Viral Photo: ಭಾರತಕ್ಕೆ ಶರಣಾದ ಪಾಕಿಸ್ತಾನ: ಹಳೆಯ ಫೋಟೋ ಹಂಚಿಕೊಂಡ ತಾಲಿಬಾನ್

1971ರಲ್ಲಿ ಭಾರತಕ್ಕೆ ಪಾಕಿಸ್ತಾನದ ಸೈನ್ಯ ಶರಣಾಗತಿಗೆ ಸಹಿ ಹಾಕಿದ ಫೋಟೋವನ್ನು ತಾಲಿಬಾನ್ ಹಂಚಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಅಪಹಾಸ್ಯ ಮಾಡಿದೆ. ಭಾರತೀಯ ಪಡೆಗಳಿಗೆ ಪಾಕಿಸ್ತಾನದ ಮಿಲಿಟರಿ ಶರಣಾಗತಿಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ತಾಲಿಬಾನ್ ಸೋಮವಾರ ಪಾಕಿಸ್ತಾನವನ್ನು ಅಪಹಾಸ್ಯ ಮಾಡಿದೆ

Viral Photo: ಭಾರತಕ್ಕೆ ಶರಣಾದ ಪಾಕಿಸ್ತಾನ: ಹಳೆಯ ಫೋಟೋ ಹಂಚಿಕೊಂಡ ತಾಲಿಬಾನ್
ಭಾರತಕ್ಕೆ ಶರಣಾದ ಪಾಕಿಸ್ತಾನ ಹಳೆಯ ಫೋಟೋ

Updated on: Jan 03, 2023 | 2:11 PM

1971ರಲ್ಲಿ ಭಾರತಕ್ಕೆ ಪಾಕಿಸ್ತಾನದ ಸೈನ್ಯ ಶರಣಾಗತಿಗೆ ಸಹಿ ಹಾಕಿದ ಫೋಟೋವನ್ನು ತಾಲಿಬಾನ್ (taliban) ಹಂಚಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಅಪಹಾಸ್ಯ ಮಾಡಿದೆ. ಭಾರತೀಯ ಪಡೆಗಳಿಗೆ ಪಾಕಿಸ್ತಾನದ ಮಿಲಿಟರಿ ಶರಣಾಗತಿಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ತಾಲಿಬಾನ್ ಸೋಮವಾರ ಪಾಕಿಸ್ತಾನವನ್ನು ಅಪಹಾಸ್ಯ ಮಾಡಿದೆ, ಇಸ್ಲಾಮಾಬಾದ್ ತಮ್ಮ ಮೇಲೆ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದರೆ ಈ ಹಿಂದೆ ಭಾರತದೊಂದಿಗೆ ಮಾಡಿಕೊಂಡ ನಾಚಿಕೆಗೇಡಿನ ವಿಚಾರವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಟ್ವಿಟರ್​ನಲ್ಲಿ ತಾಲಿಬಾನ್ ನಾಯಕ ಅಹ್ಮದ್ ಯಾಸಿರ್ ಇಸ್ಲಾಮಾಬಾದ್‌ಗೆ ಅವಮಾನವನ್ನು ತಪ್ಪಿಸಬೇಕೆಂದು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಅಡಗುತಾಣಗಳ ವಿರುದ್ಧ ಸಂಭಾವ್ಯ ಸೇನಾ ಕಾರ್ಯಾಚರಣೆಯ ಬಗ್ಗೆ ಸುಳಿವು ನೀಡಿದರು.

ಪಾಕಿಸ್ತಾನದ ಆಂತರಿಕ ಮಂತ್ರಿಯನ್ನು ಉಲ್ಲೇಖಿಸಿ ಮಾಡಿದ ಟ್ವೀಟ್​ನಲ್ಲಿ ಅದ್ಭುತ ಸರ್! ಸಿರಿಯಾದಲ್ಲಿರುವ ಕುರ್ದಿಗಳನ್ನು ಗುರಿಯಾಗಿಸಲು ಆಫ್ಘಾನಿಸ್ತಾನ ಟರ್ಕಿಯಲ್ಲ. ಇದು ಅಫ್ಘಾನಿಸ್ತಾನ, ಹೆಮ್ಮೆಯ ಸಾಮ್ರಾಜ್ಯ. ನಮ್ಮ ಮೇಲೆ ಮಿಲಿಟರಿ ದಾಳಿಯ ಬಗ್ಗೆ ಯೋಚಿಸಬೇಡಿ, ಇಲ್ಲದಿದ್ದರೆ ಭಾರತದೊಂದಿಗಿನ ಮಿಲಿಟರಿ ಒಪ್ಪಂದದ ನಾಚಿಕೆಗೇಡಿನ ಪುನರಾವರ್ತನೆಯಾಗುತ್ತದೆ ಎಂದು ಅಹ್ಮದ್ ಯಾಸಿರ್ ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೋಸ್ಟ್ ಜೊತೆಗೆ, ಅಹ್ಮದ್ ಯಾಸಿರ್ ಡಿಸೆಂಬರ್ 16, 1971ರ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ, ಪಾಕಿಸ್ತಾನದ ಸೇನೆಯ ಲೆಫ್ಟಿನೆಂಟ್ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ, ಪೂರ್ವ ಪಾಕಿಸ್ತಾನದ (ಈಗ ಬಾಂಗ್ಲಾದೇಶ) ಮುಖ್ಯ ಮಾರ್ಷಲ್ ಲಾ ಅಡ್ಮಿನಿಸ್ಟ್ರೇಟರ್ ಸರೆಂಡರ್ ಆಫ್ ಇನ್ಸ್ಟ್ರುಮೆಂಟ್​​ಗೆ ಸಹಿ ಹಾಕಿರುವುದನ್ನು ಕಾಣಬಹುದು. ಢಾಕಾದಲ್ಲಿ ಬಾಂಗ್ಲಾದೇಶದ ವಿಮೋಚನೆಗೆ ಭಾರತ ಸಹಾಯ ಮಾಡಿದ ದಿನವನ್ನು ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ, ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ, ಅಫ್ಘಾನಿಸ್ತಾನದ ದಂಗೆಕೋರರ ಅಡಗುತಾಣಗಳ ವಿರುದ್ಧ ತನ್ನ ರಾಷ್ಟ್ರಕ್ಕೆ ಅಂತಹ ಗುಂಪುಗಳಿಂದ ಬೆದರಿಕೆಯಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಲು ಇಸ್ಲಾಮಾಬಾದ್‌ಗೆ ಕಾನೂನು ಅಧಿಕಾರವಿದೆ ಎಂದು ಹೇಳಿದರು.

ಇದನ್ನು ಓದಿ: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್

ಅಫ್ಘಾನಿಸ್ತಾನದಲ್ಲಿರುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಅಡಗುತಾಣಗಳನ್ನು ಕೆಡವಲು ಕಾಬೂಲ್ ಕ್ರಮ ಕೈಗೊಳ್ಳದಿದ್ದರೆ ಇಸ್ಲಾಮಾಬಾದ್ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಮಸ್ಯೆಗಳು ಕಂಡು ಬಂದರೆ ನಾವು ಮೊದಲು ನಮ್ಮ ಇಸ್ಲಾಮಿಕ್ ಸಹೋದರ ರಾಷ್ಟ್ರವಾದ ಅಫ್ಘಾನಿಸ್ತಾನದ ಅಡಗುತಾಣಗಳ ಮೇಲೆ ದಾಳಿ ಮಾಡಲು ಹಿಂಜರಿಯುವುದಿಲ್ಲ ಎಂದು ರಾಣಾ ಸನಾವುಲ್ಲಾ ಹೇಳಿದ್ದಾರೆ.

ಈ ಹೇಳಿಕೆಗೆ ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ದಾಳಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಅಫ್ಘಾನಿಸ್ತಾನವು ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ ಮತ್ತು ಅದರ ಅಧಿಕಾರಿಗಳು ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ. ಯಾವುದೇ ದೇಶವು ಮತ್ತೊಂದು ರಾಷ್ಟ್ರದ ಪ್ರದೇಶದ ಮೇಲೆ ದಾಳಿ ಮಾಡುವ ಹಕ್ಕನ್ನು ಹೊಂದಿಲ್ಲ. ಈ ಹಕ್ಕನ್ನು ಉಲ್ಲಂಘನೆ ಮಾಡುವ ಅಧಿಕಾರ ಜಗತ್ತಿನಲ್ಲಿಲ್ಲ ಎಂದು ಮುಜಾಹಿದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:11 pm, Tue, 3 January 23

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us