AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಕಟ: ಪ್ರಶಸ್ತಿಗೆ ಭಾಜನರಾದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಗಾಯಕ ಬಿಸ್ವಜಿತ್ ಚಟರ್ಜಿ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ಪ್ರಶಸ್ತಿ ಪ್ರಕಟಿಸಿದರು. ಮಾರ್ಚ್ 21ರಂದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಭಾರತದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಕಟ: ಪ್ರಶಸ್ತಿಗೆ ಭಾಜನರಾದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಗಾಯಕ ಬಿಸ್ವಜಿತ್ ಚಟರ್ಜಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 16, 2021 | 10:11 PM

Share

ಗೋವಾದಲ್ಲಿ ನಡೆಯುತ್ತಿರುವ 51ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಕಟಿಸಲಾಗಿದ್ದು, ಹಿಂದಿ ಮತ್ತು ಬೆಂಗಾಲಿ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಗಾಯಕ ಬಿಸ್ವಜಿತ್ ಚಟರ್ಜಿ ಅವರಿಗೆ ಈ ಪ್ರಶಸ್ತಿ ದೊರೆತಿದೆ.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ಪ್ರಶಸ್ತಿ ಪ್ರಕಟಿಸಿದರು. ಮಾರ್ಚ್ 21ರಂದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಬೀಸ್ ಸಾಲ್ ಬಾತ್, ಕೋಹ್ರಾ, ಏಪ್ರಿಲ್ ಫೂಲ್, ಮೇರೆ ಸನಮ್, ನೈಟ್ ಇನ್ ಲಂಡನ್, ದೋ ಕಾಲಿಯಾನ್ ಮತ್ತು ಕಿಸ್ಮತ್ ಬಿಸ್ವಜಿತ್ ಚಟರ್ಜಿ ಅವರ ಪ್ರಮುಖ ಚಿತ್ರಗಳು. ಹೆಸರಾಂತ ನಟಿಯರಾದ ಆಶಾ ಪರೇಖ್, ವಹೀದಾ ರೆಹಮಾನ್, ಮುಮ್ತಾಜ್, ಮಾಲಾ ಸಿನ್ಹ ಮತ್ತು ರಾಜಶ್ರೀ ಅವರೊಂದಿಗೆ ನಟಿಸಿದ್ದರು. ಅವರ ಕೆಲವು ಬೆಂಗಾಲಿ ಚಿತ್ರಗಳಲ್ಲಿ ಚೌರಿಂಗೀ (1968) ಮತ್ತು  ಘರ್ ನಸಿಂಪುರ್, ಶ್ರೀಮಾನ್ ಪೃಥ್ವಿರಾಜ್ (1973), ಜೈ ಬಾಬಾ ತಾರಕ್ ನಾಥ್ (1977) ಮತ್ತು ಅಮರ್ ಗೀತಿ (1983) ಸೇರಿವೆ. 1975ರಲ್ಲಿ ಬಿಸ್ವಜಿತ್ ತಮ್ಮದೇ ಸ್ವಂತ ಚಿತ್ರ ಖಹೆತೇ ಹೇ ಮುಜ್ಕೋ ರಾಜಾ ಚಿತ್ರವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದ್ದರು. ನಟನೆ, ನಿರ್ದೇಶನದ ಜೊತೆಗೆ ಅವರು ಗಾಯಕ ಮತ್ತು ನಿರ್ಮಾಪಕರೂ ಆಗಿದ್ದರು.

Published On - 9:00 pm, Sat, 16 January 21

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?