AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BSY ಅವಧಿ ಪೂರ್ಣಗೊಳಿಸ್ತಾರೋ ಇಲ್ವೋ ಗೊತ್ತಿಲ್ಲ.. ಆದ್ರೆ, ನಮ್ಮ ಸಮುದಾಯದವರು CM ಆಗ್ಬೇಕು’

ಬೆಂಗಳೂರು: BSY ಬಳಿಕ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶ್ರೀಗಳು ಈಗ ಸಚಿವ ಸ್ಥಾನಕ್ಕಿಂತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ಮುಖ್ಯ. BSY ತಮ್ಮ ಅವಧಿ ಪೂರ್ಣಗೊಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಆದರೆ, ಅವರ ಅವಧಿ ಬಳಿಕ ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ. ಪಂಚಮಸಾಲಿ ಸಮಾಜದಲ್ಲಿ ಸಿಎಂ ಆಗಲು ಅರ್ಹತೆ ಇರೋರು ಇದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ನಮಗೆ ಅಪಾರ […]

‘BSY ಅವಧಿ ಪೂರ್ಣಗೊಳಿಸ್ತಾರೋ ಇಲ್ವೋ ಗೊತ್ತಿಲ್ಲ.. ಆದ್ರೆ, ನಮ್ಮ ಸಮುದಾಯದವರು CM ಆಗ್ಬೇಕು’
KUSHAL V
|

Updated on: Oct 10, 2020 | 2:20 PM

Share

ಬೆಂಗಳೂರು: BSY ಬಳಿಕ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶ್ರೀಗಳು ಈಗ ಸಚಿವ ಸ್ಥಾನಕ್ಕಿಂತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ಮುಖ್ಯ. BSY ತಮ್ಮ ಅವಧಿ ಪೂರ್ಣಗೊಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಆದರೆ, ಅವರ ಅವಧಿ ಬಳಿಕ ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

ಪಂಚಮಸಾಲಿ ಸಮಾಜದಲ್ಲಿ ಸಿಎಂ ಆಗಲು ಅರ್ಹತೆ ಇರೋರು ಇದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ನಮಗೆ ಅಪಾರ ಗೌರವ ಇದೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಕೊಟ್ಟಿದ್ದಾರೆ.

ಪಂಚಮಶಾಲಿ ಸಮುದಾಯದ ಶೇಕಡಾ 70%ರಷ್ಟು ಜನ ಬಿಜೆಪಿಯ‌ನ್ನ ಬೆಂಬಲಿಸಿಕೊಂಡು ಬರ್ತಿದ್ದಾರೆ. ಸಚಿವ ಸ್ಥಾನ‌ ಕೇಳುವುದಕ್ಕಿಂತ ಮುನ್ನ ನಮಗೆ ಸಿಎಂ ಸ್ಥಾನವನ್ನೇ ಕೊಡಲಿ. ಮಹೇಶ್ ಕುಮಟಹಳ್ಳಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಆಗ ಕೊಡದಿದ್ದು ನಮಗೆ ಅಸಮಾಧಾನ ಇದೆ. ನಮ್ಮ ಸಮುದಾಯದ ಶಾಸಕರ ಸಂಖ್ಯೆಗೆ ಅನುಗುಣವಾಗಿ ಕನಿಷ್ಠ ಮೂವರು ಶಾಸಕರನ್ನಾದ್ರೂ‌ ಸಚಿವರನ್ನಾಗಿ ಮಾಡಬೇಕಿತ್ತು, ಮಾಡಲಿಲ್ಲ. ಯಡಿಯೂರಪ್ಪ ಅವರ ಅವಧಿ ಮೂರು ವರ್ಷ ಇರುತ್ತೋ ಇಲ್ಲ, ಮುಂದೆಯೂ ಅವರೇ ಸಿಎಂ ಆಗ್ತಾರೋ ಗೊತ್ತಿಲ್ಲ. ಅವರ ಅವಧಿ ಮುಗಿದ ಬಳಿಕ ನಮ್ಮ ಪಂಚಮಸಾಲಿ ಸಮಾಜಕ್ಕೆ ಸಿಎಂ ಸ್ಥಾನ ಕೊಡಿ ಅಂತಾ ಒತ್ತಾಯ ಮಾಡ್ತೇವೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ