AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಹೋರಾಡಬೇಕಿರುವುದು ಪಾಕ್ ವಿರುದ್ಧ, ನಮ್ಮ ವಿರುದ್ಧವೇ ಅಲ್ಲ -ಪ್ರಧಾನಿ ಮೋದಿ

ತುಮಕೂರು: ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಅಂತಹವರಿಗೆ ರಕ್ಷಣೆ ನೀಡುವುದು ತಪ್ಪಾ ಎಂಬುದು ಇಲ್ಲಿಯ ಪ್ರಶ್ನೆ. ಪಾಕಿಸ್ತಾನದಿಂದ ಬಂದ ಸಿಖ್ಖರು, ಜೈನರು, ಪಾರ್ಸಿಗಳ ರಕ್ಷಣೆ ಮಾಡುತ್ತಿದ್ದೇವೆ. ಇಂತಹವರ ರಕ್ಷಣೆಗೆ ಮುಂದಾದರೆ ಹೋರಾಟ ಮಾಡ್ತಾರೆ. ಕೆಲವರು ಸಂಸತ್​ ನಿರ್ಣಯದ ವಿರುದ್ಧ ಹೋರಾಡುತ್ತಿದ್ದಾರೆ. ಪಾಕ್​ನಲ್ಲಿ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಹೋರಾಡಿ. ಪಾಕ್​ನ 70 ವರ್ಷಗಳ ಕರಾಳ ಕಾರ್ಯದ ವಿರುದ್ಧ ಹೋರಾಡಿ ಎಂದು ಪ್ರಧಾನಿ ಮೋದಿ ಕಾಂಗ್ರೆಸ್​ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೂರು […]

ಕಾಂಗ್ರೆಸ್​  ಹೋರಾಡಬೇಕಿರುವುದು  ಪಾಕ್  ವಿರುದ್ಧ, ನಮ್ಮ ವಿರುದ್ಧವೇ ಅಲ್ಲ -ಪ್ರಧಾನಿ ಮೋದಿ
ಸಾಧು ಶ್ರೀನಾಥ್​
|

Updated on:Jan 02, 2020 | 3:21 PM

Share

ತುಮಕೂರು: ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಅಂತಹವರಿಗೆ ರಕ್ಷಣೆ ನೀಡುವುದು ತಪ್ಪಾ ಎಂಬುದು ಇಲ್ಲಿಯ ಪ್ರಶ್ನೆ. ಪಾಕಿಸ್ತಾನದಿಂದ ಬಂದ ಸಿಖ್ಖರು, ಜೈನರು, ಪಾರ್ಸಿಗಳ ರಕ್ಷಣೆ ಮಾಡುತ್ತಿದ್ದೇವೆ. ಇಂತಹವರ ರಕ್ಷಣೆಗೆ ಮುಂದಾದರೆ ಹೋರಾಟ ಮಾಡ್ತಾರೆ. ಕೆಲವರು ಸಂಸತ್​ ನಿರ್ಣಯದ ವಿರುದ್ಧ ಹೋರಾಡುತ್ತಿದ್ದಾರೆ. ಪಾಕ್​ನಲ್ಲಿ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಹೋರಾಡಿ. ಪಾಕ್​ನ 70 ವರ್ಷಗಳ ಕರಾಳ ಕಾರ್ಯದ ವಿರುದ್ಧ ಹೋರಾಡಿ ಎಂದು ಪ್ರಧಾನಿ ಮೋದಿ ಕಾಂಗ್ರೆಸ್​ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೂರು ಸಂಕಲ್ಪ ಮಾಡಲು ಪ್ರಧಾನಿ ಮನವಿ: ನಮ್ಮ ಕರ್ತವ್ಯಗಳಿಗೆ ಪುರಾತನ ಸಂಸ್ಕೃತಿ ಜಾಗೃತಗೊಳಿಸೋಣ. ಪ್ರಕೃತಿ, ಪರಿಸರ ಸಂರಕ್ಷಣೆಗೆ ಪ್ಲ್ಯಾಸ್ಟಿಕ್​ ಮುಕ್ತಗೊಳಿಸೋಣ. ಜಲಸಂರಕ್ಷಣೆಗೆ ಜನಜಾಗೃತಿ ಆಂದೋಲನ ಮಾಡೋಣ ಎಂದು ಸಿದ್ಧಲಿಂಗ ಶ್ರೀಗಳ ಮೂಲಕ ಸಂಕಲ್ಪ ಮಾಡಲು  ತುಮಕೂರಿನ ಸಿದ್ಧಗಂಗಾ ಮಠದಲ್ಲಿ ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ಕರೆ ನೀಡಿದರು.

Published On - 3:03 pm, Thu, 2 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More