AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬೆ ಜಾತ್ರೆ.. ಹರಿದು ಬಂದಿತ್ತು ಭಕ್ತ ಸಾಗರ

ಕೊರೊನಾ ನಡುವೆಯೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಸಗೂಲಿ ಗ್ರಾಮದ ಅಲ್ಲಹಳ್ಳಿ ಪಾರ್ವತಾಂಭ ಜಾತ್ರೆಯನ್ನು ಭಕ್ತರು ವಿಜೃಂಭಣೆಯಿಂದ ನೆರವೇರಿಸಿದ್ದಾರೆ.

ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬೆ ಜಾತ್ರೆ.. ಹರಿದು ಬಂದಿತ್ತು ಭಕ್ತ ಸಾಗರ
ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬ ಜಾತ್ರೆ.
ಆಯೇಷಾ ಬಾನು
|

Updated on:Dec 02, 2020 | 12:16 PM

Share

ಚಾಮರಾಜನಗರ: ಮಹಾಮಾರಿ ಕೊರೊನಾದಿಂದಾಗಿ ಅದೆಷ್ಟೋ ಮಹಾ ಕಾರ್ಯಗಳು ಸ್ಥಗಿತಗೊಳ್ಳುತ್ತಿವೆ. ಹೆಚ್ಚು ಜನ ಸಾಮೂಹಿಕವಾಗಿ ಸೇರದಂತೆ ಸರ್ಕಾರ ನಿರ್ಬಂಧ ಹೇರಿದೆ. ಆದ್ರೆ.. ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ದೇವರ ವಿಷಯ ಬಂದಾಗ ನಮ್ಮ ಜನ ಯಾವ ನಿರ್ಬಂಧಗಳಿಗೂ ಕ್ಯಾರೇ ಅನ್ನೋದಿಲ್ಲ.

ಇದೇ ರೀತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಸಗೂಲಿ ಗ್ರಾಮದ ಅಲ್ಲಹಳ್ಳಿ ಪಾರ್ವತಾಂಬ ಜಾತ್ರೆಯನ್ನು ಭಕ್ತರು ವಿಜೃಂಭಣೆಯಿಂದ ನೆರವೇರಿಸಿದ್ದಾರೆ. ಕೊರೊನಾ ಮಧ್ಯೆಯೂ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ಭಕ್ತಿ ಪರವಶರಾದರು.

ಹರಕೆ ತೀರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಭಕ್ತರು: ಗ್ರಾಮಸ್ಥರು ಕಾಡಿನಲ್ಲಿರುವ ಕಸಗಲಪುರದ ಪಾರ್ವತಾಂಬೆಯನ್ನು ಹೊತ್ತು ತಂದು ಸೋಮವಾರ ಮತ್ತು ಮಂಗಳವಾರ ನಡೆದ ಜಾತ್ರೆಯಲ್ಲಿ ತಾಯಿಯ ಮೆರವಣಿಗೆ ಮಾಡಿದ್ರು. ಜಾತ್ರೆ ಹಿನ್ನೆಲೆಯಲ್ಲಿ ತಳಿರು ತೋರಣಗಳಿಂದ ಗ್ರಾಮವನ್ನು ಅಲಂಕರಿಸಿ ಪಾರ್ವತಾಂಬೆಯ ಅಹ್ವಾ‌ನ ಮಾಡಲಾಗಿತ್ತು. ಛತ್ರಿ, ಚಾಮರ, ಡೋಲು, ನಗಾರಿ ಮೂಲಕ ದೇವರ ಪೆಟ್ಟಿಗೆಯನ್ನು ಸ್ವಾಗತಿಸಿದ್ರು.

ಪಾರ್ವತಾಂಬೆಯ ವಿಗ್ರಹವನ್ನು ಸೇವಂತಿಗೆ ಹೂವಿನಿಂದ ಅಲಂಕರಿಸಿದ್ರು. ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಗ್ರಾಮದ ತುಂಬ ಮೆರವಣಿಗೆ ಮಾಡಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ ರದ್ದು ಮಾಡಲಾಗಿತ್ತು. ಆದರೆ ಗ್ರಾಮಸ್ಥರು ಸರಳವಾಗಿ ಅದನ್ನು ಅಯೋಜನೆ ಮಾಡಿದ್ದರು. ಈ ವೇಳೆ ಶಕ್ತಿ ದೇವತೆಯ ಹರಕೆ ತೀರಿಸಲು ಹರಕೆ ಹೊತ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಈ ರೀತಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ.

Published On - 12:14 pm, Wed, 2 December 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!