AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ

ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ
ಆರೋಪಿಗಳಿಂದ ಪೊಲೀಸರು ವಶ ಪಡಿಸಿಕೊಂಡ ಮೊಬೈಲ್ ಮತ್ತು ಹಣ
ಆಯೇಷಾ ಬಾನು
|

Updated on: Jan 25, 2021 | 12:43 PM

Share

ಬೆಂಗಳೂರು: OLX ನಲ್ಲಿ ವಸ್ತು ಮಾರಾಟ ಮಾಡುತ್ತಿದ್ದವರ ಬಳಿ ದರೋಡೆ ಮಾಡ್ತಿದ್ದ ಮೂವರನ್ನು ಬೆಂಗಳೂರಿನ ಕೆ.ಆರ್​.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮೊದಲಿಗೆ ಈ ದರೋಡೆಕೋರರು OLXನಲ್ಲಿ ವಸ್ತುಗಳನ್ನು ಸರ್ಚ್ ಮಾಡುತ್ತಾರೆ. ಬಳಿಕ ಪ್ಲಾನ್ ಮಾಡಿ ವಸ್ತು ಖರೀದಿಸುವ ನೆಪದಲ್ಲಿ ವಸ್ತು ಮಾರಾಟಕ್ಕೆ ಮುಂದಾಗಿರುವ ವ್ಯಕ್ತಿಗೆ ಕರೆ ಮಾಡಿ ವಸ್ತು ನೋಡಬೇಕೆಂದು ಒಂದು ಲೊಕೇಷನ್ ಫಿಕ್ಸ್ ಮಾಡಿ ಕರೆಸಿಕೊಳ್ಳುತ್ತಿದ್ದರು. ಬಳಿಕ ವ್ಯಕ್ತಿ ಬಂದ ಮೇಲೆ ವಸ್ತು ನೋಡುವಂತೆ ನಾಟಕವಾಡಿ ಪಕ್ಕದ ಏರಿಯಾದಲ್ಲೇ ಮನೆ ಇದೆ ಅಲ್ಲೇ ಹಣ ಕೊಡೋದಾಗಿ ಕರೆದುಕೊಂಡು ಹೋಗಿ ಗುಂಪು ಗುಂಪಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹಣ ದೋಚುತ್ತಿದ್ದರು. ಇದೇ ರೀತಿ ಜನವರಿ 23ರಂದು ವ್ಯಕ್ತಿಯೋರ್ವನಿಂದ ದರೋಡೆ ಮಾಡಿದ್ದಾರೆ.

ಮೊಬೈಲ್ ಖರೀದಿಸುವ ನೆಪ ಮಾಡಿ ಚಿಕ್ಕಪೇಟೆ ಮೆಟ್ರೋ ಸ್ಟೇಷನ್​ಗೆ ಕರೆಸಿಕೊಂಡು ನಂತರ ಅಮ್ಮನ ಬಳಿ ಹಣ ಇದೆ ಕೊಡ್ತೀನಿ ಅಂತ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಲ್ವರು ಜೊತೆಗೂಡಿ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದಾರೆ. ಈ ಬಗ್ಗೆ ದರೋಡೆಗೊಳಗಾದ ವ್ಯಕ್ತಿ ಕೆ.ಆರ್. ಮಾರುಕಟ್ಟೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾದ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸೇನಾ ಅಧಿಕಾರಿಗಳ ಹೆಸರು ಹೇಳಿ OLX‌ನಲ್ಲಿ ವಂಚನೆ ಮಾಡುತ್ತಿದ್ದ ಖದೀಮರು ಅರೆಸ್ಟ್

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ