AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ನಿರ್ಮಾಣವಾಗಲಿದೆ ಗಗನಚುಂಬಿ ಕಟ್ಟಡ, ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ

ಬೆಂಗಳೂರು: ಒಂದು ಅಲ್ಲಿ, ಮತ್ತೊಂದು ಅದೆಲ್ಲೋ.. ಪ್ರಮಾಣಪತ್ರ ಬೇಕಂದ್ರೆ ಒಂದ್ಕಡೆ, ದಾಖಲೆಗಳು ಬೇಕಂದ್ರೆ ಒಂದ್ಕಡೆ, ಸರ್ಕಾರಿ ಕಚೇರಿಗಳಿಗೆ ಅಲೆದೂ ಅಲೆದೂ ಅರ್ಧ ಜೀವನ ಕಳೆದುಹೋಗುತ್ತೆ ಅನ್ಕೊಳ್ತಾರೆ. ಯಾಕಂದ್ರೆ, ರಾಜಧಾನಿಯಲ್ಲಿ ಒಂದೊಂದು ದಿಕ್ಕಿನಲ್ಲಿ ಒಂದೊಂದು ಸರ್ಕಾರಿ ಕಟ್ಟಡಗಳಿವೆ, ಕಚೇರಿಗಳಿವೆ. ಬಹುತೇಕ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ಇವೆ. ತಿಂಗಳಿಗೆ ಒಂದೊಂದು ಕಟ್ಟಡಕ್ಕೆ ಸರ್ಕಾರ ಲಕ್ಷ ಲಕ್ಷ ಬಾಡಿಗೆ ಕಟ್ಟುತ್ತೆ. ಹೀಗಾಗಿ ಬಾಡಿಗೆ ಬಿಲ್ಡಿಂಗ್‌ಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಪ್ಲ್ಯಾನ್ ಮಾಡಲಾಗಿದೆ. ಆನಂದ್ ರಾವ್ ಸರ್ಕಲ್ ಬಳಿ 25 […]

ರಾಜಧಾನಿಯಲ್ಲಿ ನಿರ್ಮಾಣವಾಗಲಿದೆ ಗಗನಚುಂಬಿ ಕಟ್ಟಡ, ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ
ಆಯೇಷಾ ಬಾನು
|

Updated on: Aug 28, 2020 | 7:09 AM

Share

ಬೆಂಗಳೂರು: ಒಂದು ಅಲ್ಲಿ, ಮತ್ತೊಂದು ಅದೆಲ್ಲೋ.. ಪ್ರಮಾಣಪತ್ರ ಬೇಕಂದ್ರೆ ಒಂದ್ಕಡೆ, ದಾಖಲೆಗಳು ಬೇಕಂದ್ರೆ ಒಂದ್ಕಡೆ, ಸರ್ಕಾರಿ ಕಚೇರಿಗಳಿಗೆ ಅಲೆದೂ ಅಲೆದೂ ಅರ್ಧ ಜೀವನ ಕಳೆದುಹೋಗುತ್ತೆ ಅನ್ಕೊಳ್ತಾರೆ. ಯಾಕಂದ್ರೆ, ರಾಜಧಾನಿಯಲ್ಲಿ ಒಂದೊಂದು ದಿಕ್ಕಿನಲ್ಲಿ ಒಂದೊಂದು ಸರ್ಕಾರಿ ಕಟ್ಟಡಗಳಿವೆ, ಕಚೇರಿಗಳಿವೆ. ಬಹುತೇಕ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ಇವೆ. ತಿಂಗಳಿಗೆ ಒಂದೊಂದು ಕಟ್ಟಡಕ್ಕೆ ಸರ್ಕಾರ ಲಕ್ಷ ಲಕ್ಷ ಬಾಡಿಗೆ ಕಟ್ಟುತ್ತೆ. ಹೀಗಾಗಿ ಬಾಡಿಗೆ ಬಿಲ್ಡಿಂಗ್‌ಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಪ್ಲ್ಯಾನ್ ಮಾಡಲಾಗಿದೆ. ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಪಡಿಸಲಾಗಿದೆ.

ಗಗನಚುಂಬಿ ಸರ್ಕಾರಿ ಕಟ್ಟಡ! ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮವು ಟ್ವಿನ್‌ ಟವರ್‌ ಕಟ್ಟಡದ ಪ್ರಸ್ತಾವನೆಯನ್ನ ಸಿದ್ದಪಡಿಸಿದೆ. ಪ್ರಸ್ತುತ ಸಿದ್ದಪಡಿಸಿರುವ ಪ್ರಸ್ತಾವನೆಯಲ್ಲಿ ಕಟ್ಟಡ ನಿರ್ಮಾಣವಾಗುವ ವ್ಯಾಪ್ತಿ 2.5ರ ಫ್ಲೋರ್‌ ಏರಿಯಾ ರೇಶಿಯೋದಲ್ಲಿದೆ. ಆದ್ರೆ ಇದೇ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಳು ಎಫ್ಎಆರ್ 4.0 ಅನುಪಾತದಲ್ಲಿದೆ. ಹೀಗಾಗಿ, ಅದೇ ಮಾದರಿಯಲ್ಲಿ ಟ್ವಿನ್ ಟವರ್ ನಿರ್ಮಿಸಬೇಕಿದೆ.

ಇದ್ರಿಂದ, ಪ್ರಸ್ತಾವನೆಯನ್ನು ಮರುವಿನ್ಯಾಸಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ. ಇನ್ನು ಟ್ವಿನ್ ಟವರ್ ಪ್ರಸ್ತಾವನೆ ಕಾರ್ಯರೂಪಕ್ಕೆ ಬರಲು ಆರ್ಥಿಕ ಇಲಾಖೆ ಹಾಗೂ ಕಾನೂನು ಇಲಾಖೆಯ ಸಹಮತ ಬೇಕಾಗಿದೆ. ಅಲ್ಲದೇ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಿ ಸಚಿವ ಸಂಪುಟದ ಅನುಮೋದನೆ ಕೂಡಾ ಪಡೆಯಬೇಕಿದೆ.

ಒಟ್ನಲ್ಲಿ ಟ್ವಿನ್ ಟವರ್ ನಿರ್ಮಾಣವಾದ್ರೆ ರಾಜಧಾನಿಯಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಬರಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಹಕಾರಿಯಾಗಲಿದ್ದು, ಸರ್ಕಾರಕ್ಕೂ ಬಾಡಿಗೆ ಹಣ ಉಳಿಯಲಿದೆ. ಆದಷ್ಟು ಬೇಗ ಟ್ವಿನ್ ಟವರ್ ನಿರ್ಮಾಣ ಆಗಲಿ ಅನ್ನೋದೆ ಎಲ್ಲರ ಆಶಯ.

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ