AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕಲ್ಪತರು ನಾಡಿನಲ್ಲಿ ತ್ರಿವಿಧ ದಾಸೋಹಿ ಗದ್ದುಗೆ ದರ್ಶನ ಪಡೆಯಲಿರೋ ಮೋದಿ

ಬೆಂಗಳೂರು: ಪ್ರಧಾನಿ ಮೋದಿ.. ಕಾಲಿಟ್ಟ ಕಡೆಯೆಲ್ಲಾ ಒಂದ್ ಹವಾ ಇರುತ್ತೆ. ಮೇನಿಯಾ ಇರುತ್ತೆ. ಮೋದಿ ಆಡೋ ಮಾತುಗಳನ್ನು ಕೇಳೋಕೆ ಅದೆಷ್ಟೋ ಜನ ಕಾತರದಿಂದ ಕಾಯ್ತಾ ಇರ್ತಾರೆ.. ಆ ರೀತಿ ಮಾತಲ್ಲೇ ಮೋಡಿ ಮಾಡೋ ಮೋದಿ ರಾಜ್ಯದಲ್ಲಿ ಎರಡು ದಿನದ ಪ್ರವಾಸ ಕೈಗೊಂಡಿದ್ದು, ಇಂದು ತುಮಕೂರಿಗೆ ಬರ್ತಿದ್ದಾರೆ. ಕಲ್ಪತರು ನಾಡಿಗಿಂದು ಪ್ರಧಾನಿ ಮೋದಿ: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಯಾವುದೇ ಅಹಿತಕರ ಘಟನೆಗಳು […]

ಇಂದು ಕಲ್ಪತರು ನಾಡಿನಲ್ಲಿ ತ್ರಿವಿಧ ದಾಸೋಹಿ ಗದ್ದುಗೆ ದರ್ಶನ ಪಡೆಯಲಿರೋ ಮೋದಿ
ಸಾಧು ಶ್ರೀನಾಥ್​
|

Updated on: Jan 02, 2020 | 6:51 AM

Share

ಬೆಂಗಳೂರು: ಪ್ರಧಾನಿ ಮೋದಿ.. ಕಾಲಿಟ್ಟ ಕಡೆಯೆಲ್ಲಾ ಒಂದ್ ಹವಾ ಇರುತ್ತೆ. ಮೇನಿಯಾ ಇರುತ್ತೆ. ಮೋದಿ ಆಡೋ ಮಾತುಗಳನ್ನು ಕೇಳೋಕೆ ಅದೆಷ್ಟೋ ಜನ ಕಾತರದಿಂದ ಕಾಯ್ತಾ ಇರ್ತಾರೆ.. ಆ ರೀತಿ ಮಾತಲ್ಲೇ ಮೋಡಿ ಮಾಡೋ ಮೋದಿ ರಾಜ್ಯದಲ್ಲಿ ಎರಡು ದಿನದ ಪ್ರವಾಸ ಕೈಗೊಂಡಿದ್ದು, ಇಂದು ತುಮಕೂರಿಗೆ ಬರ್ತಿದ್ದಾರೆ.

ಕಲ್ಪತರು ನಾಡಿಗಿಂದು ಪ್ರಧಾನಿ ಮೋದಿ: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ದೆಹಲಿಯಿಂದ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹೀಗಾಗಿ, ಸಿಲಿಕಾನ್ ಸಿಟಿ ಮೋದಿ ಆಗಮನಕ್ಕೆ ಸಜ್ಜಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಖಾಕಿಯೂ ಸನ್ನದ್ಧವಾಗಿದೆ. ಮಾನವ ರಹಿತ ಏರಿಯಲ್ ಸಿಸ್ಟಮ್ಸ್​ಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಡ್ರೋನ್, ಬಲೂನ್ಸ್, ಏರ್ ಕ್ರಾಫ್ಟ್ ಸಿಸ್ಟಮ್ಸ್​ ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಆದೇಶ ಹೊರಡಿಸಿದ್ದಾರೆ.

ಹಾಗಾದ್ರೆ, ಪ್ರಧಾನಿ ಮೋದಿಯ 2 ದಿನಗಳ ಪ್ರವಾಸದಲ್ಲಿ ಕಾರ್ಯಕ್ರಮದ ಪಟ್ಟಿ ಹೀಗಿದೆ: ಮಧ್ಯಾಹ್ನ 1.20 ಕ್ಕೆ ಯಲಹಂಕ ಏರ್​ಫೋರ್ಸ್ ಸ್ಟೇಷನ್​ಗೆ ಆಗಮನ ಮಧ್ಯಾಹ್ನ 1.25ಕ್ಕೆ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣ ಮಧ್ಯಾಹ್ನ 2 ಗಂಟೆಗೆ ತುಮಕೂರು ವಿವಿ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್ ಮಧ್ಯಾಹ್ನ 2.05ಕ್ಕೆ ಹೆಲಿಪ್ಯಾಡ್​ನಿಂದ ಸಿದ್ಧಗಂಗಾ ಮಠಕ್ಕೆ ಪ್ರಯಾಣ ಮಧ್ಯಾಹ್ನ 2.15 ಕ್ಕೆ ಮಠಕ್ಕೆ ಭೇಟಿ, ‘ಅಕ್ಷರದಾಸೋಹಿ’ ಗದ್ದುಗೆ ದರ್ಶನ ಮಧ್ಯಾಹ್ನ 3.30 ನಿಮಿಷಕ್ಕೆ ಸರ್ಕಾರಿ ಜೂ. ಕಾಲೇಜು ಮೈದಾನಕ್ಕೆ ಆಗಮನ ಕಿಸಾನ್ ಸಮ್ಮಾನ್ ಯೋಜನೆ ಅಡಿ 6 ಕೋಟಿ ರೈತರಿಗೆ ನೇರ ವರ್ಗಾವಣೆ ಅನ್ನದಾತರಿಗೆ ಕೃಷಿ ಕರ್ಮನ್ ಪ್ರಶಸ್ತಿ ವಿತರಣೆ ಮೀನು ಸಾಕಾಣಿಕೆದಾರರ ಸೌಲಭ್ಯಗಳ ವಿತರಣೆ ಸಮಾರಂಭಕ್ಕೆ ಚಾಲನೆ ಸಂಜೆ 5.10ಕ್ಕೆ ಹೆಲಿಪ್ಯಾಡ್​ಗೆ ಆಗಮಿಸಿ ಬೆಂಗಳೂರಿನತ್ತ ಪ್ರಯಾಣ ಸಂಜೆ 5.50 ಕ್ಕೆ ಬೆಂಗಳೂರಿನ ಹೆಚ್ಎಎಲ್ ಏರ್​ಪೋರ್ಟ್​ಗೆ ಆಗಮನ ಸಂಜೆ 5.50 ಕ್ಕೆ ಡಿಆರ್​ಡಿಒ ಯುವ ವಿಜ್ಞಾನಿಗಳ ಕಾರ್ಯಕ್ರಮದಲ್ಲಿ ಭಾಗಿ ಸಂಜೆ 7.05ಕ್ಕೆ ನಿಮಿಷಕ್ಕೆ ಡಿಆರ್​ಡಿಒದಿಂದ ರಸ್ತೆ ಮೂಲಕ ನಿರ್ಗಮನ ಸಂಜೆ 7.20 ಕ್ಕೆ ರಾಜಭವನಕ್ಕೆ ಪ್ರಧಾನಿ ಮೋದಿ ಆಗಮನಿಸಿ ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇದು ಇಂದಿನ ವೇಳಾಪಟ್ಟಿಯಾದ್ರೆ, ನಾಳೆ ಜಿಕೆವಿಕೆ ಮತ್ತು 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ದೆಹಲಿ ಫ್ಲೈಟ್ ಏರಲಿದ್ದಾರೆ. ಮೋದಿ ಪ್ರವಾಸದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಹದ್ದಿನ ಕಣ್ಣಿಟ್ಟಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ