AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕಲ್ಪತರು ನಾಡಿನಲ್ಲಿ ತ್ರಿವಿಧ ದಾಸೋಹಿ ಗದ್ದುಗೆ ದರ್ಶನ ಪಡೆಯಲಿರೋ ಮೋದಿ

ಬೆಂಗಳೂರು: ಪ್ರಧಾನಿ ಮೋದಿ.. ಕಾಲಿಟ್ಟ ಕಡೆಯೆಲ್ಲಾ ಒಂದ್ ಹವಾ ಇರುತ್ತೆ. ಮೇನಿಯಾ ಇರುತ್ತೆ. ಮೋದಿ ಆಡೋ ಮಾತುಗಳನ್ನು ಕೇಳೋಕೆ ಅದೆಷ್ಟೋ ಜನ ಕಾತರದಿಂದ ಕಾಯ್ತಾ ಇರ್ತಾರೆ.. ಆ ರೀತಿ ಮಾತಲ್ಲೇ ಮೋಡಿ ಮಾಡೋ ಮೋದಿ ರಾಜ್ಯದಲ್ಲಿ ಎರಡು ದಿನದ ಪ್ರವಾಸ ಕೈಗೊಂಡಿದ್ದು, ಇಂದು ತುಮಕೂರಿಗೆ ಬರ್ತಿದ್ದಾರೆ. ಕಲ್ಪತರು ನಾಡಿಗಿಂದು ಪ್ರಧಾನಿ ಮೋದಿ: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಯಾವುದೇ ಅಹಿತಕರ ಘಟನೆಗಳು […]

ಇಂದು ಕಲ್ಪತರು ನಾಡಿನಲ್ಲಿ ತ್ರಿವಿಧ ದಾಸೋಹಿ ಗದ್ದುಗೆ ದರ್ಶನ ಪಡೆಯಲಿರೋ ಮೋದಿ
ಸಾಧು ಶ್ರೀನಾಥ್​
|

Updated on: Jan 02, 2020 | 6:51 AM

Share

ಬೆಂಗಳೂರು: ಪ್ರಧಾನಿ ಮೋದಿ.. ಕಾಲಿಟ್ಟ ಕಡೆಯೆಲ್ಲಾ ಒಂದ್ ಹವಾ ಇರುತ್ತೆ. ಮೇನಿಯಾ ಇರುತ್ತೆ. ಮೋದಿ ಆಡೋ ಮಾತುಗಳನ್ನು ಕೇಳೋಕೆ ಅದೆಷ್ಟೋ ಜನ ಕಾತರದಿಂದ ಕಾಯ್ತಾ ಇರ್ತಾರೆ.. ಆ ರೀತಿ ಮಾತಲ್ಲೇ ಮೋಡಿ ಮಾಡೋ ಮೋದಿ ರಾಜ್ಯದಲ್ಲಿ ಎರಡು ದಿನದ ಪ್ರವಾಸ ಕೈಗೊಂಡಿದ್ದು, ಇಂದು ತುಮಕೂರಿಗೆ ಬರ್ತಿದ್ದಾರೆ.

ಕಲ್ಪತರು ನಾಡಿಗಿಂದು ಪ್ರಧಾನಿ ಮೋದಿ: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಖಾಕಿಯೂ ಸನ್ನದ್ಧವಾಗಿದೆ. ಮಾನವ ರಹಿತ ಏರಿಯಲ್ ಸಿಸ್ಟಮ್ಸ್​ಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಡ್ರೋನ್, ಬಲೂನ್ಸ್, ಏರ್ ಕ್ರಾಫ್ಟ್ ಸಿಸ್ಟಮ್ಸ್​ ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಆದೇಶ ಹೊರಡಿಸಿದ್ದಾರೆ.

ಹಾಗಾದ್ರೆ, ಪ್ರಧಾನಿ ಮೋದಿಯ 2 ದಿನಗಳ ಪ್ರವಾಸದಲ್ಲಿ ಕಾರ್ಯಕ್ರಮದ ಪಟ್ಟಿ ಹೀಗಿದೆ: ಮಧ್ಯಾಹ್ನ 1.20 ಕ್ಕೆ ಯಲಹಂಕ ಏರ್​ಫೋರ್ಸ್ ಸ್ಟೇಷನ್​ಗೆ ಆಗಮನ ಮಧ್ಯಾಹ್ನ 1.25ಕ್ಕೆ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣ ಮಧ್ಯಾಹ್ನ 2 ಗಂಟೆಗೆ ತುಮಕೂರು ವಿವಿ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್ ಮಧ್ಯಾಹ್ನ 2.05ಕ್ಕೆ ಹೆಲಿಪ್ಯಾಡ್​ನಿಂದ ಸಿದ್ಧಗಂಗಾ ಮಠಕ್ಕೆ ಪ್ರಯಾಣ ಮಧ್ಯಾಹ್ನ 2.15 ಕ್ಕೆ ಮಠಕ್ಕೆ ಭೇಟಿ, ‘ಅಕ್ಷರದಾಸೋಹಿ’ ಗದ್ದುಗೆ ದರ್ಶನ ಮಧ್ಯಾಹ್ನ 3.30 ನಿಮಿಷಕ್ಕೆ ಸರ್ಕಾರಿ ಜೂ. ಕಾಲೇಜು ಮೈದಾನಕ್ಕೆ ಆಗಮನ ಕಿಸಾನ್ ಸಮ್ಮಾನ್ ಯೋಜನೆ ಅಡಿ 6 ಕೋಟಿ ರೈತರಿಗೆ ನೇರ ವರ್ಗಾವಣೆ ಅನ್ನದಾತರಿಗೆ ಕೃಷಿ ಕರ್ಮನ್ ಪ್ರಶಸ್ತಿ ವಿತರಣೆ ಮೀನು ಸಾಕಾಣಿಕೆದಾರರ ಸೌಲಭ್ಯಗಳ ವಿತರಣೆ ಸಮಾರಂಭಕ್ಕೆ ಚಾಲನೆ ಸಂಜೆ 5.10ಕ್ಕೆ ಹೆಲಿಪ್ಯಾಡ್​ಗೆ ಆಗಮಿಸಿ ಬೆಂಗಳೂರಿನತ್ತ ಪ್ರಯಾಣ ಸಂಜೆ 5.50 ಕ್ಕೆ ಬೆಂಗಳೂರಿನ ಹೆಚ್ಎಎಲ್ ಏರ್​ಪೋರ್ಟ್​ಗೆ ಆಗಮನ ಸಂಜೆ 5.50 ಕ್ಕೆ ಡಿಆರ್​ಡಿಒ ಯುವ ವಿಜ್ಞಾನಿಗಳ ಕಾರ್ಯಕ್ರಮದಲ್ಲಿ ಭಾಗಿ ಸಂಜೆ 7.05ಕ್ಕೆ ನಿಮಿಷಕ್ಕೆ ಡಿಆರ್​ಡಿಒದಿಂದ ರಸ್ತೆ ಮೂಲಕ ನಿರ್ಗಮನ ಸಂಜೆ 7.20 ಕ್ಕೆ ರಾಜಭವನಕ್ಕೆ ಪ್ರಧಾನಿ ಮೋದಿ ಆಗಮನಿಸಿ ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇದು ಇಂದಿನ ವೇಳಾಪಟ್ಟಿಯಾದ್ರೆ, ನಾಳೆ ಜಿಕೆವಿಕೆ ಮತ್ತು 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ದೆಹಲಿ ಫ್ಲೈಟ್ ಏರಲಿದ್ದಾರೆ. ಮೋದಿ ಪ್ರವಾಸದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಹದ್ದಿನ ಕಣ್ಣಿಟ್ಟಿದೆ.

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ