AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ನಾಯಕತ್ವದ ಬಗ್ಗೆ ಶರದ್ ಪವಾರ್ ಆಕ್ಷೇಪ: ಟೀಕೆ ಬೇಡ ಎಂದ ಯಶೋಮತಿ ಠಾಕುರ್

ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡುವುದನ್ನು ನಿಲ್ಲಿಸುವಂತೆ ಮಹಾ ವಿಕಾಸ್ ಅಘಾಡಿ (MVA) ನಾಯಕರ ಬಳಿ ಕಾಂಗ್ರೆಸ್ ನಾಯಕಿ ಯಶೋಮತಿ ಠಾಕೂರ್ ಕೇಳಿಕೊಂಡಿದ್ದಾರೆ.

ರಾಹುಲ್ ನಾಯಕತ್ವದ ಬಗ್ಗೆ ಶರದ್ ಪವಾರ್ ಆಕ್ಷೇಪ: ಟೀಕೆ ಬೇಡ ಎಂದ ಯಶೋಮತಿ ಠಾಕುರ್
ಶರದ್ ಪವಾರ್, ರಾಹುಲ್ ಗಾಂಧಿ ಮತ್ತು ಯಶೋಮತಿ ಠಾಕುರ್
TV9 Web
| Edited By: |

Updated on:Apr 07, 2022 | 5:37 PM

Share

ದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕಿ ಹಾಗೂ ಮಹಿಳಾ ಮತ್ತು ಕಲ್ಯಾಣ ಸಚಿವೆ ಯಶೋಮತಿ ಠಾಕುರ್, ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದನ್ನು ಆಕ್ಷೇಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡುವುದನ್ನು ನಿಲ್ಲಿಸುವಂತೆ ಮಹಾ ವಿಕಾಸ್ ಅಘಾಡಿ (MVA) ನಾಯಕರ ಬಳಿ ಕೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಸುಸ್ಥಿರ ಆಡಳಿತ ಬೇಕಾದರೆ ಈ ರೀತಿ ನಡೆದುಕೊಳ್ಳಬಾರದು ಎಂದು ಪಕ್ಷದ ಇತರ ನಾಯಕರನ್ನು ಎಚ್ಚರಿಸಿದ್ದಾರೆ. ಸಮ್ಮಿಶ್ರ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಬೇಕೆಂದು ಹೇಳಿದ್ದಾರೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (MPCC)ಯ ಕಾರ್ಯನಿರ್ವಾಹಕ ಅಧ್ಯಕ್ಷೆಯಾಗಿ ಈ ಮಾತನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಮಹಾ ವಿಕಾಸ್ ಅಘಾಡಿಯ ರಚನೆಯು ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ನಾವು ನಂಬಿಕೆ ಇಟ್ಟಿದ್ದರಿಂದ ಸಾಧ್ಯವಾಗಿದೆ. ನಮ್ಮ ನಾಯಕತ್ವ ಸ್ಥಿರವಾಗಿದೆ ಎಂದೂ ಅವರು ಹೇಳಿದ್ದಾರೆ.

ಈ ಹಿಂದೆ, ಕಾಂಗ್ರೆಸ್​ನಲ್ಲಿ ರಾಹುಲ್ ಗಾಂಧಿ ನಾಯಕತ್ವವನ್ನು ಉದ್ದೇಶಿಸಿ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ನಾಯಕತ್ವದಲ್ಲಿ ಕೆಲವು ಸಮಸ್ಯೆಗಳಿವೆ. ಅವರು ನಾಯಕರಾಗಿ ಸ್ಥಿರತೆ ಹೊಂದಿಲ್ಲ ಎಂದು ಹೇಳಿದ್ದರು. ನಂತರದಲ್ಲಿ, ಶರದ್ ಪವಾರ್ ಹೇಳಿಕೆಯನ್ನು ರಾಹುಲ್ ಗಾಂಧಿಗೆ ನೀಡಿದ ಸಲಹೆ ಎಂದು ಎನ್​ಸಿಪಿ ಹೇಳಿಕೊಂಡಿತ್ತು.

ಈ ಘಟನೆಯ ಬೆನ್ನಲ್ಲೇ ಯಶೋಮತಿ ಠಾಕೂರ್ ಅವರಿಂದ MVA ನಾಯಕರಿಗೆ ಮೇಲಿನ ಸೂಚನೆ ಸಿಕ್ಕಿದೆ.

Published On - 4:33 pm, Sun, 6 December 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್