AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ. ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ […]

ಟೆಸ್ಟ್ ಮಾಡಿಸಿ ವಾರವಾದ್ರೂ ಕೊರೊನಾ ರಿಪೋರ್ಟ್ ಕೈಗೆ ಕೊಡ್ತಿಲ್ಲ.. ಆಸ್ಪತ್ರೆ ಯಾವುದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 17, 2020 | 4:29 PM

Share

ಬೆಂಗಳೂರು: ಕೊರೊನಾ ವರದಿಯ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ ಮುಂದುವರೆದಿದೆ. ಕೊರೊನಾ ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ರಿಪೋರ್ಟ್ ನೀಡದೆ ಸತಾಯಿಸುತ್ತಿರುವ ಪ್ರಸಂಗ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನೆಡೆದಿದೆ.

ರಾಕೇಶ್ ಎಂಬುವವರು ಏಳು ದಿನಗಳ ಹಿಂದೆ 5,000 ರೂ ಹಣ ಕಟ್ಟಿ ಸುಗುಣ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ಮಾಡಿಸಿ ಏಳು ದಿನ ಕಳೆದರೂ ಟೆಸ್ಟ್ ವರದಿ ನೀಡಿಲ್ಲ. ಟೆಸ್ಟ್ ರಿಪೋರ್ಟ್ ಕೇಳಿದರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರಿಂದ ರಿಪೋರ್ಟ್ ಸಿಗದೆ ರಾಕೇಶ್ ಪರದಾಡುವ ಸ್ಥಿತಿ ಎದುರಾಗಿದೆ.

ರಿಪೋರ್ಟ್ ಬಗ್ಗೆ ವಿಚಾರಿಸಿದರೆ ನಿಮಗೆ ಇಷ್ಟೊಂದು ಅರ್ಜೆಂಟ್ ಆಗಿ ವರದಿ ಯಾಕೆ ಬೇಕು ಎಂದು ಆಸ್ಪತ್ರೆ ಸಿಬ್ಬಂದಿಯೇ ರಾಕೇಶ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರಂತೆ. ಇದರಿಂದ ಭಯಭೀತಗೊಂಡಿರುವ ರಾಜೇಶ್, ಸೋಂಕು ತಗುಲುವ ಭೀತಿಯಲ್ಲೆ ಜೀವನ ನೆಡೆಸುವಂತ್ತಾಗಿದೆ. ಈ ಬಗ್ಗೆ ಟಿವಿ9 ಸುಗುಣ ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದರೆ, ಅವರಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾವು ಅದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!