AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿನಿ ಶವವಾಗಿ ಪತ್ತೆ.. ಆಸ್ಪತ್ರೆಯ ರಿಸೆಪ್ಷನಿಸ್ಟ್ ಯುವಕ ಅರೆಸ್ಟ್​

ನಾಪತ್ತೆಯಾಗಿದ್ದ ನರ್ಸಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾಣೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾರೆ. ಜಿಲ್ಲೆಯ ಬೀಳಗಿ ತಾಲೂಕಿನ ಕಾತರಕಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ಶವ ಪತ್ತೆಯಾಗಿದೆ.

ಕಾಣೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿನಿ ಶವವಾಗಿ ಪತ್ತೆ.. ಆಸ್ಪತ್ರೆಯ ರಿಸೆಪ್ಷನಿಸ್ಟ್ ಯುವಕ ಅರೆಸ್ಟ್​
ಜ್ಯೋತಿ ಬಾಗವ್ವಗೋಳ ಮತ್ತು ಹನೀಫ್ ಬೀಳಗಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 17, 2021 | 11:40 AM

Share

ಬಾಗಲಕೋಟೆ: ನಾಪತ್ತೆಯಾಗಿದ್ದ ನರ್ಸಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾಣೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾರೆ. ಜಿಲ್ಲೆಯ ಬೀಳಗಿ ತಾಲೂಕಿನ ಕಾತರಕಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ಶವ ಪತ್ತೆಯಾಗಿದೆ. ಜ್ಯೋತಿ ಬಾಗವ್ವಗೋಳ(22) ನಾಪತ್ತೆಯಾಗಿ ಶವವಾಗಿ ಸಿಕ್ಕಿರುವ ನರ್ಸಿಂಗ್ ವಿದ್ಯಾರ್ಥಿನಿ. ಈ ಸಂಬಂಧ ಆರೋಪಿ ಹನೀಫ್ ಬೀಳಗಿ (23) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮುಧೋಳ ತಾಲ್ಲೂಕಿನ ವಜ್ರಮಟ್ಟಿ ಗ್ರಾಮದ ನಿವಾಸಿ ಜ್ಯೋತಿ ಬಾಗವ್ವಗೋಳ ಮತ್ತು ಬಾಗಲಕೋಟೆ ತಾಲ್ಲೂಕಿನ ಕಲಾದಗಿ ಗ್ರಾಮದ ನಿವಾಸಿ ಹನೀಫ್ ಬೀಳಗಿ ಇಬ್ಬರೂ ಬಂದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಜ್ಯೋತಿ ವಿದ್ಯಾಭ್ಯಾಸದ ಜೊತೆಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದಳು. ಅದೇ ಆಸ್ಪತ್ರೆಯಲ್ಲಿ ಹನೀಫ್ ರಿಸೆಪ್ಷನಿಸ್ಟ್ ಆಗಿದ್ದ.

ಇದೆ ವೇಳೆ ಇಬ್ಬರಿಗೂ ಪ್ರೀತಿ ಶುರುವಾಗಿತ್ತು. ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಪ್ರಿಯಕರ ಹನೀಫ್​ಗೆ ಜ್ಯೋತಿ ಬೇರೊಬ್ಬರ ಜೊತೆ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿತ್ತು. ಹೀಗಾಗಿ ಆತ ಜ್ಯೋತಿಯನ್ನು ನಂಬಿಸಿ ಘಟಪ್ರಭಾ ನದಿ ಬಳಿ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿ ನದಿ ಪಕ್ಕ ಎಸೆದಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಸಂಬಂಧ ಹನೀಫ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ‌ ಮಾಡಿರೋದಾಗಿ ಹನೀಫ್​ ತಪ್ಪೊಪ್ಪಿಗೆ, ಲವ್ ಜಿಹಾದ್? ಇನ್ನು ಫೆಬ್ರವರಿ 13 ರಿಂದ ಜ್ಯೋತಿ ನಾಪತ್ತೆಯಾಗಿದ್ದಳು. ಹೀಗಾಗಿ ಫೆಬ್ರವರಿ 15 ರಂದು ಬಾಗಲಕೋಟೆ ನಗರ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಜ್ಯೋತಿ ಮೊಬೈಲ್‌ ಕೊನೆ ಕರೆ ಜಾಡು ಹಿಡಿದು ತನಿಖೆ ಶುರು ಮಾಡಿದ್ದ ಪೊಲೀಸರು ಕರೆಯಾಧಾರದ ಮೇಲೆ ಹನೀಫ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ವಿಚಾರಣೆ ವೇಳೆ ಕೊಲೆ‌ ಮಾಡಿರೋದಾಗಿ ಹನೀಫ್​ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಇದು ಲವ್ ಜಿಹಾದ್ ಎಂದು ಜ್ಯೋತಿ ಕೆಲ ಸಂಬಂಧಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿಯಿಂದ ಚಿನ್ನದ ಪದಕ ಪಡೆದ ವಿಜಯಪುರ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಮನ್ನಾ! ವ್ಯಾಸಂಗ ಉಚಿತ; ಉಪನ್ಯಾಸಕಿ ಹುದ್ದೆ ಖಚಿತ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​