AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi US visit: ಪ್ರಧಾನಿ ಮೋದಿ ವಾಷಿಂಗ್ಟನ್​ ಭೇಟಿ: ಯಾವುದೇ ಗ್ಯಾಪ್ ಇಲ್ಲದೆ ಜನರೊಂದಿಗೆ ಮುಕ್ತವಾಗಿ ಬೆರೆತರು

PM Narendra Modi US visit: ಸುದೀರ್ಘ ಕೊರೊನಾ ಗ್ಯಾಪ್ ಬಳಿಕ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕಾ ಪ್ರವಾಸದ ಅಂಗವಾಗಿ ವಾಷಿಂಗ್ಟನ್ ಗೆ ಬಂದಿಳಿದರು. ಆ ವೇಳೆ ಭಾರತೀಯ ಸಮುದಾಯದವರು ಅವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಪ್ರಧಾನಿ ಮೋದಿ ಸಹ  ಯಾವುದೇ ಗ್ಯಾಪ್ ಇಲ್ಲದೆ ಜನರೊಂದಿಗೆ ಮುಕ್ತವಾಗಿ ಬೆರೆತರು.

Narendra Modi US visit: ಪ್ರಧಾನಿ ಮೋದಿ ವಾಷಿಂಗ್ಟನ್​ ಭೇಟಿ: ಯಾವುದೇ ಗ್ಯಾಪ್ ಇಲ್ಲದೆ ಜನರೊಂದಿಗೆ ಮುಕ್ತವಾಗಿ ಬೆರೆತರು
ಸುದೀರ್ಘ ಕೊರೊನಾ ಗ್ಯಾಪ್ ಬಳಿಕ ವಾಷಿಂಗ್ಟನ್ ಗೆ ಬಂದಿಳಿದ ಪ್ರಧಾನಿ ಮೋದಿ: ಯಾವುದೇ ಗ್ಯಾಪ್ ಇಲ್ಲದೆ ಜನರೊಂದಿಗೆ ಮುಕ್ತವಾಗಿ ಬೆರೆತರು
TV9 Web
| Updated By: ಸಾಧು ಶ್ರೀನಾಥ್​|

Updated on:Sep 23, 2021 | 3:35 PM

Share

ವಾಷಿಂಗ್ಟನ್: ಸುದೀರ್ಘ ಕೊರೊನಾ ಗ್ಯಾಪ್ ಬಳಿಕ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕಾ ಪ್ರವಾಸದ ಅಂಗವಾಗಿ ವಾಷಿಂಗ್ಟನ್ ಗೆ ಬಂದಿಳಿದರು. ಆ ವೇಳೆ ಭಾರತೀಯ ಸಮುದಾಯದವರು ಅವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಪ್ರಧಾನಿ ಮೋದಿ ಸಹ  ಯಾವುದೇ ಗ್ಯಾಪ್ ಇಲ್ಲದೆ ಜನರೊಂದಿಗೆ ಮುಕ್ತವಾಗಿ ಬೆರೆತರು.

ಕೊರೊನಾ ಅಂತರ ಪಕ್ಕಕ್ಕಿಟ್ಟು ಭಾರತೀಯ ಸಂಜಾತರೊಂದಿಗೆ ಕೈ ಕುಲುಕಿದ್ದು ವಿಶೇಷವಾಗಿತ್ತು: ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆ್ಯಂಡ್ರ್ಯೂವ್ಸ್ ಏರ್‌ಬೇಸ್‌ನಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು. ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಪ್ರಧಾನಿ ಮೋದಿಯನ್ನು ಬರಮಾಡಿಕೊಂಡರು. ಅದಾದಮೇಲೆ ಏರ್‌ಬೇಸ್ ಹೊರಗೆ ಮೋದಿ ಭಾರತೀಯರನ್ನು ಭೇಟಿಯಾದರು. ಸದ್ಯ ಪ್ರಧಾನಿ ಮೋದಿ ವಾಷ್ಟಿಂಗ್ಟನ್ ಡಿಸಿಯ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ-ಜಪಾನ್ ಮತ್ತು ಭಾರತ-ಆಸ್ಟ್ರೇಲಿಯಾ ಮಧ್ಯೆ ಮಾತುಕತೆ ನಡೆಯಲಿದೆ. ಉಭಯ ರಾಷ್ಟ್ರಗಳ ನಡುವೆ ಪ್ರಧಾನಿ ಮೋದಿ ಬಾಂಧವ್ಯ ವೃದ್ಧಿ ಸಂಬಂಧ ಚರ್ಚೆ ನಡೆಸಲಿದ್ದಾರೆ. ಬಳಿಕ ಅಮೆರಿಕ ಉಪಾಧ್ಯಕ್ಷೆ, ತಮಿಳುನಾಡು ಮೂಲದ ಕಮಲಾ ಹ್ಯಾರಿಸ್​ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ.

ಆಮೆರಿಕಾದ ವಾಷಿಂಗ್ಟನ್ ಡಿ.ಸಿ.ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೆಲ ಪ್ರಮುಖ ಕಂಪನಿಗಳ ಸಿಇಒ ಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಕ್ವಾಲ್ಕಂ, ಅಡೋಬ್, ಫಸ್ಟ್ ಸೋಲಾರ್, ಜನರಲ್ ಅಟೋಮಿಕ್ಸ್, ಬ್ಲ್ಯಾಕ್ ಸ್ಟೋನ್ ಕಂಪನಿಗಳ ಸಿಇಒ ಜೊತೆಗೆ ಸಭೆ ನಗದಿಪಡಿಸಲಾಗಿದೆ. ತಂತ್ರಜ್ಞಾನ, ನವೀಕರಣ ಇಂಧನ, ಸಾಫ್ಟ್‌ವೇರ್, ಡ್ರೋಣ್, ಬಂಡವಾಳ ಹೂಡಿಕೆ ಸಂಬಂಧಿ ಕಂಪನಿಯ ಸಿಇಒ ಜೊತೆಗೂ ಮೋದಿ ಸಭೆ ನಡೆಸಲಿದ್ದಾರೆ.

ಬೈಡೆನ್ ಅಧ್ಯಕ್ಷರಾದ ಬಳಿಕ ಮೊದಲ ಮುಖಾಮುಖಿ ಭೇಟಿ: ನಾಳೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಶ್ವೇತಭವನಕ್ಕೆ ಭೇಟಿ ನೀಡಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಸಭೆ ನಡೆಸಲಿದ್ದಾರೆ. ಭಾರತ-ಅಮೆರಿಕ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಬಗ್ಗೆ ಚರ್ಚೆಗಳು ನಡೆಯಲಿವೆ. ಬೈಡೆನ್ ಅಧ್ಯಕ್ಷರಾದ ಬಳಿಕ ಪ್ರಧಾನಿ ಮೋದಿ ಜೊತೆಗೆ ಇದು ಮೊದಲ ಮುಖಾಮುಖಿ ಭೇಟಿಯಾಗಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮ್ಯಾರಿಸನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 12.45 ಕ್ಕೆ ಆಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆಗೆ ಸಭೆ‌ ಏರ್ಪಾಡಾಗಿದೆ. ಭಾರತೀಯ ಕಾಲಮಾನ ರಾತ್ರಿ 3 ಗಂಟೆಗೆ ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಜೊತೆಗೆ ದ್ವಿಪಕ್ಷೀಯ ಬಾಂಧವ್ಯ ವೃದ್ದಿ ಮಾತುಕತೆ ನಿಗದಿಯಾಗಿದೆ.

ಶ್ವೇತಭವನದಲ್ಲಿ ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆ ನಡೆಯಲಿದೆ. ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಜೊತೆಗೆ ಅಮೆರಿಕ, ಆಸ್ಟ್ರೇಲಿಯಾ, ಜಪಾನ್ ಸದಸ್ಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶುಕ್ರವಾರ ಶ್ವೇತಭವನದಲ್ಲಿ ಬೈಡೆನ್ ಜತೆ ಮೋದಿ ಔತಣಕೂಟ ಏರ್ಪಾಡಾಗಿದೆ. ಬಳಿಕ ಪ್ರಧಾನಿ ಮೋದಿ ವಾಷಿಂಗ್ಟನ್ ಡಿ‌ಸಿಯಿಂದ ನ್ಯೂಯಾರ್ಕ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ. ಶನಿವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋದಿ ಭಾಗಿವಹಿಸಿ, ಶನಿವಾರ ಸಂಜೆ 6.30ಕ್ಕೆ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ:  ಶ್ವೇತ ಭವನದಲ್ಲಿ ಬೆಚ್ಚನೆಯ ಅಪ್ಪುಗೆಗಳು, ಹೊಸ ವೈಬ್ಸ್ ಶುರು​! ಇದಕ್ಕೆ ಕಾರಣವೇನು? ಕೊರೊನಾ ಕಾಟ ಮುಗಿಯಿತಾ?

ಇದನ್ನೂ ಓದಿ: Narendra Modi: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿ ತಲುಪಿದ ಪ್ರಧಾನಿ ಮೋದಿ|Modi |Tv9Kannada

(PM Narendra Modi on US trip Ecstatic Indian Americans welcome PM Modi in Washington)

Published On - 6:56 am, Thu, 23 September 21

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು