AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ

ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ
ಆರೋಪಿಗಳಿಂದ ಪೊಲೀಸರು ವಶ ಪಡಿಸಿಕೊಂಡ ಮೊಬೈಲ್ ಮತ್ತು ಹಣ
ಆಯೇಷಾ ಬಾನು
|

Updated on: Jan 25, 2021 | 12:43 PM

Share

ಬೆಂಗಳೂರು: OLX ನಲ್ಲಿ ವಸ್ತು ಮಾರಾಟ ಮಾಡುತ್ತಿದ್ದವರ ಬಳಿ ದರೋಡೆ ಮಾಡ್ತಿದ್ದ ಮೂವರನ್ನು ಬೆಂಗಳೂರಿನ ಕೆ.ಆರ್​.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಕಿಲಾಡಿಗಳಿಗೆ OLX ಬಳಕೆದಾರರೇ ಟಾರ್ಗೆಟ್. OLXನಲ್ಲಿ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಅವರ ಬಳಿಯೇ ದರೋಡೆ ಆಡುತ್ತಿದ್ದರು. ಸದ್ಯ ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮೊದಲಿಗೆ ಈ ದರೋಡೆಕೋರರು OLXನಲ್ಲಿ ವಸ್ತುಗಳನ್ನು ಸರ್ಚ್ ಮಾಡುತ್ತಾರೆ. ಬಳಿಕ ಪ್ಲಾನ್ ಮಾಡಿ ವಸ್ತು ಖರೀದಿಸುವ ನೆಪದಲ್ಲಿ ವಸ್ತು ಮಾರಾಟಕ್ಕೆ ಮುಂದಾಗಿರುವ ವ್ಯಕ್ತಿಗೆ ಕರೆ ಮಾಡಿ ವಸ್ತು ನೋಡಬೇಕೆಂದು ಒಂದು ಲೊಕೇಷನ್ ಫಿಕ್ಸ್ ಮಾಡಿ ಕರೆಸಿಕೊಳ್ಳುತ್ತಿದ್ದರು. ಬಳಿಕ ವ್ಯಕ್ತಿ ಬಂದ ಮೇಲೆ ವಸ್ತು ನೋಡುವಂತೆ ನಾಟಕವಾಡಿ ಪಕ್ಕದ ಏರಿಯಾದಲ್ಲೇ ಮನೆ ಇದೆ ಅಲ್ಲೇ ಹಣ ಕೊಡೋದಾಗಿ ಕರೆದುಕೊಂಡು ಹೋಗಿ ಗುಂಪು ಗುಂಪಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹಣ ದೋಚುತ್ತಿದ್ದರು. ಇದೇ ರೀತಿ ಜನವರಿ 23ರಂದು ವ್ಯಕ್ತಿಯೋರ್ವನಿಂದ ದರೋಡೆ ಮಾಡಿದ್ದಾರೆ.

ಮೊಬೈಲ್ ಖರೀದಿಸುವ ನೆಪ ಮಾಡಿ ಚಿಕ್ಕಪೇಟೆ ಮೆಟ್ರೋ ಸ್ಟೇಷನ್​ಗೆ ಕರೆಸಿಕೊಂಡು ನಂತರ ಅಮ್ಮನ ಬಳಿ ಹಣ ಇದೆ ಕೊಡ್ತೀನಿ ಅಂತ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ನಾಲ್ವರು ಜೊತೆಗೂಡಿ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದಾರೆ. ಈ ಬಗ್ಗೆ ದರೋಡೆಗೊಳಗಾದ ವ್ಯಕ್ತಿ ಕೆ.ಆರ್. ಮಾರುಕಟ್ಟೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾದ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸೇನಾ ಅಧಿಕಾರಿಗಳ ಹೆಸರು ಹೇಳಿ OLX‌ನಲ್ಲಿ ವಂಚನೆ ಮಾಡುತ್ತಿದ್ದ ಖದೀಮರು ಅರೆಸ್ಟ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್