AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬೆ ಜಾತ್ರೆ.. ಹರಿದು ಬಂದಿತ್ತು ಭಕ್ತ ಸಾಗರ

ಕೊರೊನಾ ನಡುವೆಯೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಸಗೂಲಿ ಗ್ರಾಮದ ಅಲ್ಲಹಳ್ಳಿ ಪಾರ್ವತಾಂಭ ಜಾತ್ರೆಯನ್ನು ಭಕ್ತರು ವಿಜೃಂಭಣೆಯಿಂದ ನೆರವೇರಿಸಿದ್ದಾರೆ.

ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬೆ ಜಾತ್ರೆ.. ಹರಿದು ಬಂದಿತ್ತು ಭಕ್ತ ಸಾಗರ
ಕೊರೊನಾ ನಡುವೆಯೂ ವಿಜೃಂಭಣೆಯಿಂದ ಜರುಗಿದ ಪಾರ್ವತಾಂಬ ಜಾತ್ರೆ.
ಆಯೇಷಾ ಬಾನು
ಆಯೇಷಾ ಬಾನು|

Updated on:Dec 02, 2020 | 12:16 PM

Share

ಚಾಮರಾಜನಗರ: ಮಹಾಮಾರಿ ಕೊರೊನಾದಿಂದಾಗಿ ಅದೆಷ್ಟೋ ಮಹಾ ಕಾರ್ಯಗಳು ಸ್ಥಗಿತಗೊಳ್ಳುತ್ತಿವೆ. ಹೆಚ್ಚು ಜನ ಸಾಮೂಹಿಕವಾಗಿ ಸೇರದಂತೆ ಸರ್ಕಾರ ನಿರ್ಬಂಧ ಹೇರಿದೆ. ಆದ್ರೆ.. ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ದೇವರ ವಿಷಯ ಬಂದಾಗ ನಮ್ಮ ಜನ ಯಾವ ನಿರ್ಬಂಧಗಳಿಗೂ ಕ್ಯಾರೇ ಅನ್ನೋದಿಲ್ಲ.

ಇದೇ ರೀತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಸಗೂಲಿ ಗ್ರಾಮದ ಅಲ್ಲಹಳ್ಳಿ ಪಾರ್ವತಾಂಬ ಜಾತ್ರೆಯನ್ನು ಭಕ್ತರು ವಿಜೃಂಭಣೆಯಿಂದ ನೆರವೇರಿಸಿದ್ದಾರೆ. ಕೊರೊನಾ ಮಧ್ಯೆಯೂ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ಭಕ್ತಿ ಪರವಶರಾದರು.

ಹರಕೆ ತೀರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಭಕ್ತರು: ಗ್ರಾಮಸ್ಥರು ಕಾಡಿನಲ್ಲಿರುವ ಕಸಗಲಪುರದ ಪಾರ್ವತಾಂಬೆಯನ್ನು ಹೊತ್ತು ತಂದು ಸೋಮವಾರ ಮತ್ತು ಮಂಗಳವಾರ ನಡೆದ ಜಾತ್ರೆಯಲ್ಲಿ ತಾಯಿಯ ಮೆರವಣಿಗೆ ಮಾಡಿದ್ರು. ಜಾತ್ರೆ ಹಿನ್ನೆಲೆಯಲ್ಲಿ ತಳಿರು ತೋರಣಗಳಿಂದ ಗ್ರಾಮವನ್ನು ಅಲಂಕರಿಸಿ ಪಾರ್ವತಾಂಬೆಯ ಅಹ್ವಾ‌ನ ಮಾಡಲಾಗಿತ್ತು. ಛತ್ರಿ, ಚಾಮರ, ಡೋಲು, ನಗಾರಿ ಮೂಲಕ ದೇವರ ಪೆಟ್ಟಿಗೆಯನ್ನು ಸ್ವಾಗತಿಸಿದ್ರು.

ಪಾರ್ವತಾಂಬೆಯ ವಿಗ್ರಹವನ್ನು ಸೇವಂತಿಗೆ ಹೂವಿನಿಂದ ಅಲಂಕರಿಸಿದ್ರು. ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಗ್ರಾಮದ ತುಂಬ ಮೆರವಣಿಗೆ ಮಾಡಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ ರದ್ದು ಮಾಡಲಾಗಿತ್ತು. ಆದರೆ ಗ್ರಾಮಸ್ಥರು ಸರಳವಾಗಿ ಅದನ್ನು ಅಯೋಜನೆ ಮಾಡಿದ್ದರು. ಈ ವೇಳೆ ಶಕ್ತಿ ದೇವತೆಯ ಹರಕೆ ತೀರಿಸಲು ಹರಕೆ ಹೊತ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಈ ರೀತಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ.

Published On - 12:14 pm, Wed, 2 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್