ಗಾರ್ಮೆಂಟ್ಸ್​ಗೆ ಹೋದ್ರೆ ಕೊರೊನಾ ಬರುತ್ತೆ ಎಂದು ಮಹಿಳೆಯರ ಮೇಲೆ ಹಲ್ಲೆ! ಎಲ್ಲಿ?

ತುಮಕೂರು: ಗಾರ್ಮೆಂಟ್ಸ್‌ ಕೆಲಸಕ್ಕೆ ಹೋದರೆ ಕೊರೊನಾ ಬರುತ್ತದೆ ಎಂದು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ರಂಗೇಗೌಡನ ಪಾಳ್ಯದಲ್ಲಿ ನಡೆದಿದೆ. ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದ ಬಸ್​ ತಡೆದು ರಂಗೇಗೌಡನ ಪಾಳ್ಯದ ನಿವಾಸಿ ರಘು, ತಿಮ್ಮಯ್ಯ ಎಂಬುವರು ಹಲ್ಲೆ ಮಾಡಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ತುಮಕೂರು ಜಿಲ್ಲಾಧಿಕಾರಿ ಅನುಮತಿ ಪಡೆದು ಬೆಂಗಳೂರು ಬಳಿಯ ಮಾಕಳಿ ಸಮೀಪದ ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದರು. ಬಸ್​ನಲ್ಲಿ 15 ಜನ ಪ್ರಯಣ ಮಾಡುತ್ತಿದ್ದರು. ಈ ವೇಳೆ ಕೆಲಸಕ್ಕೆ ಹೋಗಬೇಡಿ ಎಂದು ಗಲಾಟೆ […]

ಗಾರ್ಮೆಂಟ್ಸ್​ಗೆ ಹೋದ್ರೆ ಕೊರೊನಾ ಬರುತ್ತೆ ಎಂದು ಮಹಿಳೆಯರ ಮೇಲೆ ಹಲ್ಲೆ! ಎಲ್ಲಿ?
ಸಾಧು ಶ್ರೀನಾಥ್​

Updated on: May 11, 2020 | 1:44 PM

ತುಮಕೂರು: ಗಾರ್ಮೆಂಟ್ಸ್‌ ಕೆಲಸಕ್ಕೆ ಹೋದರೆ ಕೊರೊನಾ ಬರುತ್ತದೆ ಎಂದು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ರಂಗೇಗೌಡನ ಪಾಳ್ಯದಲ್ಲಿ ನಡೆದಿದೆ. ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದ ಬಸ್​ ತಡೆದು ರಂಗೇಗೌಡನ ಪಾಳ್ಯದ ನಿವಾಸಿ ರಘು, ತಿಮ್ಮಯ್ಯ ಎಂಬುವರು ಹಲ್ಲೆ ಮಾಡಿದ್ದಾರೆ.

ಲಾಕ್​ಡೌನ್ ಸಡಿಲಿಕೆ ಬಳಿಕ ತುಮಕೂರು ಜಿಲ್ಲಾಧಿಕಾರಿ ಅನುಮತಿ ಪಡೆದು ಬೆಂಗಳೂರು ಬಳಿಯ ಮಾಕಳಿ ಸಮೀಪದ ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದರು. ಬಸ್​ನಲ್ಲಿ 15 ಜನ ಪ್ರಯಣ ಮಾಡುತ್ತಿದ್ದರು. ಈ ವೇಳೆ ಕೆಲಸಕ್ಕೆ ಹೋಗಬೇಡಿ ಎಂದು ಗಲಾಟೆ ಮಾಡಿದ್ದಾರೆ. ಕೆಲಸಕ್ಕೆ ಹೋಗಿ ಬಂದರೆ ಗ್ರಾಮಕ್ಕೆ ಕೊರೊನಾ ಬರುತ್ತೆ ಎಂದು ನಾಗರತ್ನ, ಮುನಿಯಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us