ಬೆಂಗಳೂರಿನಲ್ಲಿ ಸರಣಿ ಅಪಘಾತ, ಕ್ರೇನ್ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬ್ರೇಕ್ ವಿಫಲವಾಗಿ ಕ್ರೇನ್ ಹರಿದು ಪಾದಚಾರಿ ಮುನಿಯಪ್ಪ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ಸಂಭವಿಸಿದೆ. ಮೊದಲಿಗೆ ಕ್ರೇನ್​ ಬ್ರೇಕ್ ವಿಫಲವಾಗಿ ಸರಣಿ ಅಪಘಾತವಾಗಿದೆ. ಪಾದಚಾರಿ ಮೇಲೆ ಹರಿದು ನಂತರ ಆಟೋ ಹಾಗೂ ಕಾರಿಗೆ ಕ್ರೇನ್​ ಡಿಕ್ಕಿಯೊಡೆದಿದೆ. ಆಟೋ ಸಂಪೂರ್ಣ ಜಖಂ ಆಗಿದ್ದು, ಇಬ್ಬರಿಗೆ ಗಾಯಗಳಾಗಿದೆ. ಅಪಘಾತದ ನಂತರ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸರಣಿ ಅಪಘಾತ, ಕ್ರೇನ್ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​ Edited By:

Updated on: Jun 10, 2020 | 4:51 PM

ಬೆಂಗಳೂರು: ಬ್ರೇಕ್ ವಿಫಲವಾಗಿ ಕ್ರೇನ್ ಹರಿದು ಪಾದಚಾರಿ ಮುನಿಯಪ್ಪ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ಸಂಭವಿಸಿದೆ.

ಮೊದಲಿಗೆ ಕ್ರೇನ್​ ಬ್ರೇಕ್ ವಿಫಲವಾಗಿ ಸರಣಿ ಅಪಘಾತವಾಗಿದೆ. ಪಾದಚಾರಿ ಮೇಲೆ ಹರಿದು ನಂತರ ಆಟೋ ಹಾಗೂ ಕಾರಿಗೆ ಕ್ರೇನ್​ ಡಿಕ್ಕಿಯೊಡೆದಿದೆ. ಆಟೋ ಸಂಪೂರ್ಣ ಜಖಂ ಆಗಿದ್ದು, ಇಬ್ಬರಿಗೆ ಗಾಯಗಳಾಗಿದೆ. ಅಪಘಾತದ ನಂತರ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us