AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್​ಡೌನ್​ಗೆ ಹೆದರಿ ಬೆಂಗಳೂರು ಬಿಡುತ್ತಿರುವ ಜನ, ಬಸ್‌ಗಾಗಿ ಪರದಾಟ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿಗೆಯಾಗ್ತಿರುವಂತೆಯೇ ಜನರಲ್ಲಿ ಭಯವೂ ಜಾಸ್ತಿಯಾಗ್ತಿದೆ. ಪರಿಣಾಮ ಉದ್ಯೋಗ ಅರಸಿ ಬೆಂಗಳೂರಿನಲ್ಲಿ ನೆಲೆಸಿರುವ ಕೆಲವರು ತಮ್ಮ ಮೂಲ ಊರುಗಳತ್ತ ವಾಪಾಸಾಗುತ್ತಿದ್ದಾರೆ. ಕೊರೊನಾಗೆ ಹೆದರಿ ಬೆಂಗಳೂರು ಬಿಡುತ್ತಿರುವ ಜನತೆ ಹೌದು ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನೆೇ ದಿನೆ ಹೆಚ್ಚುತ್ತಿರುವಂತೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಕೆಲ ಜನರು ತಮ್ಮ ತಮ್ಮ ಊರುಗಳಿಗೆ ವಾಪಾಸಾಗುತ್ತಿದ್ದಾರೆ. ಕೆಲವರು ರವಿವಾರ ರಜೆ ಇರೋದ್ರಿಂದ ಹೋಗುತ್ತಿದ್ದಾರೆ. ಇನ್ನು ಕೆಲವರು ಕೆಲಸವಿಲ್ಲದೆ ಊರಿನತ್ತ ಹೊರಟಿದ್ದಾರೆ. ಇನ್ನು ಕೆಲವರು […]

ಕೊರೊನಾ ಲಾಕ್​ಡೌನ್​ಗೆ ಹೆದರಿ ಬೆಂಗಳೂರು ಬಿಡುತ್ತಿರುವ ಜನ, ಬಸ್‌ಗಾಗಿ ಪರದಾಟ
Guru
| Edited By: |

Updated on: Jul 04, 2020 | 2:57 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿಗೆಯಾಗ್ತಿರುವಂತೆಯೇ ಜನರಲ್ಲಿ ಭಯವೂ ಜಾಸ್ತಿಯಾಗ್ತಿದೆ. ಪರಿಣಾಮ ಉದ್ಯೋಗ ಅರಸಿ ಬೆಂಗಳೂರಿನಲ್ಲಿ ನೆಲೆಸಿರುವ ಕೆಲವರು ತಮ್ಮ ಮೂಲ ಊರುಗಳತ್ತ ವಾಪಾಸಾಗುತ್ತಿದ್ದಾರೆ.

ಕೊರೊನಾಗೆ ಹೆದರಿ ಬೆಂಗಳೂರು ಬಿಡುತ್ತಿರುವ ಜನತೆ ಹೌದು ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನೆೇ ದಿನೆ ಹೆಚ್ಚುತ್ತಿರುವಂತೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಕೆಲ ಜನರು ತಮ್ಮ ತಮ್ಮ ಊರುಗಳಿಗೆ ವಾಪಾಸಾಗುತ್ತಿದ್ದಾರೆ. ಕೆಲವರು ರವಿವಾರ ರಜೆ ಇರೋದ್ರಿಂದ ಹೋಗುತ್ತಿದ್ದಾರೆ. ಇನ್ನು ಕೆಲವರು ಕೆಲಸವಿಲ್ಲದೆ ಊರಿನತ್ತ ಹೊರಟಿದ್ದಾರೆ. ಇನ್ನು ಕೆಲವರು ಇಡೀ ರಾಜ್ಯ ಲಾಕ್​ಡೌ್​ನ್​ ಆಗುತ್ತೆ ಎಂಬ ಆತಂಕದಲ್ಲಿ ಮುಂಜಾಗ್ರತೆಯಿಂದ ಊರು ಬಿಡುತ್ತಿದ್ದಾರೆ. ಇಂಥ ಸಾವಿರಾರು ಜನರು ಬೆಂಗಳೂರಿನಿಂದ ಹೊರಹೋಗುತ್ತಿದ್ದಾರೆ. ಜಾಲಹಳ್ಳಿ ಕ್ರಾಸ್‌ ಬಳಿ ಹೀಗೆ ಊರಿಗೆ ಹೋಗುತ್ತಿರುವವರಿಂದಾಗಿ ವಾಹನಗಳ ಸಂಖ್ಯೆ ಕೂಡ ರಸ್ತೆಯಲ್ಲಿ ಹೆಚ್ಚಾಗಿ ಸಂಚಾರ- ಜನದಟ್ಟಣೆ ಕಂಡುಬಂದಿದೆ.

ಕೆಂಗೆರಿಯಲ್ಲಿ ಬಸ್‌ಗಳಿಲ್ಲದೇ ಪ್ರಯಾಣಿಕರ ಆಕ್ರೋಶ ಇದು ತುಮಕೂರು-ಹುಬ್ಬಳ್ಳಿ ಕಡೆಗೆ ಹೋಗುವ ರಸ್ತೆಯ ಕಥೆಯಾದ್ರೆ, ಮೈಸೂರಿನತ್ತ ಹೋಗುವವರ ಕಥೆಯೇನೂ ಭಿನ್ನವಾಗಿಲ್ಲ. ಕೆಂಗೇರಿ ಬಸ್ ನಿಲ್ದಾಣದಲ್ಲಿ ಮೈಸೂರು, ಮಂಡ್ಯದತ್ತ ಹೊಗುವ ಪ್ರಯಾಣಿಕರು ಬಸ್‌ ಸಿಗದೇ ಪರದಾಡುತ್ತಿದ್ದಾರೆ. ಕಳೆದ ಹಲವಾರು ಗಂಟೆಗಳಿಂದ ಯಾವುದೇ ಬಸ್ ಇಲ್ಲದೆ ಕೆಎಸ್‌ಆರ್‌ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬರುವ ಒಂದೋ ಎರಡೋ ಬಸ್‌ಗಳನ್ನ ಹತ್ತಲು ಸಾಮಾಜಿಕ ಅಂತರ ಮರೆತು ಜನ ಬಸ್‌ನೊಳಗೆ ನುಗ್ಗಲು ಪ್ರಯತ್ನಿಸುತ್ತಿದ್ದಾರೆ.

ಮೈಸೂರು ರೋಡ್‌ ಸ್ಯಾಟ್‌ಲೈಟ್‌ ಬಸ್‌ಸ್ಟ್ಯಾಂಡ್‌ನಲ್ಲಿ ಪ್ರಯಾಣಿಕರ ಕೊರತೆ ಆದ್ರೆ ಇನ್ನು ಹೀಗೆ ರಜೆ ಮತ್ತು ಲಾಕ್‌ಡೌನ್‌ ಇರೋದ್ರಿಂದ ಹೊರ ಊರಿಗೆ ಹೋಗುವ ಪ್ರಯಾಣಿಕರಿಗಾಗಿಯೇ ಕೆಎಸ್‌ಆರ್‌ಟಿಸಿ ಮೈಸೂರು ರೋಡ್‌ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಆದ್ರೆ ಈ ಬಸ್‌ ನಿಲ್ದಾಣದಲ್ಲಿ ನಿರೀಕ್ಷಿಸಿದಷ್ಟು ಪ್ರಯಾಣಿಕರು ಬರುತ್ತಿಲ್ಲ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ