AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬೇಸತ್ತ ಜನರಿಗೆ ಸಿಕ್ಕಾಪಟ್ಟೆ ಥ್ರಿಲ್ ನೀಡ್ತಿದೆ ಬಂಡೀಪುರ ಸಫಾರಿ!

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಕೊರೊನಾದಿಂದಾಗಿ ನಾಲ್ಕೈದು ತಿಂಗಳು ಸಫಾರಿ ಬಂದ್‌ ಆಗಿತ್ತು. ಎರಡು ವಾರಗಳ ಹಿಂದೆ ಸಫಾರಿ ಶುರುವಾದ್ರೂ ಪ್ರವಾಸಿಗರು ಇತ್ತ ಮುಖ ಮಾಡಿರಲಿಲ್ಲ. ಇದೀಗ ಕ್ರಮೇಣ ಬಂಡೀಪುರಕ್ಕೆ ತೆರಳುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗ್ತಾ ಇದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಅರಣ್ಯ.. ಸ್ವಚ್ಛಂದವಾಗಿ ವಿಹರಿಸುತ್ತಿರುವ ವನ್ಯಜೀವಿಗಳು.. ತುಂಬಿ ತುಳುಕುತ್ತಿರುವ ಕೆರೆ ಕಟ್ಟೆಗಳು.. ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಉದ್ಯಾನವನದಲ್ಲಿ ನಿತ್ಯ ಕಾಣೋ ದೃಶ್ಯಗಳಿವು. ರಾಜ್ಯದಲ್ಲೇ ಅತಿ ಹೆಚ್ಚು […]

ಕೊರೊನಾದಿಂದ ಬೇಸತ್ತ ಜನರಿಗೆ ಸಿಕ್ಕಾಪಟ್ಟೆ ಥ್ರಿಲ್ ನೀಡ್ತಿದೆ ಬಂಡೀಪುರ ಸಫಾರಿ!
ಆಯೇಷಾ ಬಾನು
| Edited By: |

Updated on: Aug 25, 2020 | 4:05 PM

Share

ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಕೊರೊನಾದಿಂದಾಗಿ ನಾಲ್ಕೈದು ತಿಂಗಳು ಸಫಾರಿ ಬಂದ್‌ ಆಗಿತ್ತು. ಎರಡು ವಾರಗಳ ಹಿಂದೆ ಸಫಾರಿ ಶುರುವಾದ್ರೂ ಪ್ರವಾಸಿಗರು ಇತ್ತ ಮುಖ ಮಾಡಿರಲಿಲ್ಲ. ಇದೀಗ ಕ್ರಮೇಣ ಬಂಡೀಪುರಕ್ಕೆ ತೆರಳುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗ್ತಾ ಇದೆ.

ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಅರಣ್ಯ.. ಸ್ವಚ್ಛಂದವಾಗಿ ವಿಹರಿಸುತ್ತಿರುವ ವನ್ಯಜೀವಿಗಳು.. ತುಂಬಿ ತುಳುಕುತ್ತಿರುವ ಕೆರೆ ಕಟ್ಟೆಗಳು.. ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಉದ್ಯಾನವನದಲ್ಲಿ ನಿತ್ಯ ಕಾಣೋ ದೃಶ್ಯಗಳಿವು.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳಿರುವ ತಾಣ ಬಂಡೀಪುರದಲ್ಲಿ ಎತ್ತ ನೋಡಿದರೂ ಹಸಿರು ವನರಾಶಿ ಕಂಡುಬರುತ್ತಿದೆ. 160ಕ್ಕೂ ಹೆಚ್ಚು ಹುಲಿಗಳು, ಎರಡು ಸಾವಿರಕ್ಕೂ ಹೆಚ್ಚು ಆನೆಗಳು ಸೇರಿದಂತೆ ಚಿರತೆ, ಕರಡಿ, ಜಿಂಕೆ, ಕಾಡೆಮ್ಮೆ, ಮೊದಲಾದ ವನ್ಯಜೀವಿಗಳ ಆವಾಸ ಸ್ಥಾನ.

ಈ ಬಾರಿ ಜಿಲ್ಲೆಯಲ್ಲಿ ವಾಡಿಕೆ ಮಳೆಯಾಗುತ್ತಿರೋದ್ರಿಂದ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ನೀರು ಅರಸಿ ಕಬಿನಿ, ಮದುಮಲೈ ಸೇರಿದಂತೆ ದೂರದ ಅರಣ್ಯ ಪ್ರದೇಶಗಳಿಗೆ ಹೋಗಿದ್ದ ವನ್ಯಜೀವಿಗಳು ಮರಳಿ ಬಂಡೀಪುರಕ್ಕೆ ಬರಲಾಂಭಿಸಿವೆ. ಹೀಗಾಗಿ, ವನ್ಯಜೀವಿಗಳ ದರ್ಶನವಾಗ್ತಿರೋದ್ರಿಂದ ಸಫಾರಿ ಜೋನ್‌ನಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ಸಿಗ್ತಿದೆ.

ಬಂಡಿಪುರದಲ್ಲಿ ಸಫಾರಿಗೆ ಪ್ರವಾಸಿಗರ ದಂಡು ಹರಿದುಬರ್ತಿದೆ. ಕೊರೊನಾದಿಂದ ಮನೆಯಲ್ಲಿಯೇ ಕುಳಿತಿದ್ದ ಮಂದಿ ನಿಧಾನವಾಗಿ ಇತ್ತ ಮುಖ ಮಾಡುತ್ತಿದ್ದಾರೆ. ಹಲವು ದಿನಗಳ ಕಾಲ ಮನೆಯಲ್ಲಿ ಇದ್ದವರಿಗೆ ಬಂಡಿಪುರ ದರ್ಶನ ಸಂತಸ ತರಿಸಿದೆ.

ಮಕ್ಕಳಿಗೆ ಬೇಸಿಗೆ ರಜೆ ವೇಳೆ ಅರಣ್ಯ ವೀಕ್ಷಣೆಗೆ ಅಡ್ಡವಾಗಿದ್ದ ಕೊರೊನಾ ಹೆಮ್ಮಾರಿ ಬಗ್ಗೆ ಜನ ಸ್ವಲ್ಪ ಭಯ ಬಿಟ್ಟಿದ್ದಾರೆ. ಕೊರೊನಾ ನಿಯಮ ಪಾಲಿಸಿಕೊಂಡು ಸಫಾರಿಗೆ ಬಂದ್ರೆ, ಪ್ರವಾಸಿಗರಿಗಂತೂ ಕಣ್ಣಿಗೆ ಆನಂದ ಗ್ಯಾರಂಟಿ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ