AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬೆ ಜಾತ್ರೆ.. ಹರಿದು ಬಂದಿತ್ತು ಭಕ್ತ ಸಾಗರ

ಕೊರೊನಾ ನಡುವೆಯೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಸಗೂಲಿ ಗ್ರಾಮದ ಅಲ್ಲಹಳ್ಳಿ ಪಾರ್ವತಾಂಭ ಜಾತ್ರೆಯನ್ನು ಭಕ್ತರು ವಿಜೃಂಭಣೆಯಿಂದ ನೆರವೇರಿಸಿದ್ದಾರೆ.

ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬೆ ಜಾತ್ರೆ.. ಹರಿದು ಬಂದಿತ್ತು ಭಕ್ತ ಸಾಗರ
ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬ ಜಾತ್ರೆ.
ಆಯೇಷಾ ಬಾನು
ಆಯೇಷಾ ಬಾನು|

Updated on:Dec 02, 2020 | 12:16 PM

Share

ಚಾಮರಾಜನಗರ: ಮಹಾಮಾರಿ ಕೊರೊನಾದಿಂದಾಗಿ ಅದೆಷ್ಟೋ ಮಹಾ ಕಾರ್ಯಗಳು ಸ್ಥಗಿತಗೊಳ್ಳುತ್ತಿವೆ. ಹೆಚ್ಚು ಜನ ಸಾಮೂಹಿಕವಾಗಿ ಸೇರದಂತೆ ಸರ್ಕಾರ ನಿರ್ಬಂಧ ಹೇರಿದೆ. ಆದ್ರೆ.. ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ದೇವರ ವಿಷಯ ಬಂದಾಗ ನಮ್ಮ ಜನ ಯಾವ ನಿರ್ಬಂಧಗಳಿಗೂ ಕ್ಯಾರೇ ಅನ್ನೋದಿಲ್ಲ.

ಇದೇ ರೀತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಸಗೂಲಿ ಗ್ರಾಮದ ಅಲ್ಲಹಳ್ಳಿ ಪಾರ್ವತಾಂಬ ಜಾತ್ರೆಯನ್ನು ಭಕ್ತರು ವಿಜೃಂಭಣೆಯಿಂದ ನೆರವೇರಿಸಿದ್ದಾರೆ. ಕೊರೊನಾ ಮಧ್ಯೆಯೂ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ಭಕ್ತಿ ಪರವಶರಾದರು.

ಹರಕೆ ತೀರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಭಕ್ತರು: ಗ್ರಾಮಸ್ಥರು ಕಾಡಿನಲ್ಲಿರುವ ಕಸಗಲಪುರದ ಪಾರ್ವತಾಂಬೆಯನ್ನು ಹೊತ್ತು ತಂದು ಸೋಮವಾರ ಮತ್ತು ಮಂಗಳವಾರ ನಡೆದ ಜಾತ್ರೆಯಲ್ಲಿ ತಾಯಿಯ ಮೆರವಣಿಗೆ ಮಾಡಿದ್ರು. ಜಾತ್ರೆ ಹಿನ್ನೆಲೆಯಲ್ಲಿ ತಳಿರು ತೋರಣಗಳಿಂದ ಗ್ರಾಮವನ್ನು ಅಲಂಕರಿಸಿ ಪಾರ್ವತಾಂಬೆಯ ಅಹ್ವಾ‌ನ ಮಾಡಲಾಗಿತ್ತು. ಛತ್ರಿ, ಚಾಮರ, ಡೋಲು, ನಗಾರಿ ಮೂಲಕ ದೇವರ ಪೆಟ್ಟಿಗೆಯನ್ನು ಸ್ವಾಗತಿಸಿದ್ರು.

ಪಾರ್ವತಾಂಬೆಯ ವಿಗ್ರಹವನ್ನು ಸೇವಂತಿಗೆ ಹೂವಿನಿಂದ ಅಲಂಕರಿಸಿದ್ರು. ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಗ್ರಾಮದ ತುಂಬ ಮೆರವಣಿಗೆ ಮಾಡಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ ರದ್ದು ಮಾಡಲಾಗಿತ್ತು. ಆದರೆ ಗ್ರಾಮಸ್ಥರು ಸರಳವಾಗಿ ಅದನ್ನು ಅಯೋಜನೆ ಮಾಡಿದ್ದರು. ಈ ವೇಳೆ ಶಕ್ತಿ ದೇವತೆಯ ಹರಕೆ ತೀರಿಸಲು ಹರಕೆ ಹೊತ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಈ ರೀತಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ.

Published On - 12:14 pm, Wed, 2 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ