AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಲ್​ ಟೈಟ್​ ಆಗಿ ಆಸ್ಪತ್ರೆಯಲ್ಲಿ ಗಲಾಟೆ, ನಂತರ ಮಕ್ಕಳನ್ನ ಮರೆತು ದಂಪತಿಯ ಜೋರು ನಿದ್ದೆ!

ಬೆಂಗಳೂರು: ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದ ದಂಪತಿ, ನಂತರ ಕಂಠಪೂರ್ತಿ ಕುಡಿದು ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳವಾಡಿರುವ ಘಟನೆ ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸೋದು ಪೋಷಕರ ಆದ್ಯ ಕರ್ತವ್ಯ. ಆದರೆ, ಈ ದಂಪತಿ ಕುಡಿದ ಮತ್ತಿನಲ್ಲಿ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳ ಶುರುಮಾಡಿದ್ದಾರೆ. ಇದರಿಂದ ಕೋಪಗೊಂಡ ಸಿಬ್ಬಂದಿ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದರು. ಇದನ್ನು ಕಂಡ ದಂಪತಿ ಮತ್ತಷ್ಟು ಗಲಾಟೆ ಮಾಡಿದರು. ನಂತರ ಆಚೆ ಬಂದು, […]

ಫುಲ್​ ಟೈಟ್​ ಆಗಿ ಆಸ್ಪತ್ರೆಯಲ್ಲಿ ಗಲಾಟೆ, ನಂತರ ಮಕ್ಕಳನ್ನ ಮರೆತು ದಂಪತಿಯ ಜೋರು ನಿದ್ದೆ!
Follow us
ಸಾಧು ಶ್ರೀನಾಥ್​
| Updated By:

Updated on:Jul 27, 2020 | 8:54 PM

ಬೆಂಗಳೂರು: ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದ ದಂಪತಿ, ನಂತರ ಕಂಠಪೂರ್ತಿ ಕುಡಿದು ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳವಾಡಿರುವ ಘಟನೆ ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸೋದು ಪೋಷಕರ ಆದ್ಯ ಕರ್ತವ್ಯ. ಆದರೆ, ಈ ದಂಪತಿ ಕುಡಿದ ಮತ್ತಿನಲ್ಲಿ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಜಗಳ ಶುರುಮಾಡಿದ್ದಾರೆ. ಇದರಿಂದ ಕೋಪಗೊಂಡ ಸಿಬ್ಬಂದಿ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದರು. ಇದನ್ನು ಕಂಡ ದಂಪತಿ ಮತ್ತಷ್ಟು ಗಲಾಟೆ ಮಾಡಿದರು.

ನಂತರ ಆಚೆ ಬಂದು, ಕುಡಿದ ಮತ್ತಿನಲ್ಲಿ ಆಸ್ಪತ್ರೆ ಆವರಣದಲ್ಲೇ ಪ್ರಜ್ಞಾಹೀನಳಾಗಿ ಮಲಗಿಟ್ಟರು. ಈ ನಡುವೆ ತಾಯಿಯನ್ನು ಮಕ್ಕಳು ಏಳಿಸುವ ಪ್ರಯತ್ನ ಮಾಡಿದರು. ಅಮ್ಮಾ ಎದ್ದೇಳು. ಜನ ಎಲ್ಲಾ ನೋಡ್ತಾ ಇದ್ದಾರೆ. ಎದ್ದೇಳು ಅಮ್ಮಾ ಎಂದು ಪುಟಾಣಿಗಳು ಕಣ್ಣೀರಿಡುತ್ತಿದ್ದ ದೃಶ್ಯ ನೆರೆದವರಿಗೆ ಬೇಸರ ಉಂಟುಮಾಡಿತು.

ಕೊನೆಗೆ, ಮಕ್ಕಳ ಗೋಳಾಟ ನೋಡಲಾಗದೆ ಅಲ್ಲೇ ಇದ್ದ ಪೊಲೀಸ್ ಸಿಬ್ಬಂದಿ ಆಟೋ ವ್ಯವಸ್ಥೆ ಮಾಡಿ, ಟೈಟ್​ ಆಗಿದ್ದ ದಂಪತಿಯಿಬ್ಬರನ್ನ ಮತ್ತು ಮಕ್ಕಳನ್ನು ಮನೆಗೆ ಕಳುಹಿಸಿದರು.

Published On - 6:44 pm, Sun, 26 July 20

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?