AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ

ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ
ಆರೋಪಿಗಳಿಂದ ಪೊಲೀಸರು ವಶ ಪಡಿಸಿಕೊಂಡ ಮೊಬೈಲ್ ಮತ್ತು ಹಣ
ಆಯೇಷಾ ಬಾನು
|

Updated on: Jan 25, 2021 | 12:43 PM

Share

ಬೆಂಗಳೂರು: OLX ನಲ್ಲಿ ವಸ್ತು ಮಾರಾಟ ಮಾಡುತ್ತಿದ್ದವರ ಬಳಿ ದರೋಡೆ ಮಾಡ್ತಿದ್ದ ಮೂವರನ್ನು ಬೆಂಗಳೂರಿನ ಕೆ.ಆರ್​.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮೊದಲಿಗೆ ಈ ದರೋಡೆಕೋರರು OLXನಲ್ಲಿ ವಸ್ತುಗಳನ್ನು ಸರ್ಚ್ ಮಾಡುತ್ತಾರೆ. ಬಳಿಕ ಪ್ಲಾನ್ ಮಾಡಿ ವಸ್ತು ಖರೀದಿಸುವ ನೆಪದಲ್ಲಿ ವಸ್ತು ಮಾರಾಟಕ್ಕೆ ಮುಂದಾಗಿರುವ ವ್ಯಕ್ತಿಗೆ ಕರೆ ಮಾಡಿ ವಸ್ತು ನೋಡಬೇಕೆಂದು ಒಂದು ಲೊಕೇಷನ್ ಫಿಕ್ಸ್ ಮಾಡಿ ಕರೆಸಿಕೊಳ್ಳುತ್ತಿದ್ದರು. ಬಳಿಕ ವ್ಯಕ್ತಿ ಬಂದ ಮೇಲೆ ವಸ್ತು ನೋಡುವಂತೆ ನಾಟಕವಾಡಿ ಪಕ್ಕದ ಏರಿಯಾದಲ್ಲೇ ಮನೆ ಇದೆ ಅಲ್ಲೇ ಹಣ ಕೊಡೋದಾಗಿ ಕರೆದುಕೊಂಡು ಹೋಗಿ ಗುಂಪು ಗುಂಪಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹಣ ದೋಚುತ್ತಿದ್ದರು. ಇದೇ ರೀತಿ ಜನವರಿ 23ರಂದು ವ್ಯಕ್ತಿಯೋರ್ವನಿಂದ ದರೋಡೆ ಮಾಡಿದ್ದಾರೆ.

ಮೊಬೈಲ್ ಖರೀದಿಸುವ ನೆಪ ಮಾಡಿ ಚಿಕ್ಕಪೇಟೆ ಮೆಟ್ರೋ ಸ್ಟೇಷನ್​ಗೆ ಕರೆಸಿಕೊಂಡು ನಂತರ ಅಮ್ಮನ ಬಳಿ ಹಣ ಇದೆ ಕೊಡ್ತೀನಿ ಅಂತ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಲ್ವರು ಜೊತೆಗೂಡಿ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದಾರೆ. ಈ ಬಗ್ಗೆ ದರೋಡೆಗೊಳಗಾದ ವ್ಯಕ್ತಿ ಕೆ.ಆರ್. ಮಾರುಕಟ್ಟೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾದ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸೇನಾ ಅಧಿಕಾರಿಗಳ ಹೆಸರು ಹೇಳಿ OLX‌ನಲ್ಲಿ ವಂಚನೆ ಮಾಡುತ್ತಿದ್ದ ಖದೀಮರು ಅರೆಸ್ಟ್

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು