AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ, ಭಕ್ತರಲ್ಲಿ ಆತಂಕ

ಉಡುಪಿ: ಕೃಷ್ಣಮಠದ ಭಕ್ತರಲ್ಲಿ ಆತಂಕ ಮನೆಮಾಡಿದೆ. ಯಾಕಂದ್ರೆ, ವಿಶ್ವಸಂತ, ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶ್ರೀಗಳ ಆರೋಗ್ಯ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಭಕ್ತಗಣದಲ್ಲಿ ಆತಂಕ ಮನೆ ಮಾಡಿದೆ. ಕೃಷ್ಣಮಠದ ತುಂಬೆಲ್ಲ ಆತಂಕ. ಕೋಟ್ಯಂತರ ಭಕ್ತರಲ್ಲಿ ತಳಮಳ. ಆಸ್ಪತ್ರೆಯತ್ತ ದೌಡಾಯಿಸ್ತಿರೋ ರಾಜಕಾರಣಿಗಳು, ಎದೆಬಡಿತ ಹೆಚ್ಚಿಸುತ್ತಿರೋ ವೈದ್ಯರ ಮಾತು. ಉಸಿರಾಟದ ತೊಂದರೆಯಿಂದ ಬಳಲುತ್ತಿರೋ ಪೇಜಾವರ ಶ್ರೀಗಳ ಆರೋಗ್ಯ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದ್ದು, ನಾಡಿನಾದ್ಯಂತ ಅತಂಕ ಮನೆಮಾಡಿದೆ. ವಿಶ್ವಸಂತ, ಮಹಾಗುರು, ಕೃಷ್ಣಮಠದ ಕೀರ್ತಿ ಕಳಶವಾಗಿರೋ ಶ್ರೀಗಳ ಆರೋಗ್ಯಕ್ಕಾಗಿ ಪ್ರಾರ್ಥನೆ, […]

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ,  ಭಕ್ತರಲ್ಲಿ ಆತಂಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 29, 2019 | 6:24 AM

Share

ಉಡುಪಿ: ಕೃಷ್ಣಮಠದ ಭಕ್ತರಲ್ಲಿ ಆತಂಕ ಮನೆಮಾಡಿದೆ. ಯಾಕಂದ್ರೆ, ವಿಶ್ವಸಂತ, ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶ್ರೀಗಳ ಆರೋಗ್ಯ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಭಕ್ತಗಣದಲ್ಲಿ ಆತಂಕ ಮನೆ ಮಾಡಿದೆ.

ಕೃಷ್ಣಮಠದ ತುಂಬೆಲ್ಲ ಆತಂಕ. ಕೋಟ್ಯಂತರ ಭಕ್ತರಲ್ಲಿ ತಳಮಳ. ಆಸ್ಪತ್ರೆಯತ್ತ ದೌಡಾಯಿಸ್ತಿರೋ ರಾಜಕಾರಣಿಗಳು, ಎದೆಬಡಿತ ಹೆಚ್ಚಿಸುತ್ತಿರೋ ವೈದ್ಯರ ಮಾತು. ಉಸಿರಾಟದ ತೊಂದರೆಯಿಂದ ಬಳಲುತ್ತಿರೋ ಪೇಜಾವರ ಶ್ರೀಗಳ ಆರೋಗ್ಯ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದ್ದು, ನಾಡಿನಾದ್ಯಂತ ಅತಂಕ ಮನೆಮಾಡಿದೆ. ವಿಶ್ವಸಂತ, ಮಹಾಗುರು, ಕೃಷ್ಣಮಠದ ಕೀರ್ತಿ ಕಳಶವಾಗಿರೋ ಶ್ರೀಗಳ ಆರೋಗ್ಯಕ್ಕಾಗಿ ಪ್ರಾರ್ಥನೆ, ಪೂಜೆ ಮೊಳಗಿದೆ.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ, ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ವೆಂಟಿಲೇಟರ್ ಮೂಲಕ ಉಸಿರಾಡ್ತಿರುವ 88 ವರ್ಷದ ಶ್ರೀಗಳ ಆರೋಗ್ಯ, ಕಳೆದೆರಡು ದಿನದಿಂದ ಮತ್ತಷ್ಟು ಬಿಗಡಾಯಿಸಿದೆ. ಉಸಿರಾಟ ಮತ್ತು ನ್ಯೂಮೋನಿಯಾ ಸಮಸ್ಯೆಯಿಂದಾಗಿ ಶ್ರೀಗಳು ಗಂಭೀರ ಸ್ಥಿತಿ ತಲುಪಿದ್ದು, ಕೃಷ್ಣಮಠದ ಹಿರಿಯ ಜೀವವನ್ನ ಉಳಿಸಿಕೊಳ್ಳೋಕೆ ವೈದ್ಯರು ಹರಸಾಹಸ ಮಾಡ್ತಿದ್ದಾರೆ.

ಕೃಷ್ಣಮಠದಲ್ಲಿ ಐದು ಪರ್ಯಾಯ ಪೂರೈಸಿರೋ ಶ್ರೀಗಳ ಆರೋಗ್ಯ ಸ್ಥಿತಿ ಎಲ್ಲರಿಗೂ ಆತಂಕ ಸೃಷ್ಟಿಸಿದೆ. ಆಸ್ಪತ್ರೆ ಹೆಲ್ತ್​ ಬುಲೆಟಿನ್​​​​ನಲ್ಲೂ ಶ್ರೀಗಳು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ವಿಷ್ಯ ಹೊರಬೀಳ್ತಿದ್ದಂತೆ, ಆಸ್ಪತ್ರೆಯತ್ತ ಅನೇಕ ಗಣ್ಯರು ದೌಡಾಯಿಸಿದ್ರು. ಸಂಸದೆ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಮಠಗಳ ಪೀಠಾಧಿಪತಿಗಳು ಕೂಡ ಶ್ರೀಗಳ ಆರೋಗ್ಯ ವಿಚಾರಿಸಲು ಆಗಮಿಸಿದ್ರು. ಇನ್ನು ಶ್ರೀಗಳು ಚಿಂತಾಜನಕ ಸ್ಥಿತಿ ಬಗ್ಗೆ ಸಿಎಂ ಯಡಿಯೂರಪ್ಪ ಕೂಡ ತಿಳಿಸಿದ್ರು. ಹಾಗೇ, ಕೆಎಂಸಿ ಆಸ್ಪತ್ರೆಗೆ ಆಗಮಿಸಿ ಶ್ರೀಗಳ ಆರೋಗ್ಯದ ಮಾಹಿತಿ ಪಡೆದ್ರು.

ಸಿಎಂ ಕಾರ್ಯಕ್ರಮ ರದ್ದು.. ಉಡುಪಿಯಲ್ಲೇ ಬಿಎಸ್​ವೈ ವಾಸ್ತವ್ಯ..! ಇನ್ನು ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಿಎಂ ಯಡಿಯೂರಪ್ಪ ಉಡುಪಿಯಲ್ಲೇ ಉಳಿದಕೊಳ್ಳಲಿದ್ದಾರೆ. ಹಾಗೇ, ಶ್ರೀಗಳ ಆರೋಗ್ಯದ ಕುರಿತು ಕ್ಷಣಕ್ಷಣದ ಮಾಹಿತಿ ಪಡೆಯಲಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿಗಳು ನಾಳಿನ ಕಾರ್ಯಕ್ರಮಗಳೆಲ್ಲವನ್ನೂ ರದ್ದು ಮಾಡಿದ್ದಾರೆ.

ಶ್ರೀಗಳನ್ನ ಮಠಕ್ಕೆ ಸ್ಥಳಾಂತರಿಸಲು ಚಿಂತನೆ! ಹೌದು, ಶ್ರೀಗಳ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಿಸದ ಹಿನ್ನೆಲೆಯಲ್ಲಿ, ಶ್ರೀಗಳನ್ನ ಮಠಕ್ಕೆ ಸ್ಥಳಾಂತರ ಮಾಡುವುದಾಗಿ ಪೇಜಾವರ ಕಿರಿಯ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪೇಜಾವರ ಮಠದ 32ನೇ ಪೀಠಾಧಿಪತಿಯಾಗಿರೋ ವಿಶ್ವೇಶ ತೀರ್ಥರ ಆರೋಗ್ಯ ಸ್ಥಿತಿ ಭಕ್ತರಲ್ಲೂ ತಳಮಳ ಮೂಡಿಸಿತು. ಮಣಿಪಾಲದ ಆಸ್ಪತ್ರೆಯತ್ತ ನೂರಾರು ಭಕ್ತರು ಆಗಮಿಸಿದ್ರು. ಆದ್ರೆ, ಚಿಕಿತ್ಸೆಗೆ ತೊಂದರೆ ಆಗಲಿದೆ ಅಂತ ವೈದ್ಯರು ಭಕ್ತರು ಹಾಗೂ ಕೆಲ ನಾಯಕರನ್ನ ಆಸ್ಪತ್ರೆಗೆ ಬಿಡಲಿಲ್ಲ. ಒಟ್ನಲ್ಲಿ ಏಳು ವರ್ಷಕ್ಕೆ ಮಠದ ಉತ್ತರಾಧಿಕಾರಿಯಾದ ಪೇಜಾವರ ಶ್ರೀ, ವಿಶ್ವಗುರುವಾಗಿ ಬೆಳೆದು ನಿಂತವರು.. ದೇಶಾದ್ಯಂತ ಸಾವಿರಾರು ಶಿಷ್ಯರನ್ನ ಹೊಂದಿರುವ ಶ್ರೀಗಳ ಆರೋಗ್ಯ ಸ್ಥಿತಿ ಆತಂಕ ಮೂಡಿಸಿದ್ದು, ಪೇಜಾವರ ಶ್ರೀ ಚೇತರಿಕೆಗಾಗಿ ಎಲ್ಲೆಡೆ ಪ್ರಾರ್ಥನೆ ನಡೆಯುತ್ತಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!