ಪದೇಪದೆ ತಪ್ಪು ಮಾಡುತ್ತಿರುವ ಪಾಕ್​ ಪ್ರೇಮಿ, ಪೇದೆ ಸನಾವುಲ್ಲಾ SUSPEND

ದಾವಣಗೆರೆ: ಪವರ್ ಆಫ್ ಪಾಕಿಸ್ತಾನ ಪೇಜ್​ನಲ್ಲಿ ಪಾಕ್ ಪರ ಸಂದೇಶ ಶೇರ್ ಮಾಡಿದ್ದ ಪ್ರಕರಣದಲ್ಲಿ ಕಾನ್ಸ್‌ಟೇಬಲ್‌ ಸನಾವುಲ್ಲಾನನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸನಾವುಲ್ಲಾನನ್ನ ನಿನ್ನೆಯೇ ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಯಿಂದ ವಿಚಾರಣೆ ಆರಂಭವಾಗಿದೆ. ಎರಡು ದಿನಗಳಲ್ಲಿ ಪ್ರಕರಣ ಸಂಬಂಧ ವರದಿ ಸಲ್ಲಿಕೆ ಸಾಧ್ಯತೆಯಿದೆ. ಪಾಕ್ ಪರ ಸಂದೇಶ ಹಂಚಿಕೆ ಪ್ರಕರಣದಲ್ಲಿ ಅಮಾನತ್ತುಗೊಂಡಿರುವ ಕಾನ್​ಸ್ಟೇಬಲ್ ಸನಾವುಲ್ಲಾ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಸೇವೆಯಲ್ಲಿದ್ದ. […]

ಪದೇಪದೆ ತಪ್ಪು ಮಾಡುತ್ತಿರುವ ಪಾಕ್​ ಪ್ರೇಮಿ, ಪೇದೆ ಸನಾವುಲ್ಲಾ SUSPEND
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Aug 24, 2020 | 10:09 AM

ದಾವಣಗೆರೆ: ಪವರ್ ಆಫ್ ಪಾಕಿಸ್ತಾನ ಪೇಜ್​ನಲ್ಲಿ ಪಾಕ್ ಪರ ಸಂದೇಶ ಶೇರ್ ಮಾಡಿದ್ದ ಪ್ರಕರಣದಲ್ಲಿ ಕಾನ್ಸ್‌ಟೇಬಲ್‌ ಸನಾವುಲ್ಲಾನನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸನಾವುಲ್ಲಾನನ್ನ ನಿನ್ನೆಯೇ ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಯಿಂದ ವಿಚಾರಣೆ ಆರಂಭವಾಗಿದೆ. ಎರಡು ದಿನಗಳಲ್ಲಿ ಪ್ರಕರಣ ಸಂಬಂಧ ವರದಿ ಸಲ್ಲಿಕೆ ಸಾಧ್ಯತೆಯಿದೆ.

ಪಾಕ್ ಪರ ಸಂದೇಶ ಹಂಚಿಕೆ ಪ್ರಕರಣದಲ್ಲಿ ಅಮಾನತ್ತುಗೊಂಡಿರುವ ಕಾನ್​ಸ್ಟೇಬಲ್ ಸನಾವುಲ್ಲಾ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಸೇವೆಯಲ್ಲಿದ್ದ. ಈತ ಪವರ್ ಆಫ್ ಪಾಕಿಸ್ತಾನ್ ಎಂಬ ಸಂದೇಶವಿದ್ದ ಫೇಸ್​ಬುಕ್ ಪೇಜ್ ಲೈಕ್ ಮಾಡಿ, ವಾಟ್ಸ್ ಆಪ್ ಗ್ರೂಪ್ ನಲ್ಲಿ ಆಡಿಯೋ ತುಣುಕುಗಳನ್ನ ಶೇರ್ ಮಾಡಿದ್ದ. ಇದೇ ರೀತಿ ಈ ಹಿಂದೆಯೂ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಕಾನ್​ಸ್ಟೇಬಲ್ ಸನಾವುಲ್ಲಾ ಸಂದೇಶಗಳನ್ನ ಹಾಕಿದ್ದ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us