AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೇಶ್​​ ಮೇಸ್ತ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ : ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ

ಪರೇಶ್​​ ಮೇಸ್ತ ಸಾವು ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದ್ದು, ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗ

ಪರೇಶ್​​ ಮೇಸ್ತ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ : ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ
ಪರಮೇಶ ಮೇಸ್ತ
TV9 Web
| Edited By: |

Updated on:Oct 18, 2022 | 4:05 PM

Share

ಉತ್ತರ ಕನ್ನಡ: ರಾಜ್ಯದಲ್ಲಿ ತೀರ್ವ ಸಂಚಲನ ಮೂಡಿಸಿದ್ದ ಪರೇಶ್​​ ಮೇಸ್ತ ಸಾವು ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಪರೇಶ್​​ ಮೇಸ್ತ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ಅಧಿಕಾರಿಗಳು ಇಂದು (ಅ.18) ಹೊನ್ನಾವರದ ನ್ಯಾಯಾಲಕಯಕ್ಕೆ ಪ್ರಕರಣದ ವಿಸ್ತೃತ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು  ಕೊಲೆ ಮಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ಉಲ್ಲೇಖಿಸಲಾಗಿದೆ.

ಈ ಹಿಂದೆ ಸಿಬಿಐ ಅಧಿಕಾರಿಗಳು ಅಕ್ಟೋಬರ್​ 3 ರಂದು ಹೊನ್ನಾವರದ ನ್ಯಾಯಾಲಕಯಕ್ಕೆ ಪ್ರಕರಣದ ಮೊದಲ ವರದಿಯನ್ನು ಸಲ್ಲಿಸಿದ್ದರು. ಈ ವರದಿಯಲ್ಲಿ ಪರೇಶ್​​ ಮೇಸ್ತ ಸಾವು ಹತ್ಯೆಯಲ್ಲ, ಆಕಸ್ಮಿಕ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಬಿಐ ವರದಿ ಬಹಿರಂಗಗೊಂಡ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ತೀರ್ವ ಸಂಚಲನ ಮೂಡಿಸಿತ್ತು.

ಪರಮೇಶ ಮೇಸ್ತ ಸಾವಿನ ಹಿನ್ನೆಲೆ

ಡಿಸೆಂಬರ್ 6 2017 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರಮೇಶ ಮೇಸ್ತ ಕಾಣೆಯಾಗಿದ್ದನು. ಮುಂದೆ ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಡಿ.11ರಂದು ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂತು. ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಕರೆ ನೀಡಿದ್ದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿತ್ತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಪೊಲೀಸರು ಗಾಯಗೊಂಡರು, ವಾಹನಗಳು ಜಖಂಗೊಂಡಿದ್ದವು.

ಪ್ರಕರಣ ರಾಜಕೀಯ ರೂಪ ಪಡೆದುಕೊಂಡು ಬಿಜೆಪಿ ಘಟಾನುಘಟಿ ನಾಯಕರು ಬೀದಿಗೆ ಇಳಿದಿದ್ದರು. ಬಿಜೆಪಿ, ಅಂದಿನ ಕಾಂಗ್ರೆಸ್​ ಸರ್ಕಾರದ ವಿರುದ್ದ ಆರೋಪ ಮಾಡಿತು. ಪರೇಶ್ ಮೇಸ್ತ ಹತ್ಯೆ ಮಾಡಲಾಗಿದೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿತು. ರಾಜ್ಯಪಾಲರಿಗೂ ಈ ಕುರಿತು ದೂರು ಕೂಡ ನೀಡಿತ್ತು.

ಪರೇಶ್ ಮೇಸ್ತ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. ಪ್ರತಿಪಕ್ಷಗಳ ಹೋರಾಟಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿಲ್ಲ. ಮೇಸ್ತ ಪೋಷಕರ ಒತ್ತಾಯದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಪ್ರಕರಣದಲ್ಲಿ ಐದು ಜನರನ್ನು ಬಂಧಿಸಲಾಗಿತ್ತು. ವಿಸೃತ ನಾಲ್ಕೂವರೆ ವರ್ಷ ತನಿಖೆ ನಡೆಸಿದ ಸಿಬಿಐ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪರಮೇಶ ಮೇಸ್ತಾ ತಂದೆ ಕಮಲಾಕರ್ ಮೇಸ್ತಾ ಅಸಮಾಧಾನ

ಸಿಬಿಐ ವರದಿಗೆ ತಂದೆ ಕಮಲಾಕರ್ ಮೇಸ್ತಾ ಅಸಮಾಧಾನ ವ್ಯಕ್ತಪಡಿಸಿದ್ದರು. ನನ್ನ ಮಗನಿಗೆ ಈಜು ಗೊತ್ತಿತ್ತು, ಅವನು ಕೆರೆಯಲ್ಲಿ ಮುಳುಗಿ ಸಾಯಲು ಹೇಗೆ ಸಾಧ್ಯ.? ಘಟನೆ ವೇಳೆ ಸಮೀಪದಸಿ ಸಿಕ್ಯಾಮೆರಾಗಳು ಎಲ್ಲಿ ಹೋಯ್ತು ? ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Tue, 18 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?