ಕಾವೇರಿ ತೀರ್ಥೋದ್ಭವ: ಕೊವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೆ ಮಾತ್ರ ಬನ್ನಿ

ಕೊಡಗು: ಅಕ್ಟೋಬರ್ 17ರಂದು ಬೆಳಗ್ಗೆ 7 ಗಂಟೆ 03 ನಿಮಿಷಕ್ಕೆ ಜರುಗಲಿರುವ ಕಾವೇರಿ ತೀರ್ಥೋದ್ಭವದ ಕುರಿತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸುದ್ದಿಗೋಷ್ಠಿ ನಡೆಸಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗ್ತಿದೆ. ಇನ್ನೆರೆಡು ತಿಂಗಳಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ, ಈ ಬಾರಿ ಕೊವಿಡ್ ನೆಗೆಟಿವ್ ಸರ್ಟಿಫಿಕೇಟ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುವುದು. ತೀರ್ಥೋದ್ಭವದ ಸಮಯದಲ್ಲಿ ಸೀಮಿತ ವ್ಯಕ್ತಿಗಳಿಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ. 35 ಸ್ವಯಂಸೇವಕರು, ದೇವಾಲಯ ಸಮಿತಿ ಸದಸ್ಯರು ಮತ್ತು […]

ಕಾವೇರಿ ತೀರ್ಥೋದ್ಭವ: ಕೊವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೆ ಮಾತ್ರ ಬನ್ನಿ
Edited By:

Updated on: Oct 13, 2020 | 2:53 PM

ಕೊಡಗು: ಅಕ್ಟೋಬರ್ 17ರಂದು ಬೆಳಗ್ಗೆ 7 ಗಂಟೆ 03 ನಿಮಿಷಕ್ಕೆ ಜರುಗಲಿರುವ ಕಾವೇರಿ ತೀರ್ಥೋದ್ಭವದ ಕುರಿತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸುದ್ದಿಗೋಷ್ಠಿ ನಡೆಸಿದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗ್ತಿದೆ. ಇನ್ನೆರೆಡು ತಿಂಗಳಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ, ಈ ಬಾರಿ ಕೊವಿಡ್ ನೆಗೆಟಿವ್ ಸರ್ಟಿಫಿಕೇಟ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುವುದು. ತೀರ್ಥೋದ್ಭವದ ಸಮಯದಲ್ಲಿ ಸೀಮಿತ ವ್ಯಕ್ತಿಗಳಿಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.

35 ಸ್ವಯಂಸೇವಕರು, ದೇವಾಲಯ ಸಮಿತಿ ಸದಸ್ಯರು ಮತ್ತು ಆಯ್ದ ಜನಪ್ರತಿನಿಧಿಗಳಿಗೆ ಮಾತ್ರ ಅವಕಾಶ ಇರುತ್ತದೆ. ಸಮಿತಿಯವರು ಮತ್ತು ಸ್ವಯಂಸೇವಕರಿಗೆ ಕೊವಿಡ್ ಟೆಸ್ಟ್ ಕಡ್ಡಾಯ. ಮೆಡಿಕಲ್ ರಿಪೋರ್ಟ್ ಇದ್ದವರಿಗೆ ಮಾತ್ರ ಪ್ರವೇಶ ಎಂದು ಹೇಳಿದರು.

ತೀರ್ಥೋದ್ಭವ ಬಳಿಕ ಎಂದಿನಂತೆ ಪೂಜಾ ಕಾರ್ಯ ನಡೆಸಲಾಗುವುದು ಹಾಗೂ ಆವಾಗ ಮಾತ್ರ ಭಕ್ತರು ಬಂದು ಪೂಜೆ ಮಾಡಿಸಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಕೊಡಗು ಡಿಸಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ಕೊಟ್ಟಿದ್ದಾರೆ.