AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಲ್​ ಟೈಟ್​ ಆಗಿ ಆಸ್ಪತ್ರೆಯಲ್ಲಿ ಗಲಾಟೆ, ನಂತರ ಮಕ್ಕಳನ್ನ ಮರೆತು ದಂಪತಿಯ ಜೋರು ನಿದ್ದೆ!

ಬೆಂಗಳೂರು: ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದ ದಂಪತಿ, ನಂತರ ಕಂಠಪೂರ್ತಿ ಕುಡಿದು ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳವಾಡಿರುವ ಘಟನೆ ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸೋದು ಪೋಷಕರ ಆದ್ಯ ಕರ್ತವ್ಯ. ಆದರೆ, ಈ ದಂಪತಿ ಕುಡಿದ ಮತ್ತಿನಲ್ಲಿ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳ ಶುರುಮಾಡಿದ್ದಾರೆ. ಇದರಿಂದ ಕೋಪಗೊಂಡ ಸಿಬ್ಬಂದಿ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದರು. ಇದನ್ನು ಕಂಡ ದಂಪತಿ ಮತ್ತಷ್ಟು ಗಲಾಟೆ ಮಾಡಿದರು. ನಂತರ ಆಚೆ ಬಂದು, […]

ಫುಲ್​ ಟೈಟ್​ ಆಗಿ ಆಸ್ಪತ್ರೆಯಲ್ಲಿ ಗಲಾಟೆ, ನಂತರ ಮಕ್ಕಳನ್ನ ಮರೆತು ದಂಪತಿಯ ಜೋರು ನಿದ್ದೆ!
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 8:54 PM

Share

ಬೆಂಗಳೂರು: ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದ ದಂಪತಿ, ನಂತರ ಕಂಠಪೂರ್ತಿ ಕುಡಿದು ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳವಾಡಿರುವ ಘಟನೆ ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸೋದು ಪೋಷಕರ ಆದ್ಯ ಕರ್ತವ್ಯ. ಆದರೆ, ಈ ದಂಪತಿ ಕುಡಿದ ಮತ್ತಿನಲ್ಲಿ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳ ಶುರುಮಾಡಿದ್ದಾರೆ. ಇದರಿಂದ ಕೋಪಗೊಂಡ ಸಿಬ್ಬಂದಿ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದರು. ಇದನ್ನು ಕಂಡ ದಂಪತಿ ಮತ್ತಷ್ಟು ಗಲಾಟೆ ಮಾಡಿದರು.

ನಂತರ ಆಚೆ ಬಂದು, ಕುಡಿದ ಮತ್ತಿನಲ್ಲಿ ಆಸ್ಪತ್ರೆ ಆವರಣದಲ್ಲೇ ಪ್ರಜ್ಞಾಹೀನಳಾಗಿ ಮಲಗಿಟ್ಟರು. ಈ ನಡುವೆ ತಾಯಿಯನ್ನು ಮಕ್ಕಳು ಏಳಿಸುವ ಪ್ರಯತ್ನ ಮಾಡಿದರು. ಅಮ್ಮಾ ಎದ್ದೇಳು. ಜನ ಎಲ್ಲಾ ನೋಡ್ತಾ ಇದ್ದಾರೆ. ಎದ್ದೇಳು ಅಮ್ಮಾ ಎಂದು ಪುಟಾಣಿಗಳು ಕಣ್ಣೀರಿಡುತ್ತಿದ್ದ ದೃಶ್ಯ ನೆರೆದವರಿಗೆ ಬೇಸರ ಉಂಟುಮಾಡಿತು.

ಕೊನೆಗೆ, ಮಕ್ಕಳ ಗೋಳಾಟ ನೋಡಲಾಗದೆ ಅಲ್ಲೇ ಇದ್ದ ಪೊಲೀಸ್ ಸಿಬ್ಬಂದಿ ಆಟೋ ವ್ಯವಸ್ಥೆ ಮಾಡಿ, ಟೈಟ್​ ಆಗಿದ್ದ ದಂಪತಿಯಿಬ್ಬರನ್ನ ಮತ್ತು ಮಕ್ಕಳನ್ನು ಮನೆಗೆ ಕಳುಹಿಸಿದರು.

Published On - 6:44 pm, Sun, 26 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ