AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ನೇರ ಸವಾಲ್‌! ನೆಲದ ಮೇಲೆ ಕುಳಿತು SSLC ಪರೀಕ್ಷೆ ಬರೆದ ವಿದ್ಯಾರ್ಥಿ, ಇದು ಎಲ್ಲರಿಗೂ ಮಾದರಿಯಾಗಲಿ

ಮಂಗಳೂರು:ಈ ಬಾರಿಯ SSLC ಪರೀಕ್ಷೆ ನಡೆಸುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರು ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರದವರೆಗೂ ಕರೆತರಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಯಾವುದೇ ಚ್ಯುತಿ ಬಾರದಂತೆಯೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಅಷ್ಟೇ ಸಾಲದು ಅಂತಾ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಯಾವ ಮೂಲೆಯಿಂದ ಪ್ರೇರೇಪಣೆಗಳು ಸಿಗುತ್ತವೆ ಎಂಬುದರ ಮೇಲೂ ಹದ್ದಿನಕಣ್ಣಿಟ್ಟಿದ್ದಾರೆ. ಹೀಗಿರುವಾಗ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರ ಕಣ್ಣಿಗೆ ಒಬ್ಬ ವಿದ್ಯಾರ್ಥಿ ಕಂಡುಬಂದಿದ್ದಾನೆ. ಅದರಿಂದ ಹೃದಯ ತುಂಬಿಬಂದು, ಆತನ ಸಾಹಸವನ್ನು ತಮ್ಮ ಫೇಸ್​ಬುಕ್​ […]

ಕೊರೊನಾಗೆ ನೇರ ಸವಾಲ್‌! ನೆಲದ ಮೇಲೆ ಕುಳಿತು SSLC ಪರೀಕ್ಷೆ ಬರೆದ ವಿದ್ಯಾರ್ಥಿ, ಇದು ಎಲ್ಲರಿಗೂ ಮಾದರಿಯಾಗಲಿ
ಆಯೇಷಾ ಬಾನು
|

Updated on:Jun 26, 2020 | 3:46 PM

Share

ಮಂಗಳೂರು:ಈ ಬಾರಿಯ SSLC ಪರೀಕ್ಷೆ ನಡೆಸುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರು ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರದವರೆಗೂ ಕರೆತರಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಯಾವುದೇ ಚ್ಯುತಿ ಬಾರದಂತೆಯೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಅಷ್ಟೇ ಸಾಲದು ಅಂತಾ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಯಾವ ಮೂಲೆಯಿಂದ ಪ್ರೇರೇಪಣೆಗಳು ಸಿಗುತ್ತವೆ ಎಂಬುದರ ಮೇಲೂ ಹದ್ದಿನಕಣ್ಣಿಟ್ಟಿದ್ದಾರೆ. ಹೀಗಿರುವಾಗ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರ ಕಣ್ಣಿಗೆ ಒಬ್ಬ ವಿದ್ಯಾರ್ಥಿ ಕಂಡುಬಂದಿದ್ದಾನೆ. ಅದರಿಂದ ಹೃದಯ ತುಂಬಿಬಂದು, ಆತನ ಸಾಹಸವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಫೋಟೋ ಸಮೇತ ಹಾಕಿಕೊಂಡಿದ್ದಾರೆ. ಮನಸ್ಸಿದ್ದರೆ ಮಾರ್ಗ ಅಂತಾ ಹೇಳೋರು ಸಾಕಷ್ಟು ಮಂದಿ. ಆದ್ರೆ ಈ ಮಾತನ್ನ ಮಾಡಿತೋರಿಸುತ್ತಿದ್ದಾನೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ.

ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿದ್ಯಾರ್ಥಿ ಕೌಶಿಕ್‌ ಅಂಗವೈಕಲ್ಯಕ್ಕೆ ಸೆಡ್ಡು ಹೊಡೆದಿದ್ದಾನೆ. ಬಂಟ್ವಾಳದ ಎಸ್‌ವಿಎಸ್‌ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಯಾರ ನೆರವೂ ಇಲ್ಲದೇ, ನೆಲದ ಮೇಲೆ ಕುಳಿತು ಬರೆದಿದ್ದಾನೆ. ಕೌಶಿಕ್‌ ಹೀಗೆ ಪರೀಕ್ಷೆ ಬರೆದಿದ್ದು ಈಗ ಶಿಕ್ಷಣ ಸಚಿವರ ಗಮನ ಸೆಳೆದಿದೆ.

ಕೊರೊನಾ ಭಯದ ಮಧ್ಯೆಯೂ ದೈರ್ಯದಿಂದ, ನೆಲದ ಮೇಲೆ ಕುಳಿತು ಯಾರ ನೆರವೂ ಇಲ್ಲದೇ ಪರೀಕ್ಷೆ ಬರೆದ ವಿದ್ಯಾರ್ಥಿ ಬಗ್ಗೆ ಸುರೇಶ್‌ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌. ಆತ ಪರೀಕ್ಷೆ ಬರೆಯುತ್ತಿರುವ ಪೋಟೋವನ್ನ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಇತರರಿಗೂ ಮಾದರಿಯಾಗಲಿ ಎಂಬ ಸದಾಶಯ ಎಲ್ಲರದ್ದೂ ಆಗಿದೆ.

https://www.facebook.com/nimmasuresh/posts/3583015671725752

Published On - 2:03 pm, Fri, 26 June 20

ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?