AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಹೊಂದಿರುವ ಜಿಲ್ಲೆ ಪುದಿನ, ಪಾಲಕ್ ಬೆಳೆಯುವುದರಲ್ಲಿ ಮಾದರಿ

ಅದೊಂದು ಪುಟ್ಟ ಊರು. ಅಲ್ಲಿನ ರೈತರು ಪುದಿನಾ ಸೊಪ್ಪು ಬೆಳೆಯುವುದರಲ್ಲಿ ನಿಸ್ಸೀಮರು. ಅವರ ಬೆಳೆಯುವ ಸೊಪ್ಪು ನಷ್ಟದ ರುಚಿ ತೋರಿಸಿಲ್ಲ. ಕೃಷಿಯಲ್ಲಿ ಅವರ ಬುದ್ಧಿವಂತಿಕೆ, ಶ್ರಮ ಹಾಗೂ ಮಾರುಕಟ್ಟೆ ಜ್ಞಾನ ಅವರ ಬದುಕನ್ನೇ ಹಸನಾಗಿಸಿದೆ.

ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಹೊಂದಿರುವ ಜಿಲ್ಲೆ ಪುದಿನ, ಪಾಲಕ್ ಬೆಳೆಯುವುದರಲ್ಲಿ ಮಾದರಿ
ಬೀದರ್
ಆಯೇಷಾ ಬಾನು
|

Updated on:Dec 06, 2020 | 7:21 AM

Share

ಬೀದರ್: ಜಿಲ್ಲೆಯ ಕೋಟೆ ಇಡೀ ಏಷ್ಯಾದಲ್ಲಿಯೇ ಅತೀ ದೊಡ್ಡ ಕೋಟೆ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಈ ಕೋಟೆಯ ಆವರಣದಲ್ಲಿ ಒಂದು ಪುಟ್ಟದಾದ ಗ್ರಾಮವಿದೆ. ಆ ಗ್ರಾಮದ ಹೆಸರು ಒಳಕೋಟೆ ಅಂತಾ. ಈ ಗ್ರಾಮದಲ್ಲಿ 25 ಕುಟುಂಬಗಳು ನೂರಾರು ವರ್ಷಗಳಿಂದ ವಾಸವಾಗಿದ್ದಾರೆ.

ಪುದಿನ, ಪಾಲಕ್ ಬೆಳೆಯೇ ಜೀವನಾಧಾರ ಈ ಗ್ರಾಮದಲ್ಲಿ ಕೇವಲ 25 ಎಕರೆ ಜಮೀನಿದ್ದು, ಸೊಪ್ಪಿನ ಬೆಳೆಯೇ ಇವರ ಜೀವನಾಧಾರವಾಗಿದೆ. ಇಲ್ಲಿ ಅತಿಹೆಚ್ಚಾಗಿ ಪುದಿನಾ ಸೊಪ್ಪು, ಪಾಲಕ್ ಬೆಳೆಯಲಾಗುತ್ತೆ. ಇಲ್ಲಿ ಬೆಳೆಸಲಾದ ಪುದಿನಾ, ಪಾಲಕ್ ಸೊಪ್ಪಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ವಿಶೇಷ ಅಂದ್ರೆ ಈ ಒಂದೇ ಒಂದು ಭಾವಿಯ ನೀರು ಇಲ್ಲಿನ 25 ಎಕರೆಗೆ ನೀರಾವರಿ ಸೌಲಭ್ಯವನ್ನ ಕಲ್ಪಿಸಿಕೊಟಿದ್ದೆಯಂತೆ.

ನಸುಕಿನಲ್ಲಿಯೇ ಏಳುವ ಮಹಿಳೆಯರು ಹೊಲಕ್ಕೆ ತೆರಳಿ ಸೊಪ್ಪು ತರಕಾರಿ ಕೊಯ್ಲು ಮಾಡುತ್ತಾರೆ. ಮನೆಯ ಸದಸ್ಯರೆಲ್ಲ ಸೇರಿ ತರಕಾರಿಯನ್ನು ನೀರಿನಲ್ಲಿ ತೊಳೆದು ಚೀಲಕ್ಕೆ ತುಂಬುತ್ತಾರೆ. ಇಲ್ಲಿ ಬೆಳೆಯುವ ಸೊಪ್ಪು ತರಕಾರಿ ಬೀದರ್, ಹೈದರಾಬಾದ್ ಸುತ್ತಮುತ್ತಲಿನ ಮಾರುಕಟ್ಟೆಗೆ ಹೋಗುತ್ತದೆ. ಈ ಸೊಪ್ಪಿನ ಬೆಳೆಯಲು ಕೂಲಿಕಾರರ ಅವಶ್ಯಕತೆ ಹೆಚ್ಚಾಗಿ ಇರುವುದಿಲ್ಲ. ಯಾಕಂದ್ರೆ ಮನೆಯ ಸದಸ್ಯರೇ ಕೆಲಸ ನಿರ್ವಹಿಸುತ್ತಾರೆ.

ಒಟ್ನಲ್ಲಿ ಒಂದು ಚಿಕ್ಕ ಊರು ಇಡೀ ಬೀದರ್ ಜಿಲ್ಲೆಗೆ ಪುದಿನಾ ಸರಬರಾಜು ಮಾಡುತ್ತಿದೆ. ಕೃಷಿಯಲ್ಲಿ ಲಾಭ ಇಲ್ಲ ಅನ್ನೋರಿಗೆ ಒಳಕೋಟೆ ಗ್ರಾಮದ ಪಾಲಕ್ ಸೋಪ್ಪಿನ ಬೆಳೆ ನಿಜಕ್ಕೂ ಮಾದರಿ. -ಸುರೇಶ್

Published On - 7:20 am, Sun, 6 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್