AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ

ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
guruganesh bhat
|

Updated on:Dec 02, 2020 | 12:46 PM

Share

ದೆಹಲಿ: ಚೀನಾ ಮೂಲದ ಸ್ಮಾರ್ಟ್​ಫೋನ್ ಉತ್ಪಾದಕ ಕಂಪನಿ ಶಿಯೋಮಿ ಡಿಸೆಂಬರ್ 2ರ ಒಳಗಾಗಿ ತನ್ನ ಭಾರತದ ಬ್ಯಾಂಕ್ ಖಾತೆಯಲ್ಲಿ ₹ 1000 ಕೋಟಿ ಹಣವನ್ನು ಕಡ್ಡಾಯವಾಗಿ ಜಮಾ ಇಡಬೇಕೆಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಪೇಟೆಂಟ್ ನಿಯಮಗಳನ್ನು ಉಲ್ಲಂಘಿಸಿದೆ. ಭಾರತದಲ್ಲಿ ಶಿಯೋಮಿ ಮೊಬೈಲ್ ಮಾರಾಟದ ಜೊತೆ, ಉತ್ಪಾದನೆ, ಪ್ರಚಾರ ಮತ್ತು ಆಮದನ್ನು ತಡೆಹಿಡಿಯಬೇಕೆಂದು ಫಿಲಿಫ್ಸ್ ನ್ಯಾಯಾಲಯವನ್ನು ಕೋರಿತ್ತು. ಲಭ್ಯವಿರುವ 4ಜಿ ಫೋನ್​ಗಳೂ ಸೇರಿ, ಕೆಲವು ಮಾದರಿಗಳಲ್ಲಿ ಕ್ಸಿಯೋಮಿ ಪೇಟೆಂಟ್ ಉಲ್ಲಂಘಿಸಿದೆ ಎಂದು ಫಿಲಿಫ್ಸ್ ಆರೋಪಿಸಿದೆ.

ಅಲ್ಲದೇ, ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಗೆ ಪೇಟೆಂಟ್ ಉಲ್ಲಂಘನೆ ಆರೋಪವಿರುವ ಮಾದರಿಯ ಫೋನ್​ಗಳು ಭಾರತ ಪ್ರವೇಶಿಸದಂತೆ ತಡೆಗಟ್ಟಲು ಸೂಚಿಸುವಂತೆ ಕೋರಿದೆ.

ಈ ಕುರಿತು ಶಿಯೋಮಿ ಇಂಡಿಯಾ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು 2021ರ ಜನವರಿ 18ಕ್ಕೆ ಮುಂದೂಡಿದೆ.

Published On - 12:35 pm, Wed, 2 December 20

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ