AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 23, 2021 | 1:39 PM

Share

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಲಾಕ್​ಡೌನ್​​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರ ಯಾವುದೇ ಬದಲಾವಣೆ ಕಾಣದೆ ತಟಸ್ಥವಾಗಿತ್ತು. ಯಾವಾಗ ಲಾಕ್​ಡೌನ್​ ಪೂರ್ಣಗೊಂಡಿತ್ತೋ ಅಂದಿನಿಂದ ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ. ಕಳೆದ 9 ತಿಂಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ 15 ರೂಪಾಯಿ ಏರಿಕೆ ಕಂಡಿದೆ. ಅಲ್ಲದೆ, ಬೆಂಗಳೂರಲ್ಲಿ ಪೆಟ್ರೋಲ್​ ದರ 90ರ ಗಡಿ ಸಮೀಪಿಸಿದೆ.

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ. ಇನ್ನು ಒಂದೂವರೆ ರೂಪಾಯಿ ಏರಿಕೆ ಆದರೆ ಪೆಟ್ರೋಲ್​ ದರ 90ರ ಗಡಿ ದಾಟಲಿದೆ. ಡೀಸೆಲ್​ ದರ ಕೂಡ 25 ಪೈಸೆ ಏರಿಕೆ ಕಂಡಿದ್ದು, 80.45 ರೂಪಾಯಿ ಆಗಿದೆ.

ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ದರಗಳಲ್ಲಿ ವ್ಯತ್ಯಾಸವಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಪೆಟ್ರೊಲ್​ ದರ 90 ರೂಪಾಯಿ ದಾಟಿದೆ. ಕಚ್ಚಾ ತೈಲ ದರ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ತೆರಿಗೆ ಹಾಕುತ್ತಿದೆ. ಹೀಗಾಗಿ, ಪೆಟ್ರೋಲ್​ ದರ ಇಷ್ಟು ದೊಡ್ಡ ಮಟ್ಟಕ್ಕೆ ಏರಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?