AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯ ಇದ್ದವರು Mask ಹಾಕ್ಕೊಳ್ಳಲಿ ಅಷ್ಟೇ; ದಂಡದ ಮೊತ್ತ ಕಡಿಮೆ ಮಾಡೋಲ್ಲ: ಕಮಿಷನರ್

ಬೆಂಗಳೂರು: ಕೊರೊನಾ ಹೋಗಲಾಡಿಸಲು ಮಾಸ್ಕ್​ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಂಡದ ಮೊತ್ತ ವಿಪರೀತವಾಯಿತು; ಅದಕ್ಕಿಂತ ಹೆಚ್ಚಾಗಿ ದಂಡ ವಿಧಿಸುವ ಪ್ರಕ್ರಿಯೆಯೂ ವಿಪರೀತಕ್ಕೆ ಇಟ್ಟುಕೊಂಡಿದೆ ಎಂದು ಜನ ಅಸಮಾಧಾನಗೊಂಡಿದ್ದಾರೆ. ಆದ್ರೆ ಜನ ಎಷ್ಟೇ ಅಲವತ್ತುಕೊಂಡರೂ ಅದು ಸರ್ಕಾರದ ಕಿವಿ ಮೇಲೆ ಬಿದ್ದಿಲ್ಲ. ಬದಲಿಗೆ ಪೊಲೀಸರನ್ನೂ ಅಖಾಡಕ್ಕೆ ಇಳಿಸಿದ್ದು, ಮಾಸ್ಕ್​ ಇಲ್ಲಾಂದ್ರೆ ದಂಡ ಹಾಕಿ ಎಂದು ದಂಡ ಪ್ರಯೋಗಕ್ಕೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ […]

ಭಯ ಇದ್ದವರು Mask ಹಾಕ್ಕೊಳ್ಳಲಿ ಅಷ್ಟೇ; ದಂಡದ ಮೊತ್ತ ಕಡಿಮೆ ಮಾಡೋಲ್ಲ: ಕಮಿಷನರ್
ಸಾಧು ಶ್ರೀನಾಥ್​
| Edited By: |

Updated on: Oct 07, 2020 | 2:18 PM

Share

ಬೆಂಗಳೂರು: ಕೊರೊನಾ ಹೋಗಲಾಡಿಸಲು ಮಾಸ್ಕ್​ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಂಡದ ಮೊತ್ತ ವಿಪರೀತವಾಯಿತು; ಅದಕ್ಕಿಂತ ಹೆಚ್ಚಾಗಿ ದಂಡ ವಿಧಿಸುವ ಪ್ರಕ್ರಿಯೆಯೂ ವಿಪರೀತಕ್ಕೆ ಇಟ್ಟುಕೊಂಡಿದೆ ಎಂದು ಜನ ಅಸಮಾಧಾನಗೊಂಡಿದ್ದಾರೆ. ಆದ್ರೆ ಜನ ಎಷ್ಟೇ ಅಲವತ್ತುಕೊಂಡರೂ ಅದು ಸರ್ಕಾರದ ಕಿವಿ ಮೇಲೆ ಬಿದ್ದಿಲ್ಲ. ಬದಲಿಗೆ ಪೊಲೀಸರನ್ನೂ ಅಖಾಡಕ್ಕೆ ಇಳಿಸಿದ್ದು, ಮಾಸ್ಕ್​ ಇಲ್ಲಾಂದ್ರೆ ದಂಡ ಹಾಕಿ ಎಂದು ದಂಡ ಪ್ರಯೋಗಕ್ಕೆ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮಾತನಾಡಿದ್ದು, (ಕೊರೊನಾ ಸೋಂಕಿನ) ಭಯ ಇದ್ದವರು ಮಾಸ್ಕ್​ ಹಾಕಿಕೊಳ್ಳಲಿ ಅಷ್ಟೇ; ದಂಡದ ಮೊತ್ತ ಮಾತ್ರ ಕಡಿಮೆ ಮಾಡುವುದಿಲ್ಲ ಎಂದು ಸಾರಿದ್ದಾರೆ.

ಮಾಸ್ಕ್ ಧರಿಸದವರಿಗೆ 1000 ರೂ. ದಂಡ ವಿಧಿಸುವುದು ಖಚಿತ. ಒಂದು ಸಾವಿರ ರೂಪಾಯಿ ದಂಡದ ಮೊತ್ತ ಮಾತ್ರ ಕಡಿಮೆಯಾಗುವುದಿಲ್ಲ. ಜನರಿಗೆ ಭಯ ಇದ್ದರೆ ಖಂಡಿತವಾಗಿ ಮಾಸ್ಕ್ ಹಾಕಿಕೊಳ್ಳುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಮಾರ್ಷಲ್‌ಗಳ ಜೊತೆಗೂಡಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಮಾಸ್ಕ್ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ