾರಣ 7 ದಿನದ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಕಾರ್ಪೊರೇಟರ್ ಇಮ್ರಾನ್ ಪಾಷಾ ದಾಖಲಾಗಿದ್ದರು. ಇದೀಗ ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು, ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಮ್ರಾನ್ ಪಾಷಾ ಅದ್ಧೂರಿ ಸ್ವಾಗತಕ್ಕೆ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಆಸ್ಪತ್ರೆ ಬಳಿ ಇಮ್ರಾನ್ ಪಾಷಾ ಬೆಂಬಲಿಗರು ಜಮಾಯಿಸಿದ್ದಾರೆ.

ರೋಡ್ ಶೋ ಮೂಲಕ ತೆರಳಿದ ಕಾರ್ಪೊರೇಟರ್:
ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಇಮ್ರಾನ್ ಪಾಷಾ ರೋಡ್ ಶೋ ನಡೆಸುತ್ತಿದ್ದಾರೆ. ಇಮ್ರಾನ್ ಕಾರಿನ ಹಿಂದೆ ಮುಂದೆ ಬೆಂಬಲಿಗರ ವಾಹನಗಳಿವೆ. ಇನ್ನೂ 7 ದಿನಗಳ ಕಾಲ ಇಮ್ರಾನ್ ಪಾಷಾ ಹೋಮ್ ಕ್ವಾರಂಟೈನ್​ನಲ್ಲಿರಬೇಕಿದ್ರೆ. ಆದರೂ ಸಾಮಾಜಿಕ ಅಂತರವಿಲ್ಲದೆ ಸಾರ್ವಜನಿಕರ ಮಧ್ಯೆ ರೋಡ್ ಶೋ ಮೂಲಕ ಇಮ್ರಾನ್ ಪಾಷಾ ತೆರಳುತ್ತಿದ್ದಾರೆ.

Published On - 2:40 pm, Sun, 7 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us