AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಹೊಂದಿರುವ ಜಿಲ್ಲೆ ಪುದಿನ, ಪಾಲಕ್ ಬೆಳೆಯುವುದರಲ್ಲಿ ಮಾದರಿ

ಅದೊಂದು ಪುಟ್ಟ ಊರು. ಅಲ್ಲಿನ ರೈತರು ಪುದಿನಾ ಸೊಪ್ಪು ಬೆಳೆಯುವುದರಲ್ಲಿ ನಿಸ್ಸೀಮರು. ಅವರ ಬೆಳೆಯುವ ಸೊಪ್ಪು ನಷ್ಟದ ರುಚಿ ತೋರಿಸಿಲ್ಲ. ಕೃಷಿಯಲ್ಲಿ ಅವರ ಬುದ್ಧಿವಂತಿಕೆ, ಶ್ರಮ ಹಾಗೂ ಮಾರುಕಟ್ಟೆ ಜ್ಞಾನ ಅವರ ಬದುಕನ್ನೇ ಹಸನಾಗಿಸಿದೆ.

ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಹೊಂದಿರುವ ಜಿಲ್ಲೆ ಪುದಿನ, ಪಾಲಕ್ ಬೆಳೆಯುವುದರಲ್ಲಿ ಮಾದರಿ
ಬೀದರ್
ಆಯೇಷಾ ಬಾನು
|

Updated on:Dec 06, 2020 | 7:21 AM

Share

ಬೀದರ್: ಜಿಲ್ಲೆಯ ಕೋಟೆ ಇಡೀ ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಈ ಕೋಟೆಯ ಆವರಣದಲ್ಲಿ ಒಂದು ಪುಟ್ಟದಾದ ಗ್ರಾಮವಿದೆ. ಆ ಗ್ರಾಮದ ಹೆಸರು ಒಳಕೋಟೆ ಅಂತಾ. ಈ ಗ್ರಾಮದಲ್ಲಿ 25 ಕುಟುಂಬಗಳು ನೂರಾರು ವರ್ಷಗಳಿಂದ ವಾಸವಾಗಿದ್ದಾರೆ.

ಪುದಿನ, ಪಾಲಕ್ ಬೆಳೆಯೇ ಜೀವನಾಧಾರ ಈ ಗ್ರಾಮದಲ್ಲಿ ಕೇವಲ 25 ಎಕರೆ ಜಮೀನಿದ್ದು, ಸೊಪ್ಪಿನ ಬೆಳೆಯೇ ಇವರ ಜೀವನಾಧಾರವಾಗಿದೆ. ಇಲ್ಲಿ ಅತಿಹೆಚ್ಚಾಗಿ ಪುದಿನಾ ಸೊಪ್ಪು, ಪಾಲಕ್ ಬೆಳೆಯಲಾಗುತ್ತೆ. ಇಲ್ಲಿ ಬೆಳೆಸಲಾದ ಪುದಿನಾ, ಪಾಲಕ್ ಸೊಪ್ಪಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ವಿಶೇಷ ಅಂದ್ರೆ ಈ ಒಂದೇ ಒಂದು ಭಾವಿಯ ನೀರು ಇಲ್ಲಿನ 25 ಎಕರೆಗೆ ನೀರಾವರಿ ಸೌಲಭ್ಯವನ್ನ ಕಲ್ಪಿಸಿಕೊಟಿದ್ದೆಯಂತೆ.

ನಸುಕಿನಲ್ಲಿಯೇ ಏಳುವ ಮಹಿಳೆಯರು ಹೊಲಕ್ಕೆ ತೆರಳಿ ಸೊಪ್ಪು ತರಕಾರಿ ಕೊಯ್ಲು ಮಾಡುತ್ತಾರೆ. ಮನೆಯ ಸದಸ್ಯರೆಲ್ಲ ಸೇರಿ ತರಕಾರಿಯನ್ನು ನೀರಿನಲ್ಲಿ ತೊಳೆದು ಚೀಲಕ್ಕೆ ತುಂಬುತ್ತಾರೆ. ಇಲ್ಲಿ ಬೆಳೆಯುವ ಸೊಪ್ಪು ತರಕಾರಿ ಬೀದರ್, ಹೈದರಾಬಾದ್ ಸುತ್ತಮುತ್ತಲಿನ ಮಾರುಕಟ್ಟೆಗೆ ಹೋಗುತ್ತದೆ. ಈ ಸೊಪ್ಪಿನ ಬೆಳೆಯಲು ಕೂಲಿಕಾರರ ಅವಶ್ಯಕತೆ ಹೆಚ್ಚಾಗಿ ಇರುವುದಿಲ್ಲ. ಯಾಕಂದ್ರೆ ಮನೆಯ ಸದಸ್ಯರೇ ಕೆಲಸ ನಿರ್ವಹಿಸುತ್ತಾರೆ.

ಒಟ್ನಲ್ಲಿ ಒಂದು ಚಿಕ್ಕ ಊರು ಇಡೀ ಬೀದರ್ ಜಿಲ್ಲೆಗೆ ಪುದಿನಾ ಸರಬರಾಜು ಮಾಡುತ್ತಿದೆ. ಕೃಷಿಯಲ್ಲಿ ಲಾಭ ಇಲ್ಲ ಅನ್ನೋರಿಗೆ ಒಳಕೋಟೆ ಗ್ರಾಮದ ಪಾಲಕ್ ಸೋಪ್ಪಿನ ಬೆಳೆ ನಿಜಕ್ಕೂ ಮಾದರಿ. -ಸುರೇಶ್

Published On - 7:20 am, Sun, 6 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ