ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ. See more

ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ
ಸಾಧು ಶ್ರೀನಾಥ್​

Updated on: May 02, 2020 | 7:24 AM

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ.

Published On - 7:22 am, Sat, 2 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us