AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲತಡಿಯ ಯಕ್ಷಗಾನದಲ್ಲಿ ಪ್ರಧಾನಿ ಮೋದಿಯ ಜೀವನ ಚರಿತ್ರೆ!

ಮಂಗಳೂರು: ಗಂಡುಕಲೆ ಯಕ್ಷಗಾನಕ್ಕೆ ತನ್ನದೇ ಆದ ಗತ್ತಿದೆ, ಗೈರತ್ತಿದೆ, ಇತಿಹಾಸವಿದೆ. ಯಕ್ಷಗಾನದಲ್ಲಿ ರಾಮಾಯಣ, ಮಹಾಭಾರತದಂತಹ ಪುರಾಣಗಳ ತುಣುಕುಗಳನ್ನ ಪ್ರದರ್ಶಿಸಲಾಗುತ್ತೆ. ಆದ್ರೆ ಕಡಲತಡಿ ಮಂಗಳೂರಿನಲ್ಲಿ ನಡೆದ ಯಕ್ಷಗಾನವೊಂದು ಇಡೀ ಯಕ್ಷಗಾನದ ಇತಿಹಾಸವನ್ನೇ ಬದಲಿಸಿದೆ. ಮೊದಲ ಬಾರಿ ಒಬ್ಬ ಮನುಷ್ಯನ ಜೀವನ ಚರಿತ್ರೆಯನ್ನ ಕಥೆಯನ್ನಾಗಿಸಿ ಯಕ್ಷಗಾನ ನಡೆಸಲಾಗಿದೆ. ಅಷ್ಟಕ್ಕೂ ಈ ಯಕ್ಷಗಾನದ ಕಥಾವಸ್ತು ಬೇರಾರು ಅಲ್ಲ. ಪ್ರಧಾನಿ ನರೇಂದ್ರ ಮೋದಿ. ನರೇಂದ್ರ ವಿಜಯ ಹೆಸರಿನ ಯಕ್ಷಗಾನ:  ಅಂದ್ಹಾಗೆ ಇದು ಮಂಗಳೂರಿನ ಟಿ.ವಿ.ರಮಣ ಪೈ ಹಾಲ್​ನಲ್ಲಿ ಪಂಚಾಯತ್ ಕನ್ನಡ ಆಯೋಜಿಸಿದ್ದ ಯಕ್ಷಗಾನ. […]

ಕಡಲತಡಿಯ ಯಕ್ಷಗಾನದಲ್ಲಿ ಪ್ರಧಾನಿ ಮೋದಿಯ ಜೀವನ ಚರಿತ್ರೆ!
ಸಾಧು ಶ್ರೀನಾಥ್​
|

Updated on: Jan 07, 2020 | 12:34 PM

Share

ಮಂಗಳೂರು: ಗಂಡುಕಲೆ ಯಕ್ಷಗಾನಕ್ಕೆ ತನ್ನದೇ ಆದ ಗತ್ತಿದೆ, ಗೈರತ್ತಿದೆ, ಇತಿಹಾಸವಿದೆ. ಯಕ್ಷಗಾನದಲ್ಲಿ ರಾಮಾಯಣ, ಮಹಾಭಾರತದಂತಹ ಪುರಾಣಗಳ ತುಣುಕುಗಳನ್ನ ಪ್ರದರ್ಶಿಸಲಾಗುತ್ತೆ. ಆದ್ರೆ ಕಡಲತಡಿ ಮಂಗಳೂರಿನಲ್ಲಿ ನಡೆದ ಯಕ್ಷಗಾನವೊಂದು ಇಡೀ ಯಕ್ಷಗಾನದ ಇತಿಹಾಸವನ್ನೇ ಬದಲಿಸಿದೆ. ಮೊದಲ ಬಾರಿ ಒಬ್ಬ ಮನುಷ್ಯನ ಜೀವನ ಚರಿತ್ರೆಯನ್ನ ಕಥೆಯನ್ನಾಗಿಸಿ ಯಕ್ಷಗಾನ ನಡೆಸಲಾಗಿದೆ. ಅಷ್ಟಕ್ಕೂ ಈ ಯಕ್ಷಗಾನದ ಕಥಾವಸ್ತು ಬೇರಾರು ಅಲ್ಲ. ಪ್ರಧಾನಿ ನರೇಂದ್ರ ಮೋದಿ.

ನರೇಂದ್ರ ವಿಜಯ ಹೆಸರಿನ ಯಕ್ಷಗಾನ:  ಅಂದ್ಹಾಗೆ ಇದು ಮಂಗಳೂರಿನ ಟಿ.ವಿ.ರಮಣ ಪೈ ಹಾಲ್​ನಲ್ಲಿ ಪಂಚಾಯತ್ ಕನ್ನಡ ಆಯೋಜಿಸಿದ್ದ ಯಕ್ಷಗಾನ. ‘ನರೇಂದ್ರ ವಿಜಯ’ ಅನ್ನೋ ಹೆಸರಿನ ಈ ಯಕ್ಷಗಾನವನ್ನ ತೀರ್ಥಹಳ್ಳಿಯ ಗಾಯಿತ್ರಿ ಯಕ್ಷಗಾನ ಮಂಡಳಿ ನಡೆಸಿಕೊಡ್ತು. ಯಕ್ಷಗಾನದುದ್ದಕ್ಕೂ ಪ್ರಧಾನಿ ಮೋದಿಯ ಜೀವನ ಚರಿತ್ರೆ ವಿವರಿಸಲಾಯ್ತು. ಜೈಲಿನಲ್ಲಿದ್ದ ಅಮಿತ್ ಶಾರನ್ನ ಬಿಡಿಸುವ ಮೂಲಕ ಆರಂಭವಾಗಿ, ಮೋದಿ ಗುಜರಾತ್ ಸಿಎಂ ಆಗಿದ್ದು, ನಂತ್ರ ಪ್ರಧಾನಿ ಆಗಿದ್ದನ್ನ ಯಕ್ಷಗಾನ ಮೂಲಕ ತೋರಿಸಲಾಯ್ತು. ಮೋದಿ ತಾಯಿಯ ಕನಸಿನಲ್ಲಿ ಬರುವ ಸಾಕ್ಷಾತ್ ಪರಮೇಶ್ವರ ನರೇಂದ್ರ ಎಂಬ ಮಗ ಇಡೀ ಭರತ ಖಂಡವನ್ನೇ ಬೆಳಗುತ್ತಾನೆ ಅಂತ ಹೇಳುವುದು ವಿಶೇಷವಾಗಿತ್ತು.

ಪ್ರಧಾನಿ ಮೋದಿಯ ಜೀವನ ಚರಿತ್ರೆ: ಇನ್ನು ತ್ರಿವಳಿ ತಲಾಖ್​ಗೆ ಗುರಿಯಾದ ಮಹಿಳೆಯೊಬ್ಬಳು ಮೋದಿ ಬಳಿ ಬಂದು ಅವಲತ್ತುಕೊಳ್ಳೋದು, ಆಗ ಮೋದಿ ತ್ರಿವಳಿ ತಲಾಕ್ ರದ್ದುಗೊಳಿಸೋದನ್ನ ಪ್ರದರ್ಶಿಸಲಾಯ್ತು. ಇನ್ನು ಪುಲ್ವಾಮಾ ದಾಳಿ, ಚಂದ್ರಯಾನ, ಆರ್ಟಿಕಲ್ 370 ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ರದ್ದು ಮುಂತಾದವುಗಳನ್ನ ಯಕ್ಷಗಾನ ಮೂಲಕ ತೋರಿಸಲಾಯ್ತು. ಕೇದಾರನಾಥದಲ್ಲಿ ಮೋದಿ ಧ್ಯಾನಕ್ಕೆ ಕುಳಿತ ಪ್ರಸಂಗ ಎಲ್ಲರ ಗಮನ ಸೆಳೀತು. ಒಟ್ನಲ್ಲಿ, ಮೊದಲ ಬಾರಿ ಮನುಷ್ಯನೊಬ್ಬನ ಅದ್ರಲ್ಲೂ ಪ್ರಧಾನಿ ಮೋದಿಯ ಜೀವನ ಚರಿತ್ರೆಯನ್ನ ಕಥೆಯನ್ನಾಗಿಸಿ ಯಕ್ಷಗಾನ ಪ್ರದರ್ಶಿಸಿದ್ದು ವಿಶೇಷವಾಗಿತ್ತು.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!