AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ದಿನ ಹಿಂದೆ ಅಂತ್ಯಸಂಸ್ಕಾರ ಮಾಡಿದ್ದು ಯಾರ ಶವಕ್ಕೆ? BIMS ಯಡವಟ್ಟು, ಸಂಬಂಧಿಕರು ಕಂಗಾಲು

ಬೆಳಗಾವಿ: ಯಾರದ್ದೋ ಶವವನ್ನ ಇನ್ಯಾರಿಗೋ‌ ನೀಡಿದ ಘಟನೆ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶವ ಪಡೆದವರು ಇದು ನಮ್ಮವರದೆ ಶವವೆಂದು ಅಂತ್ಯಸಂಸ್ಕಾರ ಮಾಡಿದ ಬಳಿಕ.. ಆಸ್ಪತ್ರೆಯಿಂದ ಕರೆ ಬಂದಿದೆ. ನಿಮ್ಮ ಸಂಬಂಧಿಯ ಶವ ಶವಾಗಾರದಲ್ಲಿದೆ, ಯಾಕೆ ತೆಗೆದುಕೊಂಡು ಹೋಗಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ವಿಚಾರಿಸಿದ್ದಾರೆ. ಅದಾಗತಾನೆ ತಮ್ಮವರದ್ದೇ ಎಂದು ಶವಸಂಸದಕಾರ ಮಾಡಿ ಬಂದಿದ್ದ ಬಂಧುಗಳು ಸಿಬ್ಬಂದಿಯ ಪ್ರಶ್ನೆಗೆ ತಬ್ಬಿಬ್ಬಾಗಿರುವ ಘಟನೆ ಬೆಳಗಾವಿಯಲ್ಲಿ ನೆಡೆದಿದೆ. ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಅಸ್ತಮಾದಿಂದ ಬಳಲುತ್ತಿದ್ದ 57 ವರ್ಷದ ಮಹಿಳೆಗೆ ಸೋಂಕು ದೃಢವಾಗಿತ್ತು. […]

2ದಿನ ಹಿಂದೆ ಅಂತ್ಯಸಂಸ್ಕಾರ ಮಾಡಿದ್ದು ಯಾರ ಶವಕ್ಕೆ? BIMS ಯಡವಟ್ಟು, ಸಂಬಂಧಿಕರು ಕಂಗಾಲು
ಸಾಧು ಶ್ರೀನಾಥ್​
|

Updated on: Jul 20, 2020 | 6:08 PM

Share

ಬೆಳಗಾವಿ: ಯಾರದ್ದೋ ಶವವನ್ನ ಇನ್ಯಾರಿಗೋ‌ ನೀಡಿದ ಘಟನೆ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶವ ಪಡೆದವರು ಇದು ನಮ್ಮವರದೆ ಶವವೆಂದು ಅಂತ್ಯಸಂಸ್ಕಾರ ಮಾಡಿದ ಬಳಿಕ.. ಆಸ್ಪತ್ರೆಯಿಂದ ಕರೆ ಬಂದಿದೆ. ನಿಮ್ಮ ಸಂಬಂಧಿಯ ಶವ ಶವಾಗಾರದಲ್ಲಿದೆ, ಯಾಕೆ ತೆಗೆದುಕೊಂಡು ಹೋಗಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ವಿಚಾರಿಸಿದ್ದಾರೆ. ಅದಾಗತಾನೆ ತಮ್ಮವರದ್ದೇ ಎಂದು ಶವಸಂಸದಕಾರ ಮಾಡಿ ಬಂದಿದ್ದ ಬಂಧುಗಳು ಸಿಬ್ಬಂದಿಯ ಪ್ರಶ್ನೆಗೆ ತಬ್ಬಿಬ್ಬಾಗಿರುವ ಘಟನೆ ಬೆಳಗಾವಿಯಲ್ಲಿ ನೆಡೆದಿದೆ.

ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಅಸ್ತಮಾದಿಂದ ಬಳಲುತ್ತಿದ್ದ 57 ವರ್ಷದ ಮಹಿಳೆಗೆ ಸೋಂಕು ದೃಢವಾಗಿತ್ತು. ಚಿಕಿತ್ಸೆ ಸಿಗದೆ ಕೊವಿಡ್ ವಾರ್ಡ್ ನಲ್ಲಿ ಮಹಿಳೆ ಸಾವನ್ನಪ್ಪಿದಾರೆಂಬ ಮಾತೂ ಕೇಳಿಬಂದಿತ್ತು. ಜುಲೈ 18ರಂದು ಮಹಿಳೆ ಶವವನ್ನು ಪಡೆದಕೊಂಡಿದ್ದ ಸಂಬಂಧಿಕರು ಅಂದೇ ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಎರಡು ದಿನಗಳ ನಂತರ ಕರೆ ಮಾಡಿದ ಆಸ್ಪತ್ರೆ ಸಿಬ್ಬಂದಿ ನಿಮ್ಮ ಸಂಬಂಧಿಯ ಶವ ಶವಾಗಾರದಲ್ಲಿದೆ, ಬಂದು ಶವ ತೆಗೆದುಕೊಂಡು ಹೋಗಿ ಎಂದಿದ್ದಾರೆ.

ಸಿಬ್ಬಂದಿ ಪೋನ್ ಕರೆಯಿಂದ ದಿಕ್ಕೆ ತೋಚದಂತಾದ ಕುಟುಂಬಸ್ಥರು ಎರಡು ದಿನಗಳ ಹಿಂದೆ ಯಾರ ಶವ ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ಕಂಗಾಲಾಗಿದ್ದಾರೆ. ಈಗಾಗಲೇ ಶವ ಸಂಸ್ಕಾರ ಮಾಡಿದ್ದೇವೆ ಅಂತಾ ಹೇಳಿದ್ರೂ ಆ ಶವ ನಿಮ್ಮ ಸಂಬಂಧಿಯದಲ್ಲ, ನಿಮ್ಮ ಸಂಬಂಧಿ ಶವ ಇನ್ನೂ ಶವಾಗಾರದಲ್ಲಿದೆ, ಬಂದು ತೆಗೆದುಕೊಂಡು ಹೋಗಿ ಅಂತಾ ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಫೊನ್ ಮಾಡಿ ಕರೆಯುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಜೊತೆಗೆ ಯಾರದೋ ಶವ ಇನ್ಯಾರಿಗೋ ನೀಡ್ತಿರುವ ಬಿಮ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಮ್ಸ್ ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು