OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ

ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ
ಆರೋಪಿಗಳಿಂದ ಪೊಲೀಸರು ವಶ ಪಡಿಸಿಕೊಂಡ ಮೊಬೈಲ್ ಮತ್ತು ಹಣ
Follow us
|

Updated on: Jan 25, 2021 | 12:43 PM

ಬೆಂಗಳೂರು: OLX ನಲ್ಲಿ ವಸ್ತು ಮಾರಾಟ ಮಾಡುತ್ತಿದ್ದವರ ಬಳಿ ದರೋಡೆ ಮಾಡ್ತಿದ್ದ ಮೂವರನ್ನು ಬೆಂಗಳೂರಿನ ಕೆ.ಆರ್​.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮೊದಲಿಗೆ ಈ ದರೋಡೆಕೋರರು OLXನಲ್ಲಿ ವಸ್ತುಗಳನ್ನು ಸರ್ಚ್ ಮಾಡುತ್ತಾರೆ. ಬಳಿಕ ಪ್ಲಾನ್ ಮಾಡಿ ವಸ್ತು ಖರೀದಿಸುವ ನೆಪದಲ್ಲಿ ವಸ್ತು ಮಾರಾಟಕ್ಕೆ ಮುಂದಾಗಿರುವ ವ್ಯಕ್ತಿಗೆ ಕರೆ ಮಾಡಿ ವಸ್ತು ನೋಡಬೇಕೆಂದು ಒಂದು ಲೊಕೇಷನ್ ಫಿಕ್ಸ್ ಮಾಡಿ ಕರೆಸಿಕೊಳ್ಳುತ್ತಿದ್ದರು. ಬಳಿಕ ವ್ಯಕ್ತಿ ಬಂದ ಮೇಲೆ ವಸ್ತು ನೋಡುವಂತೆ ನಾಟಕವಾಡಿ ಪಕ್ಕದ ಏರಿಯಾದಲ್ಲೇ ಮನೆ ಇದೆ ಅಲ್ಲೇ ಹಣ ಕೊಡೋದಾಗಿ ಕರೆದುಕೊಂಡು ಹೋಗಿ ಗುಂಪು ಗುಂಪಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹಣ ದೋಚುತ್ತಿದ್ದರು. ಇದೇ ರೀತಿ ಜನವರಿ 23ರಂದು ವ್ಯಕ್ತಿಯೋರ್ವನಿಂದ ದರೋಡೆ ಮಾಡಿದ್ದಾರೆ.

ಮೊಬೈಲ್ ಖರೀದಿಸುವ ನೆಪ ಮಾಡಿ ಚಿಕ್ಕಪೇಟೆ ಮೆಟ್ರೋ ಸ್ಟೇಷನ್​ಗೆ ಕರೆಸಿಕೊಂಡು ನಂತರ ಅಮ್ಮನ ಬಳಿ ಹಣ ಇದೆ ಕೊಡ್ತೀನಿ ಅಂತ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಲ್ವರು ಜೊತೆಗೂಡಿ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದಾರೆ. ಈ ಬಗ್ಗೆ ದರೋಡೆಗೊಳಗಾದ ವ್ಯಕ್ತಿ ಕೆ.ಆರ್. ಮಾರುಕಟ್ಟೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾದ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸೇನಾ ಅಧಿಕಾರಿಗಳ ಹೆಸರು ಹೇಳಿ OLX‌ನಲ್ಲಿ ವಂಚನೆ ಮಾಡುತ್ತಿದ್ದ ಖದೀಮರು ಅರೆಸ್ಟ್

ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್