AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಹೊಂದಿರುವ ಜಿಲ್ಲೆ ಪುದಿನ, ಪಾಲಕ್ ಬೆಳೆಯುವುದರಲ್ಲಿ ಮಾದರಿ

ಅದೊಂದು ಪುಟ್ಟ ಊರು. ಅಲ್ಲಿನ ರೈತರು ಪುದಿನಾ ಸೊಪ್ಪು ಬೆಳೆಯುವುದರಲ್ಲಿ ನಿಸ್ಸೀಮರು. ಅವರ ಬೆಳೆಯುವ ಸೊಪ್ಪು ನಷ್ಟದ ರುಚಿ ತೋರಿಸಿಲ್ಲ. ಕೃಷಿಯಲ್ಲಿ ಅವರ ಬುದ್ಧಿವಂತಿಕೆ, ಶ್ರಮ ಹಾಗೂ ಮಾರುಕಟ್ಟೆ ಜ್ಞಾನ ಅವರ ಬದುಕನ್ನೇ ಹಸನಾಗಿಸಿದೆ.

ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಹೊಂದಿರುವ ಜಿಲ್ಲೆ ಪುದಿನ, ಪಾಲಕ್ ಬೆಳೆಯುವುದರಲ್ಲಿ ಮಾದರಿ
ಬೀದರ್
ಆಯೇಷಾ ಬಾನು
|

Updated on:Dec 06, 2020 | 7:21 AM

Share

ಬೀದರ್: ಜಿಲ್ಲೆಯ ಕೋಟೆ ಇಡೀ ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಈ ಕೋಟೆಯ ಆವರಣದಲ್ಲಿ ಒಂದು ಪುಟ್ಟದಾದ ಗ್ರಾಮವಿದೆ. ಆ ಗ್ರಾಮದ ಹೆಸರು ಒಳಕೋಟೆ ಅಂತಾ. ಈ ಗ್ರಾಮದಲ್ಲಿ 25 ಕುಟುಂಬಗಳು ನೂರಾರು ವರ್ಷಗಳಿಂದ ವಾಸವಾಗಿದ್ದಾರೆ.

ಪುದಿನ, ಪಾಲಕ್ ಬೆಳೆಯೇ ಜೀವನಾಧಾರ ಈ ಗ್ರಾಮದಲ್ಲಿ ಕೇವಲ 25 ಎಕರೆ ಜಮೀನಿದ್ದು, ಸೊಪ್ಪಿನ ಬೆಳೆಯೇ ಇವರ ಜೀವನಾಧಾರವಾಗಿದೆ. ಇಲ್ಲಿ ಅತಿಹೆಚ್ಚಾಗಿ ಪುದಿನಾ ಸೊಪ್ಪು, ಪಾಲಕ್ ಬೆಳೆಯಲಾಗುತ್ತೆ. ಇಲ್ಲಿ ಬೆಳೆಸಲಾದ ಪುದಿನಾ, ಪಾಲಕ್ ಸೊಪ್ಪಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ವಿಶೇಷ ಅಂದ್ರೆ ಈ ಒಂದೇ ಒಂದು ಭಾವಿಯ ನೀರು ಇಲ್ಲಿನ 25 ಎಕರೆಗೆ ನೀರಾವರಿ ಸೌಲಭ್ಯವನ್ನ ಕಲ್ಪಿಸಿಕೊಟಿದ್ದೆಯಂತೆ.

ನಸುಕಿನಲ್ಲಿಯೇ ಏಳುವ ಮಹಿಳೆಯರು ಹೊಲಕ್ಕೆ ತೆರಳಿ ಸೊಪ್ಪು ತರಕಾರಿ ಕೊಯ್ಲು ಮಾಡುತ್ತಾರೆ. ಮನೆಯ ಸದಸ್ಯರೆಲ್ಲ ಸೇರಿ ತರಕಾರಿಯನ್ನು ನೀರಿನಲ್ಲಿ ತೊಳೆದು ಚೀಲಕ್ಕೆ ತುಂಬುತ್ತಾರೆ. ಇಲ್ಲಿ ಬೆಳೆಯುವ ಸೊಪ್ಪು ತರಕಾರಿ ಬೀದರ್, ಹೈದರಾಬಾದ್ ಸುತ್ತಮುತ್ತಲಿನ ಮಾರುಕಟ್ಟೆಗೆ ಹೋಗುತ್ತದೆ. ಈ ಸೊಪ್ಪಿನ ಬೆಳೆಯಲು ಕೂಲಿಕಾರರ ಅವಶ್ಯಕತೆ ಹೆಚ್ಚಾಗಿ ಇರುವುದಿಲ್ಲ. ಯಾಕಂದ್ರೆ ಮನೆಯ ಸದಸ್ಯರೇ ಕೆಲಸ ನಿರ್ವಹಿಸುತ್ತಾರೆ.

ಒಟ್ನಲ್ಲಿ ಒಂದು ಚಿಕ್ಕ ಊರು ಇಡೀ ಬೀದರ್ ಜಿಲ್ಲೆಗೆ ಪುದಿನಾ ಸರಬರಾಜು ಮಾಡುತ್ತಿದೆ. ಕೃಷಿಯಲ್ಲಿ ಲಾಭ ಇಲ್ಲ ಅನ್ನೋರಿಗೆ ಒಳಕೋಟೆ ಗ್ರಾಮದ ಪಾಲಕ್ ಸೋಪ್ಪಿನ ಬೆಳೆ ನಿಜಕ್ಕೂ ಮಾದರಿ. -ಸುರೇಶ್

Published On - 7:20 am, Sun, 6 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ