ಬೆಂಗಳೂರಿನಲ್ಲಿ ದಿಢೀರನೆ ವಾಲಿದ 5 ಅಂತಸ್ತಿನ PG ಕಟ್ಟಡ: ನಿವಾಸಿಗಳಲ್ಲಿ ಆತಂಕ!

ಬೆಂಗಳೂರು: ಹೆಬ್ಬಾಳದ ಕೆಂಪಾಪುರದಲ್ಲಿ ಐದು ಅಂತಸ್ತಿನ PG ಕಟ್ಟಡ ವಾಲಿದ್ದು, ಇದರಿಂದ ಕಟ್ಟಡದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಶುರುವಾಗಿದೆ. ಐದಂತಸ್ತಿನ ಕಟ್ಟಡ ವಾಲಿದ್ದು, ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಕಟ್ಟಡದಲ್ಲಿ ಪಿಜಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಕಟ್ಟದ ಹಿಂಭಾಗ ಮನೆ ಕಟ್ಟೋಕೆ ಹಳ್ಳ ತೆಗೆಯಲಾಗಿತ್ತು. ಬಾಬು ಎಂಬುವವರು ಮನೆ ಕಟ್ಟೋಕೆ ಸುಮಾರು 5ರಿಂದ 8 ಅಡಿ ಹಳ್ಳ ತೆಗೆದಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕಟ್ಟಡ ವಾಲಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು, ಅಗ್ನಿಶಾಮಕ‌ದಳ […]

ಬೆಂಗಳೂರಿನಲ್ಲಿ ದಿಢೀರನೆ ವಾಲಿದ 5 ಅಂತಸ್ತಿನ PG ಕಟ್ಟಡ: ನಿವಾಸಿಗಳಲ್ಲಿ ಆತಂಕ!

Updated on: Feb 05, 2020 | 1:01 PM

ಬೆಂಗಳೂರು: ಹೆಬ್ಬಾಳದ ಕೆಂಪಾಪುರದಲ್ಲಿ ಐದು ಅಂತಸ್ತಿನ PG ಕಟ್ಟಡ ವಾಲಿದ್ದು, ಇದರಿಂದ ಕಟ್ಟಡದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಶುರುವಾಗಿದೆ. ಐದಂತಸ್ತಿನ ಕಟ್ಟಡ ವಾಲಿದ್ದು, ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಕಟ್ಟಡದಲ್ಲಿ ಪಿಜಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಟ್ಟದ ಹಿಂಭಾಗ ಮನೆ ಕಟ್ಟೋಕೆ ಹಳ್ಳ ತೆಗೆಯಲಾಗಿತ್ತು. ಬಾಬು ಎಂಬುವವರು ಮನೆ ಕಟ್ಟೋಕೆ ಸುಮಾರು 5ರಿಂದ 8 ಅಡಿ ಹಳ್ಳ ತೆಗೆದಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕಟ್ಟಡ ವಾಲಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು, ಅಗ್ನಿಶಾಮಕ‌ದಳ ಸಿಬ್ಬಂದಿ ಹಾಗೂ ಎಂಜಿನಿಯರ್​ಗಳು ದೌಡಾಯಿಸಿದ್ದಾರೆ.

ಇಲ್ಲಿ ಕಟ್ಟಡ ಕಟ್ಟೋಕೆ ಅನುಮತಿ ಕೊಟ್ಟಿರುವುದೇ ತಪ್ಪು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಸದ್ಯ ವಾಲಿರುವ ಕಟ್ಟಡವನ್ನು ಡೆಮಾಲಿಷ್ ಮಾಡಲು ಅಧಿಕಾರಿಗಳು ಸಕಲ‌ ಸಿದ್ಧತೆ ನಡೆಸಿಕೊಂಡಿದ್ದಾರೆ.

Published On - 12:24 pm, Wed, 5 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us