AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 23, 2021 | 1:39 PM

Share

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಲಾಕ್​ಡೌನ್​​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರ ಯಾವುದೇ ಬದಲಾವಣೆ ಕಾಣದೆ ತಟಸ್ಥವಾಗಿತ್ತು. ಯಾವಾಗ ಲಾಕ್​ಡೌನ್​ ಪೂರ್ಣಗೊಂಡಿತ್ತೋ ಅಂದಿನಿಂದ ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ. ಕಳೆದ 9 ತಿಂಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ 15 ರೂಪಾಯಿ ಏರಿಕೆ ಕಂಡಿದೆ. ಅಲ್ಲದೆ, ಬೆಂಗಳೂರಲ್ಲಿ ಪೆಟ್ರೋಲ್​ ದರ 90ರ ಗಡಿ ಸಮೀಪಿಸಿದೆ.

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ. ಇನ್ನು ಒಂದೂವರೆ ರೂಪಾಯಿ ಏರಿಕೆ ಆದರೆ ಪೆಟ್ರೋಲ್​ ದರ 90ರ ಗಡಿ ದಾಟಲಿದೆ. ಡೀಸೆಲ್​ ದರ ಕೂಡ 25 ಪೈಸೆ ಏರಿಕೆ ಕಂಡಿದ್ದು, 80.45 ರೂಪಾಯಿ ಆಗಿದೆ.

ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ದರಗಳಲ್ಲಿ ವ್ಯತ್ಯಾಸವಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಪೆಟ್ರೊಲ್​ ದರ 90 ರೂಪಾಯಿ ದಾಟಿದೆ. ಕಚ್ಚಾ ತೈಲ ದರ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ತೆರಿಗೆ ಹಾಕುತ್ತಿದೆ. ಹೀಗಾಗಿ, ಪೆಟ್ರೋಲ್​ ದರ ಇಷ್ಟು ದೊಡ್ಡ ಮಟ್ಟಕ್ಕೆ ಏರಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ